<p>ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘವು 2025-26ನೇ ಆರ್ಥಿಕ ವರ್ಷದಲ್ಲಿ ₹1.09 ಕೋಟಿ ಲಾಭಗಳಿಸಿ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ ಎಂದು ಸಂಘದ ಅಧ್ಯಕ್ಷ ಎಸ್.ಜಗದೀಶ್ಚಂದ್ರ ಅಂಚನ್ ತಿಳಿಸಿದ್ದಾರೆ.</p>.<p>ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಕಾರಿ ನೌಕರರು ತಮ್ಮ ಆರ್ಥಿಕ ಬಲವರ್ಧನೆಗಾಗಿ ಸ್ಥಾಪಿಸಿದ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರಿ ಸಂಘವು ಇದೀಗ 95 ವರ್ಷಗಳನ್ನು ಪೂರೈಸಿದೆ. ಆರಂಭಿಕ71 ವರ್ಷಗಳ ಕಾಲ ಅರೆಕಾಲಿಕವಾಗಿ ಕಾರ್ಯನಿರ್ವಹಿಸಿದ್ದ ಸಂಘವು 2001ರವರೆಗೆ ಕೇವಲ ₹3.84 ಲಕ್ಷ ಠೇವಣಿ ಹಾಗೂ ₹3.13 ಲಕ್ಷ ಮುಂಗಡ ದೊಂದಿಗೆ ಕಾರ್ಯ ನಿರ್ವಹಿಸುತ್ತಿತ್ತು. ಆದರೆ, ಕಳೆದ 25 ವರ್ಷಗಳಲ್ಲಿ ಸಂಘ ಅದ್ಭುತ ಬೆಳವಣಿಗೆ ಕಂಡಿದೆ.</p>.<p>ಶನಿವಾರ ನಡೆದ ಸಂಘದ ಸಭೆಯಲ್ಲಿ ಪ್ರಕಟಿಸಿದ ಆರ್ಥಿಕ ತಖ್ತೆಯ ಪ್ರಕಾರ 2024-25ರ ಆರ್ಥಿಕ ವರ್ಷದಲ್ಲಿ ₹94.33 ಕೋಟಿ ಠೇವಣಿ ಹೊಂದಿದ್ದ ಸಂಘವು 2025-26ರ ಆರ್ಥಿಕ ವರ್ಷದಲ್ಲಿ ₹100 ಕೋಟಿಗಳ ಮೈಲಿಗಲ್ಲನ್ನು ದಾಟಿ ₹108.10 ಕೋಟಿ ಠೇವಣಿ ಹೊಂದಿದೆ. ಠೇವಣಿ ಸಂಗ್ರಹಣೆಯ ಜೊತೆಗೆ ಸಾಲ ಮುಂಗಡದಲ್ಲೂ ಏರಿಕೆಯಾಗಿದ್ದು ₹82.91 ಕೋಟಿಯಿಂದ ವರದಿ ವರ್ಷದಲ್ಲಿ ₹91.91 ಕೋಟಿಗೆ ಏರಿಕೆಯಾಗಿದೆ. ಹಾಗೆಯೇ ಸಂಘದ ಒಟ್ಟು ವ್ಯವಹಾರ ₹177.23 ಕೋಟಿಯಿಂದ ಇದೀಗ ₹200.01 ಕೋಟಿಗೆ ವೃದ್ಧಿಯಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಸಂಘವು ಪ್ರಸ್ತುತ 1140 'ಎ' ವರ್ಗದ ಸದಸ್ಯರನ್ನು ಹೊಂದಿದೆ. ಸಂಘವು 2024-25ನೇ ಸಾಲಿನಲ್ಲಿ ₹95.32 ಲಕ್ಷ ಲಾಭ ಗಳಿಸಿತ್ತು. ಇದೀಗ 2025-26ನೇ ಸಾಲಿನಲ್ಲಿ ₹108.10ಕೋಟಿ ಲಾಭ ಗಳಿಸಿದೆ. ಸಂಘವು ₹29.12 ಲಕ್ಷ ಪಾಲು ಬಂಡವಾಳ, ₹6.31 ಕೋಟಿ ವಿವಿಧ ನಿಧಿಗಳನ್ನು ಹೊಂದಿದೆ. ಸದಸ್ಯರ ಬೆಂಬಲ, ಸಿಬ್ಬಂದಿಯ ಪ್ರಾಮಾಣಿಕ ಸೇವೆ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರ ಸಂಘಟಿತ ಕಾರ್ಯ ನಿರ್ವಹಣೆಯಿಂದ ಸಂಘವು ಅಭಿವೃದ್ಧಿಯ ಮುಂಚೂಣಿಯಲ್ಲಿದೆ ಎಂದು ತಿಳಿಸಿದ್ದಾರೆ.