<p><strong>ನವದೆಹಲಿ</strong>: ಭೌಗೋಳಿಕ ರಾಜಕೀಯ ಉದ್ವಿಗ್ನತೆ, ಯುದ್ಧದ ಹಿನ್ನೆಲೆ ಯಲ್ಲಿ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ದೇಶದೆಲ್ಲೆಡೆ ಇದರ ಪರಿಣಾಮ ಬೀರಿದೆ. ರಾಜ್ಯದಲ್ಲಿ ಎಲ್ಪಿಜಿ ಸರಬರಾಜಿನಲ್ಲಿ ವ್ಯತ್ಯಯವಾಗಿರುವುದರಿಂದ ರಾಜಧಾನಿ ಬೆಂಗಳೂರಿನಲ್ಲಿ ಹೋಟೆಲ್ಗಳು ಬಾಗಿಲು ಮುಚ್ಚಿವೆ.</p><p>ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಎಲ್ಪಿಜಿ ಸರಬರಾಜನ್ನು ಸುಗಮಗೊಳಿಸಲು ಮೂವರು ಕಾರ್ಯಕಾರಿ ನಿರ್ದೇಶಕರ ಸಮಿತಿ ರಚನೆ ಮಾಡಲಾಗಿದೆ ಎಂದು ಕೇಂದ್ರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.</p><p>‘ಸದ್ಯದ, ಭೌಗೋಳಿಕ ರಾಜಕೀಯ ಉದ್ವಿಗ್ನತೆ ಸಂದರ್ಭದಲ್ಲಿ ಇಂಧನ ಮತ್ತು ಎಲ್ಪಿಜಿ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕ ಎಲ್ಪಿಜಿ ಉತ್ಪಾದನೆ ಮಾಡುವಂತೆ ಸಚಿವಾಲಯ ಆದೇಶಿಸಿದೆ. ಹೆಚ್ಚುವರಿ ಉತ್ಪಾದನೆಯ ಎಲ್ಪಿಜಿಯನ್ನು ಗೃಹಬಳಕೆಗೆ ಬಳಸಬಹುದು’ ಎಂದು ಪುರಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p><p>'ಗೃಹ ಬಳಕೆಯ ಎಲ್ಪಿಜಿ ಪೂರೈಕೆಗೆ ಸಚಿವಾಲಯ ಆದ್ಯತೆ ನೀಡಿದೆ. ಸಂಗ್ರಹಣೆ, ಕಾಳಸಂತೆಯಲ್ಲಿ ಮಾರಾಟ ತಪ್ಪಿಸಲು 25 ದಿನಗಳ ಇಂಟರ್ ಬುಕಿಂಗ್ ಅವಧಿಯನ್ನು ಪರಿಚಯಿಸಿದೆ. ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಂತಹ ಅಗತ್ಯ ವಲಯಗಳಿಗೂ ಎಲ್ಪಿಜಿ ಪೂರೈಕೆಗೆ ಆದ್ಯತೆ ನೀಡಲಾಗಿದೆ’ಎಂದು ಅವರು ಹೇಳಿದ್ದಾರೆ.</p><p>‘ಗೃಹ ಬಳಕೆ ಅಲ್ಲದ ವಲಯಗಳಿಗೆ ಎಲ್ಪಿಜಿ ಪೂರೈಕೆ ಸುಗಮಗೊಳಿಸಲೂ ಯತ್ನಿಸಲಾಗುತ್ತಿದೆ. ರೆಸ್ಟೋರೆಂಟ್, ಹೋಟೆಲ್ಗಳು ಮತ್ತು ಕೈಗಾರಿಕೆಗಳಿಗೆ ಎಲ್ಪಿಜಿ ಪೂರೈಕೆಗಾಗಿ ಪರಿಸ್ಥಿತಿ ನಿರ್ವಹಿಸಲು ಮೂವರು ಕಾರ್ಯಕಾರಿ ನಿರ್ದೇಶಕರ ಸಮಿತಿ ರಚಿಸಲಾಗಿದೆ" ಎಂದು ಅವರು ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭೌಗೋಳಿಕ ರಾಜಕೀಯ ಉದ್ವಿಗ್ನತೆ, ಯುದ್ಧದ ಹಿನ್ನೆಲೆ ಯಲ್ಲಿ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ದೇಶದೆಲ್ಲೆಡೆ ಇದರ ಪರಿಣಾಮ ಬೀರಿದೆ. ರಾಜ್ಯದಲ್ಲಿ ಎಲ್ಪಿಜಿ ಸರಬರಾಜಿನಲ್ಲಿ ವ್ಯತ್ಯಯವಾಗಿರುವುದರಿಂದ ರಾಜಧಾನಿ ಬೆಂಗಳೂರಿನಲ್ಲಿ ಹೋಟೆಲ್ಗಳು ಬಾಗಿಲು ಮುಚ್ಚಿವೆ.</p><p>ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಎಲ್ಪಿಜಿ ಸರಬರಾಜನ್ನು ಸುಗಮಗೊಳಿಸಲು ಮೂವರು ಕಾರ್ಯಕಾರಿ ನಿರ್ದೇಶಕರ ಸಮಿತಿ ರಚನೆ ಮಾಡಲಾಗಿದೆ ಎಂದು ಕೇಂದ್ರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.</p><p>‘ಸದ್ಯದ, ಭೌಗೋಳಿಕ ರಾಜಕೀಯ ಉದ್ವಿಗ್ನತೆ ಸಂದರ್ಭದಲ್ಲಿ ಇಂಧನ ಮತ್ತು ಎಲ್ಪಿಜಿ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕ ಎಲ್ಪಿಜಿ ಉತ್ಪಾದನೆ ಮಾಡುವಂತೆ ಸಚಿವಾಲಯ ಆದೇಶಿಸಿದೆ. ಹೆಚ್ಚುವರಿ ಉತ್ಪಾದನೆಯ ಎಲ್ಪಿಜಿಯನ್ನು ಗೃಹಬಳಕೆಗೆ ಬಳಸಬಹುದು’ ಎಂದು ಪುರಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p><p>'ಗೃಹ ಬಳಕೆಯ ಎಲ್ಪಿಜಿ ಪೂರೈಕೆಗೆ ಸಚಿವಾಲಯ ಆದ್ಯತೆ ನೀಡಿದೆ. ಸಂಗ್ರಹಣೆ, ಕಾಳಸಂತೆಯಲ್ಲಿ ಮಾರಾಟ ತಪ್ಪಿಸಲು 25 ದಿನಗಳ ಇಂಟರ್ ಬುಕಿಂಗ್ ಅವಧಿಯನ್ನು ಪರಿಚಯಿಸಿದೆ. ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಂತಹ ಅಗತ್ಯ ವಲಯಗಳಿಗೂ ಎಲ್ಪಿಜಿ ಪೂರೈಕೆಗೆ ಆದ್ಯತೆ ನೀಡಲಾಗಿದೆ’ಎಂದು ಅವರು ಹೇಳಿದ್ದಾರೆ.</p><p>‘ಗೃಹ ಬಳಕೆ ಅಲ್ಲದ ವಲಯಗಳಿಗೆ ಎಲ್ಪಿಜಿ ಪೂರೈಕೆ ಸುಗಮಗೊಳಿಸಲೂ ಯತ್ನಿಸಲಾಗುತ್ತಿದೆ. ರೆಸ್ಟೋರೆಂಟ್, ಹೋಟೆಲ್ಗಳು ಮತ್ತು ಕೈಗಾರಿಕೆಗಳಿಗೆ ಎಲ್ಪಿಜಿ ಪೂರೈಕೆಗಾಗಿ ಪರಿಸ್ಥಿತಿ ನಿರ್ವಹಿಸಲು ಮೂವರು ಕಾರ್ಯಕಾರಿ ನಿರ್ದೇಶಕರ ಸಮಿತಿ ರಚಿಸಲಾಗಿದೆ" ಎಂದು ಅವರು ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>