‘ಭಾರತದ ಷೇರುಪೇಟೆಗಳಲ್ಲಿನ ವಹಿವಾಟು ಕೆಲವು ದಿನಗಳಿಂದ ಬಹಳಷ್ಟು ಚಂಚಲವಾಗಿದೆ. ಅಮೆರಿಕ–ಚೀನಾ ವಾಣಿಜ್ಯ ಸಂಘರ್ಷ, ಕೆಲವು ಕಂಪನಿಗಳತ್ರೈಮಾಸಿಕ ಫಲಿತಾಂಶ ನಿರೀಕ್ಷಿತ ಮಟ್ಟದಲ್ಲಿ ಇಲ್ಲದೇ ಇರುವುದು ಸಹ ನಕಾರಾತ್ಮಕ ವಹಿವಾಟು ನಡೆಯುವಂತೆ ಮಾಡಿವೆ’ ಎಂದು ಸೆಂಟ್ರಂ ಬ್ರೋಕಿಂಗ್ ಸಂಸ್ಥೆಯ ಸಂಶೋಧನಾ ಮುಖ್ಯಸ್ಥ ಜಗನ್ನಾಥಂ ಟಿ. ಅವರು ಅಭಿಪ್ರಾಯಪಟ್ಟಿದ್ದಾರೆ.