<p><strong>ನವದೆಹಲಿ</strong>: ಹೊಸ ನೇಮಕಾತಿಗಳಿಗೆ ಉತ್ತೇಜನ ನೀಡಲು ಆರಂಭಿಸಿದ ಆತ್ಮನಿರ್ಭರ ಭಾರತ ರೋಜ್ಗಾರ್ ಯೋಜನೆಯನ್ನು (ಎಬಿಆರ್ವೈ),ಕೋವಿಡ್ ಸಾಂಕ್ರಾಮಿಕದ ಕಾರಣದಿಂದಾಗಿ ಮುಂದಿನ ವರ್ಷದ ಮಾರ್ಚ್ವರೆಗೂ ವಿಸ್ತರಿಸುವ ಕುರಿತು ಕಾರ್ಮಿಕ ಮತ್ತು ಉದ್ಯೊಗ ಸಚಿವಾಲಯ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.</p>.<p>ಈ ಯೋಜನೆಯು ಜೂನ್ 30ಕ್ಕೆ ಅಂತ್ಯವಾಗಬೇಕಿದೆ. ಈ ಯೋಜನೆಯ ಅಡಿ, ₹ 15 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುವ, ಹೊಸದಾಗಿ ನೇಮಕಗೊಂಡ ಕಾರ್ಮಿಕರ ಪಿ.ಎಫ್. ಖಾತೆಗಳಿಗೆ ಎರಡು ವರ್ಷಗಳ ಅವಧಿಗೆ ಕಾರ್ಮಿಕರ ಪಾಲಿನ ಶೇಕಡ 12ರಷ್ಟು ಮತ್ತು ಉದ್ಯೋಗದಾತರ ಪಾಲಿನ ಶೇ 12ರಷ್ಟನ್ನು (ಒಟ್ಟು ಶೇ 24ರಷ್ಟು) ಕೇಂದ್ರ ಸರ್ಕಾರವೇ ಪಾವತಿಸುತ್ತದೆ.</p>.<p>ಯೋಜನೆಯ ಅವಧಿಯನ್ನು ಮಾರ್ಚ್ 2022ರವರೆಗೆ ವಿಸ್ತರಿಸುವುದಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದ ಟಿಪ್ಪಣಿಯೊಂದನ್ನು ಸಿದ್ಧಪಡಿಸುವ ಪ್ರಕ್ರಿಯೆಯನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಕೈಗೊಂಡಿದೆ ಎಂದು ಮೂಲಗಳು ಹೇಳಿವೆ.</p>.<p>ಇದುವರೆಗೆ ಹೊಸದಾಗಿ ನೇಮಕ ಆಗಿರುವ 21 ಲಕ್ಷ ಕಾರ್ಮಿಕರಿಗೆ ಈ ಯೋಜನೆಯ ಅಡಿ ಪ್ರಯೋಜನ ಲಭಿಸಿದೆ. ಇದು ಸರ್ಕಾರದ, 58.5 ಲಕ್ಷ ಕಾರ್ಮಿಕರಿಗೆ ಪ್ರಯೋಜನ ಒದಗಿಸುವ ಗುರಿಗಿಂತಲೂ ಕಡಿಮೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಮುಂದಿನ ವರ್ಷದ ಮಾರ್ಚ್ವರೆಗೂ ಯೋಜನೆಯನ್ನು ವಿಸ್ತರಿಸಲು ಸಚಿವಾಲಯ ಒತ್ತು ನೀಡಲಿದೆ ಎಂದು ಮೂಲಗಳು ಹೇಳಿವೆ.</p>.<p>2020ರಿಂದ 2023ರ ಅವಧಿಗೆ ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವು ₹ 22,810 ಕೋಟಿ ಮೀಸಲಿಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹೊಸ ನೇಮಕಾತಿಗಳಿಗೆ ಉತ್ತೇಜನ ನೀಡಲು ಆರಂಭಿಸಿದ ಆತ್ಮನಿರ್ಭರ ಭಾರತ ರೋಜ್ಗಾರ್ ಯೋಜನೆಯನ್ನು (ಎಬಿಆರ್ವೈ),ಕೋವಿಡ್ ಸಾಂಕ್ರಾಮಿಕದ ಕಾರಣದಿಂದಾಗಿ ಮುಂದಿನ ವರ್ಷದ ಮಾರ್ಚ್ವರೆಗೂ ವಿಸ್ತರಿಸುವ ಕುರಿತು ಕಾರ್ಮಿಕ ಮತ್ತು ಉದ್ಯೊಗ ಸಚಿವಾಲಯ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.</p>.<p>ಈ ಯೋಜನೆಯು ಜೂನ್ 30ಕ್ಕೆ ಅಂತ್ಯವಾಗಬೇಕಿದೆ. ಈ ಯೋಜನೆಯ ಅಡಿ, ₹ 15 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುವ, ಹೊಸದಾಗಿ ನೇಮಕಗೊಂಡ ಕಾರ್ಮಿಕರ ಪಿ.ಎಫ್. ಖಾತೆಗಳಿಗೆ ಎರಡು ವರ್ಷಗಳ ಅವಧಿಗೆ ಕಾರ್ಮಿಕರ ಪಾಲಿನ ಶೇಕಡ 12ರಷ್ಟು ಮತ್ತು ಉದ್ಯೋಗದಾತರ ಪಾಲಿನ ಶೇ 12ರಷ್ಟನ್ನು (ಒಟ್ಟು ಶೇ 24ರಷ್ಟು) ಕೇಂದ್ರ ಸರ್ಕಾರವೇ ಪಾವತಿಸುತ್ತದೆ.</p>.<p>ಯೋಜನೆಯ ಅವಧಿಯನ್ನು ಮಾರ್ಚ್ 2022ರವರೆಗೆ ವಿಸ್ತರಿಸುವುದಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದ ಟಿಪ್ಪಣಿಯೊಂದನ್ನು ಸಿದ್ಧಪಡಿಸುವ ಪ್ರಕ್ರಿಯೆಯನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಕೈಗೊಂಡಿದೆ ಎಂದು ಮೂಲಗಳು ಹೇಳಿವೆ.</p>.<p>ಇದುವರೆಗೆ ಹೊಸದಾಗಿ ನೇಮಕ ಆಗಿರುವ 21 ಲಕ್ಷ ಕಾರ್ಮಿಕರಿಗೆ ಈ ಯೋಜನೆಯ ಅಡಿ ಪ್ರಯೋಜನ ಲಭಿಸಿದೆ. ಇದು ಸರ್ಕಾರದ, 58.5 ಲಕ್ಷ ಕಾರ್ಮಿಕರಿಗೆ ಪ್ರಯೋಜನ ಒದಗಿಸುವ ಗುರಿಗಿಂತಲೂ ಕಡಿಮೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಮುಂದಿನ ವರ್ಷದ ಮಾರ್ಚ್ವರೆಗೂ ಯೋಜನೆಯನ್ನು ವಿಸ್ತರಿಸಲು ಸಚಿವಾಲಯ ಒತ್ತು ನೀಡಲಿದೆ ಎಂದು ಮೂಲಗಳು ಹೇಳಿವೆ.</p>.<p>2020ರಿಂದ 2023ರ ಅವಧಿಗೆ ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವು ₹ 22,810 ಕೋಟಿ ಮೀಸಲಿಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>