ಕೋಟಕ್ ಮಹೀಂದ್ರ ಲೈಫ್ ಇನ್ಶುರೆನ್ಸ್ನ ಈಕ್ವಿಟಿ ವಿಭಾಗದ ಮುಖ್ಯಸ್ಥ ಹೇಮಂತ್ ಕೋನವಾಲಾ ಮಾತನಾಡಿ, ವಿಮಾದಾರರಿಗೆ ಹಣಕಾಸಿನ ತುರ್ತು ಪರಿಸ್ಥಿತಿಯಲ್ಲಿ ಹಣ ಹಿಂಪಡೆಯುವ ಅವಕಾಶವಿದೆ. ಅಪಘಾತ, ಆಕಸ್ಮಿಕ ಸಾವು ಮತ್ತು ಗಂಭೀರ ಕಾಯಿಲೆಗಳ ಸಂದರ್ಭದಲ್ಲಿ ಆರ್ಥಿಕ ರಕ್ಷಣೆ ದೊರೆಯಲಿದೆ. ವಿಮಾದಾರರು ತಮ್ಮ ಹಣವನ್ನು ಹೂಡಿಕೆ ಮಾಡಲು ಎಂಟು ಫಂಡ್ಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಹೇಳಿದರು.