<p><strong>ಭೋಪಾಲ್:</strong> ಕೇಂದ್ರ ಸರ್ಕಾರವು ಮೂರು ತಿಂಗಳೊಳಗೆ ಕಮಿಷನ್ ಮೊತ್ತ ಹೆಚ್ಚಳ ಸೇರಿ ಎಲ್ಪಿಜಿ ವಿತರಕರ ವಿವಿಧ ಬೇಡಿಕೆ ಈಡೇರಿಸಬೇಕಿದೆ. ಇಲ್ಲವಾದರೆ ದೇಶದಾದ್ಯಂತ ಅನಿರ್ದಿಷ್ಟಾವಧಿವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಎಲ್ಪಿಜಿ ವಿತರಕರ ಸಂಘ ಗಡುವು ನೀಡಿದೆ.</p>.<p>ಭೋಪಾಲ್ನಲ್ಲಿ ಶನಿವಾರ ಸಂಘದ ಸಮಾವೇಶ ಆಯೋಜಿಸಲಾಗಿತ್ತು. ವಿವಿಧ ರಾಜ್ಯದ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಸಮಾವೇಶದಲ್ಲಿ ಮಂಡಿಸಿದ ಹೋರಾಟದ ನಿರ್ಣಯಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಂಘದ ಅಧ್ಯಕ್ಷ ಬಿ.ಎಸ್. ಶರ್ಮಾ ತಿಳಿಸಿದ್ದಾರೆ.</p>.<p>ವಿತರಕರ ಬೇಡಿಕೆ ಈಡೇರಿಸುವಂತೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ. ಪ್ರಸ್ತುತ ಕಡಿಮೆ ಕಮಿಷನ್ ನೀಡಲಾಗುತ್ತಿದೆ. ಇದರಿಂದ ಕಾರ್ಯಾಚರಣೆಯ ವೆಚ್ಚವನ್ನು ಸರಿದೂಗಿಸಲು ಆಗುವುದಿಲ್ಲ. ಕಮಿಷನ್ ಮೊತ್ತವನ್ನು ಕನಿಷ್ಠ ₹150ಕ್ಕೆ ಹೆಚ್ಚಿಸಬೇಕಿದೆ ಎಂದು ಒತ್ತಾಯಿಸಿದ್ದಾರೆ.</p>.<p>ಎಲ್ಪಿಜಿ ಸಿಲಿಂಡರ್ ವಿತರಣೆಯು ಬೇಡಿಕೆ ಮತ್ತು ಪೂರೈಕೆ ಮೇಲೆ ನಿರ್ಧರಿತವಾಗಲಿದೆ. ಆದರೆ, ತೈಲ ಉತ್ಪಾದನಾ ಕಂಪನಿಗಳು ಬೇಡಿಕೆ ಇಲ್ಲದಿದ್ದರೂ ಗೃಹಬಳಕೆಯೇತರ ಸಿಲಿಂಡರ್ಗಳನ್ನು ವಿತರಕರಿಗೆ ರವಾನಿಸುತ್ತವೆ. ಇದು ನಿಯಮಾವಳಿಗೆ ವಿರುದ್ಧವಾಗಿದೆ. ಈ ಪದ್ಧತಿಯನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯ ಸಿಲಿಂಡರ್ ವಿತರಣೆಯಲ್ಲಿ ಹಲವು ಸಮಸ್ಯೆಗಳಿವೆ. ಇವುಗಳನ್ನು ಬಗೆಹರಿಸಬೇಕಿದೆ. ನಿಗದಿತ ಅವಧಿಯಲ್ಲಿ ಈ ಬೇಡಿಕೆಗಳನ್ನು ಈಡೇರಿಸಬೇಕಿದೆ. ಇಲ್ಲವಾದರೆ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ಕೇಂದ್ರ ಸರ್ಕಾರವು ಮೂರು ತಿಂಗಳೊಳಗೆ ಕಮಿಷನ್ ಮೊತ್ತ ಹೆಚ್ಚಳ ಸೇರಿ ಎಲ್ಪಿಜಿ ವಿತರಕರ ವಿವಿಧ ಬೇಡಿಕೆ ಈಡೇರಿಸಬೇಕಿದೆ. ಇಲ್ಲವಾದರೆ ದೇಶದಾದ್ಯಂತ ಅನಿರ್ದಿಷ್ಟಾವಧಿವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಎಲ್ಪಿಜಿ ವಿತರಕರ ಸಂಘ ಗಡುವು ನೀಡಿದೆ.</p>.<p>ಭೋಪಾಲ್ನಲ್ಲಿ ಶನಿವಾರ ಸಂಘದ ಸಮಾವೇಶ ಆಯೋಜಿಸಲಾಗಿತ್ತು. ವಿವಿಧ ರಾಜ್ಯದ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಸಮಾವೇಶದಲ್ಲಿ ಮಂಡಿಸಿದ ಹೋರಾಟದ ನಿರ್ಣಯಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಂಘದ ಅಧ್ಯಕ್ಷ ಬಿ.ಎಸ್. ಶರ್ಮಾ ತಿಳಿಸಿದ್ದಾರೆ.</p>.<p>ವಿತರಕರ ಬೇಡಿಕೆ ಈಡೇರಿಸುವಂತೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ. ಪ್ರಸ್ತುತ ಕಡಿಮೆ ಕಮಿಷನ್ ನೀಡಲಾಗುತ್ತಿದೆ. ಇದರಿಂದ ಕಾರ್ಯಾಚರಣೆಯ ವೆಚ್ಚವನ್ನು ಸರಿದೂಗಿಸಲು ಆಗುವುದಿಲ್ಲ. ಕಮಿಷನ್ ಮೊತ್ತವನ್ನು ಕನಿಷ್ಠ ₹150ಕ್ಕೆ ಹೆಚ್ಚಿಸಬೇಕಿದೆ ಎಂದು ಒತ್ತಾಯಿಸಿದ್ದಾರೆ.</p>.<p>ಎಲ್ಪಿಜಿ ಸಿಲಿಂಡರ್ ವಿತರಣೆಯು ಬೇಡಿಕೆ ಮತ್ತು ಪೂರೈಕೆ ಮೇಲೆ ನಿರ್ಧರಿತವಾಗಲಿದೆ. ಆದರೆ, ತೈಲ ಉತ್ಪಾದನಾ ಕಂಪನಿಗಳು ಬೇಡಿಕೆ ಇಲ್ಲದಿದ್ದರೂ ಗೃಹಬಳಕೆಯೇತರ ಸಿಲಿಂಡರ್ಗಳನ್ನು ವಿತರಕರಿಗೆ ರವಾನಿಸುತ್ತವೆ. ಇದು ನಿಯಮಾವಳಿಗೆ ವಿರುದ್ಧವಾಗಿದೆ. ಈ ಪದ್ಧತಿಯನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯ ಸಿಲಿಂಡರ್ ವಿತರಣೆಯಲ್ಲಿ ಹಲವು ಸಮಸ್ಯೆಗಳಿವೆ. ಇವುಗಳನ್ನು ಬಗೆಹರಿಸಬೇಕಿದೆ. ನಿಗದಿತ ಅವಧಿಯಲ್ಲಿ ಈ ಬೇಡಿಕೆಗಳನ್ನು ಈಡೇರಿಸಬೇಕಿದೆ. ಇಲ್ಲವಾದರೆ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>