ಈ ನಾಲ್ಕು ಸಂಹಿತೆಗಳನ್ನು ಅನುಷ್ಠಾನಕ್ಕೆ ತಂದರೆ ನೌಕರರಿಗೆ ಕೈಗೆ ಸಿಗುವ ವೇತನದ ಮೊತ್ತ ಕಡಿಮೆ ಆಗುತ್ತದೆ, ಕಂಪನಿಗಳು ನೌಕರರ ಪಿ.ಎಫ್. ಖಾತೆಗೆ ಹೆಚ್ಚಿನ ಮೊತ್ತವನ್ನು ಕೊಡುಗೆಯಾಗಿ ನೀಡಬೇಕಾಗುತ್ತದೆ. ‘ಕೇಂದ್ರ ಕಾರ್ಮಿಕ ಸಚಿವಾಲಯವು ನಿಯಮಗಳನ್ನು ರೂಪಿಸಿ ಆಗಿದೆ. ಆದರೆ ರಾಜ್ಯಗಳ ಕಡೆಯಿಂದ ಈ ಕೆಲಸ ವೇಗವಾಗಿ ಆಗುತ್ತಿಲ್ಲ. ಅಲ್ಲದೆ, ರಾಜಕೀಯ ಕಾರಣಗಳಿಂದಾಗಿ ಈ ಸಂಹಿತೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಸರ್ಕಾರಕ್ಕೆ ಹೆಚ್ಚಿನ ಆಸಕ್ತಿ ಇಲ್ಲ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.