ಎಜಿಆರ್ ಲೆಕ್ಕಹಾಕಿದ್ದು ಸರಿಯಾಗಿಲ್ಲ ಎಂದು ವಿಐಎಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆದರೆ, ಕಂಪನಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ‘ಎಜಿಆರ್ ಬಾಕಿ, ತರಂಗಾಂತರಕ್ಕೆ ಸಂಬಂಧಿಸಿದ ಪಾವತಿಗೆ ಸಾಕಷ್ಟು ಕಾಲಾವಕಾಶ, ಸೇವಾ ವೆಚ್ಚಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಶುಲ್ಕ ನಿಗದಿ ಮಾಡುವ ವಿಚಾರದಲ್ಲಿ ಸ್ಪಷ್ಟತೆ ಇಲ್ಲದಿರುವಾಗ ಹೂಡಿಕೆದಾರರು ಕಂಪನಿಯಲ್ಲಿ ಹಣ ಹೂಡಿಕೆ ಮಾಡಲು ಸಿದ್ಧರಿಲ್ಲ’ ಎಂದು ಬಿರ್ಲಾ ಅವರು ಪತ್ರದಲ್ಲಿ ಬರೆದಿದ್ದಾರೆ. ಅವರು ಕಂಪನಿಯಲ್ಲಿ ಶೇಕಡ 27ರಷ್ಟು ಷೇರು ಹೊಂದಿದ್ದಾರೆ.