<p>ಮಂಗಳೂರು: ಕರ್ನಾಟಕ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಈಚೆಗೆ 2026–27ನೇ ಸಾಲಿನ ಲೆಕ್ಕ ಪರಿಶೋಧಕರು ಹಾಗೂ ಆಂತರಿಕ ಲೆಕ್ಕ ಪರಿಶೋಧಕರ ವಾರ್ಷಿಕ ಸಮ್ಮೇಳನ ಆಯೋಜಿಸಲಾಗಿತ್ತು.</p>.<p>‘ಆ್ಯಂಟಿಸಿಪೇಟ್, ಸ್ಟ್ರೆಂತನ್ ಆ್ಯಂಡ್ ಪ್ರಿವೆಂಟ್’ ಎಂಬ ಘೋಷಣೆಯೊಂದಿಗೆ ಹೈಬ್ರಿಡ್ ಮಾದರಿಯಲ್ಲಿ ನಡೆದ ಈ ಸಮ್ಮೇಳನದಲ್ಲಿ, ದೇಶದ ವಿವಿಧ ಭಾಗಗಳಲ್ಲಿರುವ ಬ್ಯಾಂಕ್ನ ಲೆಕ್ಕ ಪರಿಶೋಧಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.</p>.<p>ಲೆಕ್ಕಪರಿಶೋಧನೆಯನ್ನು ಇನ್ನಷ್ಟು ಬಲಗೊಳಿಸುವುದು, ಅಪಾಯ ನಿರ್ವಹಣಾ ಸಾಮರ್ಥ್ಯ ಹೆಚ್ಚಿಸುವುದು, ನಿಯಂತ್ರಕ ನಿಯಮಾವಳಿಗಳ ಅನುಸರಣೆ ಖಚಿತಪಡಿಸುವುದು ಮತ್ತು ಆಂತರಿಕ ನಿಯಂತ್ರಣ ಮತ್ತು ಆಡಳಿತದಲ್ಲಿ ಸುಧಾರಣೆ ಕುರಿತು ಸಮ್ಮೇಳನದಲ್ಲಿ ಚರ್ಚೆಗಳು ನಡೆದವು.</p>.<p>ಲೆಕ್ಕಪರಿಶೋಧನಾ ಸಮಿತಿಯ ಅಧ್ಯಕ್ಷ ಕೆ. ಗುರುರಾಜ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಲೆಕ್ಕ ಪರಿಶೋಧಕ ಎಂ.ಆರ್. ವೆಂಕಟೇಶ್ ವಿಶೇಷ ಅತಿಥಿಯಾಗಿ ಮಾತನಾಡಿದರು. ಬ್ಯಾಂಕ್ನ ಎಂ.ಡಿ ಮತ್ತು ಸಿಇಒ ರಾಘವೇಂದ್ರ ಎಸ್ ಭಟ್ ಮಾತನಾಡಿದರು.</p>.<p>ಲೆಕ್ಕ ಪರಿಶೋಧಕ ನಂದನ ರಾವ್ ಇಡ್ಯ ಹಾಗೂ ಆಂತರಿಕ ಲೆಕ್ಕಪರಿಶೋಧನಾ ಮುಖ್ಯಸ್ಥ ಜಯನಾಗರಾಜ ರಾವ್ ಎಸ್. ಅವರು ಲೆಕ್ಕಪರಿಶೋಧನೆ ಕುರಿತ ವಿಚಾರಗಳ ಬಗ್ಗೆ ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-29-1668682210</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಕರ್ನಾಟಕ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಈಚೆಗೆ 2026–27ನೇ ಸಾಲಿನ ಲೆಕ್ಕ ಪರಿಶೋಧಕರು ಹಾಗೂ ಆಂತರಿಕ ಲೆಕ್ಕ ಪರಿಶೋಧಕರ ವಾರ್ಷಿಕ ಸಮ್ಮೇಳನ ಆಯೋಜಿಸಲಾಗಿತ್ತು.</p>.<p>‘ಆ್ಯಂಟಿಸಿಪೇಟ್, ಸ್ಟ್ರೆಂತನ್ ಆ್ಯಂಡ್ ಪ್ರಿವೆಂಟ್’ ಎಂಬ ಘೋಷಣೆಯೊಂದಿಗೆ ಹೈಬ್ರಿಡ್ ಮಾದರಿಯಲ್ಲಿ ನಡೆದ ಈ ಸಮ್ಮೇಳನದಲ್ಲಿ, ದೇಶದ ವಿವಿಧ ಭಾಗಗಳಲ್ಲಿರುವ ಬ್ಯಾಂಕ್ನ ಲೆಕ್ಕ ಪರಿಶೋಧಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.</p>.<p>ಲೆಕ್ಕಪರಿಶೋಧನೆಯನ್ನು ಇನ್ನಷ್ಟು ಬಲಗೊಳಿಸುವುದು, ಅಪಾಯ ನಿರ್ವಹಣಾ ಸಾಮರ್ಥ್ಯ ಹೆಚ್ಚಿಸುವುದು, ನಿಯಂತ್ರಕ ನಿಯಮಾವಳಿಗಳ ಅನುಸರಣೆ ಖಚಿತಪಡಿಸುವುದು ಮತ್ತು ಆಂತರಿಕ ನಿಯಂತ್ರಣ ಮತ್ತು ಆಡಳಿತದಲ್ಲಿ ಸುಧಾರಣೆ ಕುರಿತು ಸಮ್ಮೇಳನದಲ್ಲಿ ಚರ್ಚೆಗಳು ನಡೆದವು.</p>.<p>ಲೆಕ್ಕಪರಿಶೋಧನಾ ಸಮಿತಿಯ ಅಧ್ಯಕ್ಷ ಕೆ. ಗುರುರಾಜ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಲೆಕ್ಕ ಪರಿಶೋಧಕ ಎಂ.ಆರ್. ವೆಂಕಟೇಶ್ ವಿಶೇಷ ಅತಿಥಿಯಾಗಿ ಮಾತನಾಡಿದರು. ಬ್ಯಾಂಕ್ನ ಎಂ.ಡಿ ಮತ್ತು ಸಿಇಒ ರಾಘವೇಂದ್ರ ಎಸ್ ಭಟ್ ಮಾತನಾಡಿದರು.</p>.<p>ಲೆಕ್ಕ ಪರಿಶೋಧಕ ನಂದನ ರಾವ್ ಇಡ್ಯ ಹಾಗೂ ಆಂತರಿಕ ಲೆಕ್ಕಪರಿಶೋಧನಾ ಮುಖ್ಯಸ್ಥ ಜಯನಾಗರಾಜ ರಾವ್ ಎಸ್. ಅವರು ಲೆಕ್ಕಪರಿಶೋಧನೆ ಕುರಿತ ವಿಚಾರಗಳ ಬಗ್ಗೆ ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-29-1668682210</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>