ಐಸಿಐಸಿಐ ಬ್ಯಾಂಕ್ ನೇತೃತ್ವದ 24 ಬ್ಯಾಂಕ್ಗಳ ಒಕ್ಕೂಟಕ್ಕೆ ವಂಚನೆ ಎಸಗಿದ ಆರೋಪದ ಅಡಿಯಲ್ಲಿ ಎಬಿಜಿ ಶಿಪ್ಯಾರ್ಡ್ ಲಿಮಿಡೆಟ್, ಅದರ ಮಾಜಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಿಷಿ ಕಮಲೇಶ್ ಅಗರ್ವಾಲ್ ವಿರುದ್ಧ ಕೇಂದ್ರೀಯ ತನಿಖಾ ದಳವು (ಸಿಬಿಐ) ಈಚೆಗೆ ಪ್ರಕರಣ ದಾಖಲಿಸಿಕೊಂಡಿದೆ. ಎಬಿಜಿ ಶಿಪ್ಯಾರ್ಡ್ ಕಡೆಯಿಂದ ಆಗಿರುವ ವಂಚನೆಯ ಮೊತ್ತವು ನೀರವ್ ಮೋದಿ ಮತ್ತು ಅವನ ಮಾವ ಮೆಹುಲ್ ಚೋಕ್ಸಿ ಎಸಗಿದ ವಂಚನೆಯ ಮೊತ್ತಕ್ಕಿಂತ ದೊಡ್ಡದು. ಇವರಿಬ್ಬರು ಜೊತೆಯಾಗಿ ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ಅಂದಾಜು ₹ 14 ಸಾವಿರ ಕೋಟಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.