</p>.<p>ಮಂಗಳೂರಿನಲ್ಲಿ ಎರಡು , ಉಡುಪಿ ಹಾಗೂ ಪುತ್ತೂರಲ್ಲಿ ತಲಾ ಒಂದು ಶಾಖೆಯನ್ನು ಸಂಘ ಹೊಂದಿದೆ.</p>.<p>ಸಂಘದ ಸಭೆಯಲ್ಲಿ ಉಪಾಧ್ಯಕ್ಷ ರಾಘವ ಆರ್. ಉಚ್ಚಿಲ್, ನಿರ್ದೇಶಕರಾದ ದಿವಾಕರ ಶೆಟ್ಟಿ ಕೆ, ವಿಶ್ವೇಶ್ವರ ಐತಾಳ್ , ಜಯಪ್ರಕಾಶ್ ರೈ ಸಿ, ಗಿರಿಧರ್ ಕೆ, ವಿಶ್ವನಾಥ ಕೆ ಟಿ, ಶಿವಾನಂದ ಪಿ, ಚಂದ್ರಕಲಾ ಕೆ., ಮೋಹನ್ ಎನ್ , ವಿಶ್ವನಾಥ್ ಎನ್. ಅಮೀನ್ , ಗೀತಾಕ್ಷಿ , ಕಿರಣ್ ಕುಮಾರ್ ಶೆಟ್ಟಿ , ನಿಶಿತಾ ಜಯರಾಮ್, ಪ್ರೇಮ್ ರಾಜ್ ಭಂಡಾರಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-29-1809748258</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘವು 2025-26ನೇ ಆರ್ಥಿಕ ವರ್ಷದಲ್ಲಿ ₹1.09 ಕೋಟಿ ಲಾಭಗಳಿಸಿ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ ಎಂದು ಸಂಘದ ಅಧ್ಯಕ್ಷ ಎಸ್.ಜಗದೀಶ್ಚಂದ್ರ ಅಂಚನ್ ತಿಳಿಸಿದ್ದಾರೆ.</p>.<p>ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಕಾರಿ ನೌಕರರು ತಮ್ಮ ಆರ್ಥಿಕ ಬಲವರ್ಧನೆಗಾಗಿ ಸ್ಥಾಪಿಸಿದ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರಿ ಸಂಘವು ಇದೀಗ 95 ವರ್ಷಗಳನ್ನು ಪೂರೈಸಿದೆ. ಆರಂಭಿಕ71 ವರ್ಷಗಳ ಕಾಲ ಅರೆಕಾಲಿಕವಾಗಿ ಕಾರ್ಯನಿರ್ವಹಿಸಿದ್ದ ಸಂಘವು 2001ರವರೆಗೆ ಕೇವಲ ₹3.84 ಲಕ್ಷ ಠೇವಣಿ ಹಾಗೂ ₹3.13 ಲಕ್ಷ ಮುಂಗಡ ದೊಂದಿಗೆ ಕಾರ್ಯ ನಿರ್ವಹಿಸುತ್ತಿತ್ತು. ಆದರೆ, ಕಳೆದ 25 ವರ್ಷಗಳಲ್ಲಿ ಸಂಘ ಅದ್ಭುತ ಬೆಳವಣಿಗೆ ಕಂಡಿದೆ.</p>.