ನವದೆಹಲಿ: ನಾಲ್ಕು ಕಾರ್ಮಿಕ ಸಂಹಿತೆಗಳ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಮುಂದಡಿ ಇರಿಸಲಿದ್ದು, ಇವು ಇನ್ನು ಎರಡು ತಿಂಗಳಲ್ಲಿ ಜಾರಿಗೆ ಬರುವ ಸಾಧ್ಯತೆ ಇದೆ. ಸಂಹಿತೆಗಳು ಜಾರಿಗೆ ಬಂದರೆ, ನೌಕರರ ಕೈಗೆ ಸಿಗುವ ಸಂಬಳದ ಮೊತ್ತ ಕಡಿಮೆ ಆಗಲಿದ್ದು, ಭವಿಷ್ಯನಿಧಿ ಖಾತೆಗೆ (ಪಿ.ಎಫ್.) ಜಮಾ ಆಗುವ ಮೊತ್ತ ಹೆಚ್ಚಳವಾಗಲಿದೆ.