<p><strong>ಮುಂಬೈ:</strong> ಪ್ರಸಕ್ತ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ಮಹೀಂದ್ರ ಆ್ಯಂಡ್ ಮಹೀಂದ್ರ ಕಂಪನಿಯು ₹4,083 ಕೋಟಿ ನಿವ್ವಳ ಲಾಭ ಗಳಿಸಿದೆ.</p>.<p>ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹3,283 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭವು ಶೇ 24ರಷ್ಟು ಏರಿಕೆ ಕಂಡಿದೆ. ವಾಹನಗಳ ಮಾರಾಟ ಮತ್ತು ವ್ಯವಹಾರದಲ್ಲಿನ ಏರಿಕೆಯಿಂದ ಲಾಭದ ಪ್ರಮಾಣ ಹೆಚ್ಚಳವಾಗಿದೆ ಎಂದು ಕಂಪನಿ ಬುಧವಾರ ಷೇರುಪೇಟೆಗೆ ತಿಳಿಸಿದೆ.</p>.<p>ಒಟ್ಟು ವರಮಾನವು ₹45,529 ಕೋಟಿಯಾಗಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ₹37,218 ಕೋಟಿ ವರಮಾನ ಇತ್ತು. ಜೂನ್ ತ್ರೈಮಾಸಿಕದಲ್ಲಿ 2,47,249 ವಾಹನಗಳು ಮಾರಾಟವಾಗಿದ್ದು, ಶೇ 17ರಷ್ಟು ಏರಿಕೆ ಕಂಡಿದೆ. ಟ್ರ್ಯಾಕ್ಟರ್ಗಳ ಮಾರಾಟದಲ್ಲಿ ಶೇ 10ರಷ್ಟು ಹೆಚ್ಚಳವಾಗಿದ್ದು, 1,32,964 ಟ್ರ್ಯಾಕ್ಟರ್ಗಳು ಮಾರಾಟವಾಗಿವೆ ಎಂದು ತಿಳಿಸಿದೆ.</p>.<p>‘ಜೂನ್ ತ್ರೈಮಾಸಿಕದಲ್ಲಿ ಕಂಪನಿಯ ಎಲ್ಲ ವಹಿವಾಟುಗಳು ಬೆಳವಣಿಗೆ ದಾಖಲಿಸಿವೆ. ಹೆಚ್ಚಿದ ವಾಹನಗಳ ಮಾರಾಟ ಮತ್ತು ಕೃಷಿ ವಹಿವಾಟು ಲಾಭದ ಹೆಚ್ಚಳಕ್ಕೆ ಕಾರಣವಾಗಿವೆ’ ಎಂದು ಕಂಪನಿಯ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಅನೀಶ್ ಶಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಪ್ರಸಕ್ತ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ಮಹೀಂದ್ರ ಆ್ಯಂಡ್ ಮಹೀಂದ್ರ ಕಂಪನಿಯು ₹4,083 ಕೋಟಿ ನಿವ್ವಳ ಲಾಭ ಗಳಿಸಿದೆ.</p>.<p>ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹3,283 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭವು ಶೇ 24ರಷ್ಟು ಏರಿಕೆ ಕಂಡಿದೆ. ವಾಹನಗಳ ಮಾರಾಟ ಮತ್ತು ವ್ಯವಹಾರದಲ್ಲಿನ ಏರಿಕೆಯಿಂದ ಲಾಭದ ಪ್ರಮಾಣ ಹೆಚ್ಚಳವಾಗಿದೆ ಎಂದು ಕಂಪನಿ ಬುಧವಾರ ಷೇರುಪೇಟೆಗೆ ತಿಳಿಸಿದೆ.</p>.<p>ಒಟ್ಟು ವರಮಾನವು ₹45,529 ಕೋಟಿಯಾಗಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ₹37,218 ಕೋಟಿ ವರಮಾನ ಇತ್ತು. ಜೂನ್ ತ್ರೈಮಾಸಿಕದಲ್ಲಿ 2,47,249 ವಾಹನಗಳು ಮಾರಾಟವಾಗಿದ್ದು, ಶೇ 17ರಷ್ಟು ಏರಿಕೆ ಕಂಡಿದೆ. ಟ್ರ್ಯಾಕ್ಟರ್ಗಳ ಮಾರಾಟದಲ್ಲಿ ಶೇ 10ರಷ್ಟು ಹೆಚ್ಚಳವಾಗಿದ್ದು, 1,32,964 ಟ್ರ್ಯಾಕ್ಟರ್ಗಳು ಮಾರಾಟವಾಗಿವೆ ಎಂದು ತಿಳಿಸಿದೆ.</p>.<p>‘ಜೂನ್ ತ್ರೈಮಾಸಿಕದಲ್ಲಿ ಕಂಪನಿಯ ಎಲ್ಲ ವಹಿವಾಟುಗಳು ಬೆಳವಣಿಗೆ ದಾಖಲಿಸಿವೆ. ಹೆಚ್ಚಿದ ವಾಹನಗಳ ಮಾರಾಟ ಮತ್ತು ಕೃಷಿ ವಹಿವಾಟು ಲಾಭದ ಹೆಚ್ಚಳಕ್ಕೆ ಕಾರಣವಾಗಿವೆ’ ಎಂದು ಕಂಪನಿಯ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಅನೀಶ್ ಶಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>