<p><strong>ನವದೆಹಲಿ:</strong> ಆರ್ಥಿಕ ಬೆಳವಣಿಗೆ ದರವನ್ನು ಗರಿಷ್ಠ ಮಟ್ಟದಲ್ಲಿ ಕಾಯ್ದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರವು ಇನ್ನೂ ಕೆಲವು ಉತ್ತೇಜನಾ ಕೊಡುಗೆಗಳನ್ನು ಪ್ರಕಟಿಸುವ ನಿರೀಕ್ಷೆ ಇದೆ.</p>.<p>‘ಮಂದಗತಿಯಲ್ಲಿ ಪ್ರಗತಿ ದಾಖಲಿಸುತ್ತಿರುವ ಆರ್ಥಿಕತೆಗೆ ಉತ್ತೇಜನ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ ಈಗಾಗಲೇ ಅಲ್ಪಾವಧಿ ಬಡ್ಡಿ ದರಗಳನ್ನು ತಗ್ಗಿಸಿದೆ. ಈ ಹಣಕಾಸು ನೀತಿಗೆ ಕೆಲ ಮಿತಿಗಳಿವೆ. ಹೀಗಾಗಿ ಕೇಂದ್ರ ಸರ್ಕಾರವು ಹಲವಾರು ವಿತ್ತೀಯ ಕ್ರಮಗಳನ್ನೂ ಪ್ರಕಟಿಸಿತ್ತು. ಇಂತಹ ಇನ್ನೂ ಹಲವು ಉತ್ತೇಜನಾ ಕ್ರಮಗಳು ಮುಂಬರುವ ದಿನಗಳಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ’ ಎಂದು ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಅಂದಾಜಿಸಿದ್ದಾರೆ.</p>.<p>ಇಲ್ಲಿ ನಡೆದ ಜಾಗತಿಕ ಆರ್ಥಿಕ ವೇದಿಕೆಯ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ‘ಕೇಂದ್ರೋದ್ಯಮಗಳ ಷೇರು ವಿಕ್ರಯಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡಲಿದೆ. ಹೂಡಿಕೆದಾರರು ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಬದಲಿಗೆ ಹಳೆಯ ಉದ್ದಿಮೆಗಳಲ್ಲಿ ಬಂಡವಾಳ ಹೂಡಿಕೆ ಮಾಡುವ ಅಗತ್ಯ ಹೆಚ್ಚಿದೆ. ಉದ್ದಿಮೆ – ವಹಿವಾಟಿನ ಬೆಳವಣಿಗೆಗೆ ಅಗತ್ಯವಾದ ಸೌಲಭ್ಯಗಳನ್ನು ಕಲ್ಪಿಸಿಕೊಡಲಷ್ಟೇ ಸರ್ಕಾರ ತನ್ನ ಪಾತ್ರವನ್ನು ಸೀಮಿತಗೊಳಿಸಬೇಕು. ವಹಿವಾಟಿನಿಂದ ಸರ್ಕಾರ ದೂರವೇ ಉಳಿಯಬೇಕು’ ಎಂದೂ ಕಾಂತ್ ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆರ್ಥಿಕ ಬೆಳವಣಿಗೆ ದರವನ್ನು ಗರಿಷ್ಠ ಮಟ್ಟದಲ್ಲಿ ಕಾಯ್ದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರವು ಇನ್ನೂ ಕೆಲವು ಉತ್ತೇಜನಾ ಕೊಡುಗೆಗಳನ್ನು ಪ್ರಕಟಿಸುವ ನಿರೀಕ್ಷೆ ಇದೆ.</p>.<p>‘ಮಂದಗತಿಯಲ್ಲಿ ಪ್ರಗತಿ ದಾಖಲಿಸುತ್ತಿರುವ ಆರ್ಥಿಕತೆಗೆ ಉತ್ತೇಜನ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ ಈಗಾಗಲೇ ಅಲ್ಪಾವಧಿ ಬಡ್ಡಿ ದರಗಳನ್ನು ತಗ್ಗಿಸಿದೆ. ಈ ಹಣಕಾಸು ನೀತಿಗೆ ಕೆಲ ಮಿತಿಗಳಿವೆ. ಹೀಗಾಗಿ ಕೇಂದ್ರ ಸರ್ಕಾರವು ಹಲವಾರು ವಿತ್ತೀಯ ಕ್ರಮಗಳನ್ನೂ ಪ್ರಕಟಿಸಿತ್ತು. ಇಂತಹ ಇನ್ನೂ ಹಲವು ಉತ್ತೇಜನಾ ಕ್ರಮಗಳು ಮುಂಬರುವ ದಿನಗಳಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ’ ಎಂದು ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಅಂದಾಜಿಸಿದ್ದಾರೆ.</p>.<p>ಇಲ್ಲಿ ನಡೆದ ಜಾಗತಿಕ ಆರ್ಥಿಕ ವೇದಿಕೆಯ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ‘ಕೇಂದ್ರೋದ್ಯಮಗಳ ಷೇರು ವಿಕ್ರಯಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡಲಿದೆ. ಹೂಡಿಕೆದಾರರು ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಬದಲಿಗೆ ಹಳೆಯ ಉದ್ದಿಮೆಗಳಲ್ಲಿ ಬಂಡವಾಳ ಹೂಡಿಕೆ ಮಾಡುವ ಅಗತ್ಯ ಹೆಚ್ಚಿದೆ. ಉದ್ದಿಮೆ – ವಹಿವಾಟಿನ ಬೆಳವಣಿಗೆಗೆ ಅಗತ್ಯವಾದ ಸೌಲಭ್ಯಗಳನ್ನು ಕಲ್ಪಿಸಿಕೊಡಲಷ್ಟೇ ಸರ್ಕಾರ ತನ್ನ ಪಾತ್ರವನ್ನು ಸೀಮಿತಗೊಳಿಸಬೇಕು. ವಹಿವಾಟಿನಿಂದ ಸರ್ಕಾರ ದೂರವೇ ಉಳಿಯಬೇಕು’ ಎಂದೂ ಕಾಂತ್ ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>