<p>ಮುಂಬೈ (ಪಿಟಿಐ): ದೇಶದ ಷೇರುಪೇಟೆಗಳಲ್ಲಿ ಆರು ದಿನಗಳ ಕುಸಿತಕ್ಕೆ ಸೋಮವಾರ ವಿರಾಮ ದೊರೆತಿದೆ. ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ ಹಾಗೂ ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ ಏರಿಕೆ ಕಂಡಿವೆ.</p>.<p>ಸೆನ್ಸೆಕ್ಸ್ 237 ಅಂಶ, ನಿಫ್ಟಿ 56 ಅಂಶ ಏರಿಕೆ ಕಂಡಿವೆ. ‘ಜಾಗತಿಕ ಮಾರುಕಟ್ಟೆಗಳಲ್ಲಿ ಕಂಡುಬಂದ ಧನಾತ್ಮಕ ವಾತಾವರಣವು ದೇಶಿ ಮಾರುಕಟ್ಟೆಗಳ ಮೇಲೆ ಪರಿಣಾಮ ಬೀರಿತು. ಲಾರ್ಜ್ ಕ್ಯಾಪ್ ವಲಯದ ಕಂಪನಿಗಳ ಷೇರುಗಳು ಅತಿಹೆಚ್ಚಿನ ಗಳಿಕೆ ಕಂಡವು. ಆದರೆ, ಮಿಡ್ ಕ್ಯಾಪ್ ಮತ್ತು ಸ್ಮಾಲ್ ಕ್ಯಾಪ್ ವಲಯದ ಷೇರುಗಳ ಮೌಲ್ಯ ಕುಸಿದಿದೆ’ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.</p>.<p>ಬಿಎಸ್ಇ ಸ್ಮಾಲ್ ಕ್ಯಾಪ್ ಸೂಚ್ಯಂಕವು ಶೇ 2.95ರಷ್ಟು, ಮಿಡ್ ಕ್ಯಾಪ್ ಸೂಚ್ಯಂಕ ಶೇ 1.39ರಷ್ಟು ಕುಸಿದಿವೆ. ‘ಐ.ಟಿ., ಹಣಕಾಸು ಮತ್ತು ಆರೋಗ್ಯಸೇವಾ ವಲಯದ ಆಯ್ದ ಷೇರುಗಳನ್ನು ಹೂಡಿಕೆದಾರರು ಖರೀದಿಸಿದ್ದಾರೆ. ಆದರೆ, ಲೋಹ, ತೈಲ ಮತ್ತು ಅನಿಲ ವಲಯದ ಷೇರುಗಳನ್ನು ಭಾರಿ ಪ್ರಮಾಣದಲ್ಲಿ ಮಾರಾಟ ಮಾಡಿದ್ದಾರೆ’ ಎಂದು ಕೋಟಕ್ ಸೆಕ್ಯುರಿಟೀಸ್ನ ಈಕ್ವಿಟಿ ಸಣ್ಣ ಹೂಡಿಕೆಗಳ ವಿಭಾಗದ ಮುಖ್ಯಸ್ಥ ಶ್ರೀಕಾಂತ ಚವಾಣ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಬೈ (ಪಿಟಿಐ): ದೇಶದ ಷೇರುಪೇಟೆಗಳಲ್ಲಿ ಆರು ದಿನಗಳ ಕುಸಿತಕ್ಕೆ ಸೋಮವಾರ ವಿರಾಮ ದೊರೆತಿದೆ. ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ ಹಾಗೂ ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ ಏರಿಕೆ ಕಂಡಿವೆ.</p>.<p>ಸೆನ್ಸೆಕ್ಸ್ 237 ಅಂಶ, ನಿಫ್ಟಿ 56 ಅಂಶ ಏರಿಕೆ ಕಂಡಿವೆ. ‘ಜಾಗತಿಕ ಮಾರುಕಟ್ಟೆಗಳಲ್ಲಿ ಕಂಡುಬಂದ ಧನಾತ್ಮಕ ವಾತಾವರಣವು ದೇಶಿ ಮಾರುಕಟ್ಟೆಗಳ ಮೇಲೆ ಪರಿಣಾಮ ಬೀರಿತು. ಲಾರ್ಜ್ ಕ್ಯಾಪ್ ವಲಯದ ಕಂಪನಿಗಳ ಷೇರುಗಳು ಅತಿಹೆಚ್ಚಿನ ಗಳಿಕೆ ಕಂಡವು. ಆದರೆ, ಮಿಡ್ ಕ್ಯಾಪ್ ಮತ್ತು ಸ್ಮಾಲ್ ಕ್ಯಾಪ್ ವಲಯದ ಷೇರುಗಳ ಮೌಲ್ಯ ಕುಸಿದಿದೆ’ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.</p>.<p>ಬಿಎಸ್ಇ ಸ್ಮಾಲ್ ಕ್ಯಾಪ್ ಸೂಚ್ಯಂಕವು ಶೇ 2.95ರಷ್ಟು, ಮಿಡ್ ಕ್ಯಾಪ್ ಸೂಚ್ಯಂಕ ಶೇ 1.39ರಷ್ಟು ಕುಸಿದಿವೆ. ‘ಐ.ಟಿ., ಹಣಕಾಸು ಮತ್ತು ಆರೋಗ್ಯಸೇವಾ ವಲಯದ ಆಯ್ದ ಷೇರುಗಳನ್ನು ಹೂಡಿಕೆದಾರರು ಖರೀದಿಸಿದ್ದಾರೆ. ಆದರೆ, ಲೋಹ, ತೈಲ ಮತ್ತು ಅನಿಲ ವಲಯದ ಷೇರುಗಳನ್ನು ಭಾರಿ ಪ್ರಮಾಣದಲ್ಲಿ ಮಾರಾಟ ಮಾಡಿದ್ದಾರೆ’ ಎಂದು ಕೋಟಕ್ ಸೆಕ್ಯುರಿಟೀಸ್ನ ಈಕ್ವಿಟಿ ಸಣ್ಣ ಹೂಡಿಕೆಗಳ ವಿಭಾಗದ ಮುಖ್ಯಸ್ಥ ಶ್ರೀಕಾಂತ ಚವಾಣ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>