ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ನಾವೀನ್ಯತಾ ಕೇಂದ್ರದ ಮೊದಲ ಅಧ್ಯಕ್ಷರನ್ನಾಗಿ ಇನ್ಫೊಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಅವರನ್ನು ನೇಮಕ ಮಾಡಲಾಗಿದೆ.
ನಾವೀನ್ಯತಾ ಕೇಂದ್ರವನ್ನು ಆರಂಭಿಸುವುದಾಗಿ ಆರ್ಬಿಐ ಆಗಸ್ಟ್ನಲ್ಲಿ ಪ್ರಕಟಿಸಿತ್ತು. ತಂತ್ರಜ್ಞಾನವನ್ನು ಬಳಸಿಕೊಂಡು ಹಣಕಾಸು ವಲಯದಲ್ಲಿ ಹೊಸತನವನ್ನು ತರುವುದು ಈ ಕೇಂದ್ರದ ಉದ್ದೇಶ.
ಹಣಕಾಸು ಸೇವೆಗಳು ಮತ್ತು ಹಣಕಾಸು ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸುವ ವ್ಯವಸ್ಥೆಯೊಂದನ್ನು ಸೃಷ್ಟಿಸುವುದು ನಾವೀನ್ಯತಾ ಕೇಂದ್ರ ಸ್ಥಾಪನೆಯ ಉದ್ದೇಶ. ಇದು ಆರ್ಥಿಕ ಒಳಗೊಳ್ಳುವಿಕೆಯನ್ನು ಪ್ರೋತ್ಸಾಹಿಸುವ ಕೆಲಸ ಕೂಡ ಮಾಡಲಿದೆ.