‘ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಇವು ಚುನಾವಣೆಯಲ್ಲಿ ಶ್ರೀರಕ್ಷೆಯಾಗಲಿವೆ. ಕೇಂದ್ರ ಸರ್ಕಾರ ಉದ್ಯಮಿಗಳ ₹ 4.50 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ. ಆದರೆ, ರೈತರ ಸಾಲ ಮನ್ನಾ ಮಾಡದೆ ದ್ರೋಹ ಬಗೆದಿದೆ. ಇದನ್ನು ಜನರು ಗಂಭೀರವಾಗಿ ಪರಿಗಣಿಸಬೇಕು. ಯಡಿಯೂರಪ್ಪ ಹಾಗೂ ರೆಡ್ಡಿ ಸಹೋದರರು ಕೂಡಿ ರಾಜ್ಯವನ್ನೇ ಲೂಟಿ ಮಾಡಿದಾಗ ಮೋದಿ ಸುಮ್ಮನೆ ಇದ್ದಿದ್ದು ಏಕೆ?’ ಎಂದು ಕೇಳಿದರು.