<p>ಶನಿವಾರ ನಡೆದ ಸಂಘದ ಸಭೆಯಲ್ಲಿ ಪ್ರಕಟಿಸಿದ ಆರ್ಥಿಕ ತಖ್ತೆಯ ಪ್ರಕಾರ 2024-25ರ ಆರ್ಥಿಕ ವರ್ಷದಲ್ಲಿ ₹94.33 ಕೋಟಿ ಠೇವಣಿ ಹೊಂದಿದ್ದ ಸಂಘವು 2025-26ರ ಆರ್ಥಿಕ ವರ್ಷದಲ್ಲಿ ₹100 ಕೋಟಿಗಳ ಮೈಲಿಗಲ್ಲನ್ನು ದಾಟಿ ₹108.10 ಕೋಟಿ ಠೇವಣಿ ಹೊಂದಿದೆ. ಠೇವಣಿ ಸಂಗ್ರಹಣೆಯ ಜೊತೆಗೆ ಸಾಲ ಮುಂಗಡದಲ್ಲೂ ಏರಿಕೆಯಾಗಿದ್ದು ₹82.91 ಕೋಟಿಯಿಂದ ವರದಿ ವರ್ಷದಲ್ಲಿ ₹91.91 ಕೋಟಿಗೆ ಏರಿಕೆಯಾಗಿದೆ. ಹಾಗೆಯೇ ಸಂಘದ ಒಟ್ಟು ವ್ಯವಹಾರ ₹177.23 ಕೋಟಿಯಿಂದ ಇದೀಗ ₹200.01 ಕೋಟಿಗೆ ವೃದ್ಧಿಯಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಸಂಘವು ಪ್ರಸ್ತುತ 1140 'ಎ' ವರ್ಗದ ಸದಸ್ಯರನ್ನು ಹೊಂದಿದೆ. ಸಂಘವು 2024-25ನೇ ಸಾಲಿನಲ್ಲಿ ₹95.32 ಲಕ್ಷ ಲಾಭ ಗಳಿಸಿತ್ತು. ಇದೀಗ 2025-26ನೇ ಸಾಲಿನಲ್ಲಿ ₹108.10ಕೋಟಿ ಲಾಭ ಗಳಿಸಿದೆ. ಸಂಘವು ₹29.12 ಲಕ್ಷ ಪಾಲು ಬಂಡವಾಳ, ₹6.31 ಕೋಟಿ ವಿವಿಧ ನಿಧಿಗಳನ್ನು ಹೊಂದಿದೆ. ಸದಸ್ಯರ ಬೆಂಬಲ, ಸಿಬ್ಬಂದಿಯ ಪ್ರಾಮಾಣಿಕ ಸೇವೆ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರ ಸಂಘಟಿತ ಕಾರ್ಯ ನಿರ್ವಹಣೆಯಿಂದ ಸಂಘವು ಅಭಿವೃದ್ಧಿಯ ಮುಂಚೂಣಿಯಲ್ಲಿದೆ ಎಂದು ತಿಳಿಸಿದ್ದಾರೆ.</p>.<p>ಮಂಗಳೂರಿನಲ್ಲಿ ಎರಡು , ಉಡುಪಿ ಹಾಗೂ ಪುತ್ತೂರಲ್ಲಿ ತಲಾ ಒಂದು ಶಾಖೆಯನ್ನು ಸಂಘ ಹೊಂದಿದೆ.</p>.<p>ಸಂಘದ ಸಭೆಯಲ್ಲಿ ಉಪಾಧ್ಯಕ್ಷ ರಾಘವ ಆರ್. ಉಚ್ಚಿಲ್, ನಿರ್ದೇಶಕರಾದ ದಿವಾಕರ ಶೆಟ್ಟಿ ಕೆ, ವಿಶ್ವೇಶ್ವರ ಐತಾಳ್ , ಜಯಪ್ರಕಾಶ್ ರೈ ಸಿ, ಗಿರಿಧರ್ ಕೆ, ವಿಶ್ವನಾಥ ಕೆ ಟಿ, ಶಿವಾನಂದ ಪಿ, ಚಂದ್ರಕಲಾ ಕೆ., ಮೋಹನ್ ಎನ್ , ವಿಶ್ವನಾಥ್ ಎನ್. ಅಮೀನ್ , ಗೀತಾಕ್ಷಿ , ಕಿರಣ್ ಕುಮಾರ್ ಶೆಟ್ಟಿ , ನಿಶಿತಾ ಜಯರಾಮ್, ಪ್ರೇಮ್ ರಾಜ್ ಭಂಡಾರಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-29-1809748258</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>