<p><strong>ನವದೆಹಲಿ</strong>:ದೇಶದಾದ್ಯಂತ ಇರುವ 1,350ಕ್ಕೂ ಅಧಿಕ ಮಳಿಗೆಗಳಲ್ಲಿ ಇತ್ತೀಚಿನ ಕೆಲವೇ ದಿನಗಳಲ್ಲಿ 5 ಸಾವಿರ ಕಾರ್ಗಳನ್ನು ಮಾರಾಟ ಮಾಡಲಾಗಿದೆ ಎಂದು ಮಾರುತಿ ಸುಜುಕಿ ಇಂಡಿಯಾ ತಿಳಿಸಿದೆ.</p>.<p>ಕಾರು ಖರೀದಿ ಪ್ರಕ್ರಿಯೆಯು ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎನ್ನುವುದನ್ನು ಖಾತರಿಪಡಿಸಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಮಾರ್ಗದರ್ಶನಗಳ ಆಧಾರದ ಮೇಲೆ ಸುರಕ್ಷತೆಗೆ ಗಮನ ನೀಡಲಾಗಿದೆ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಕೆನೆಚಿ ಅಯಕುವಾ ತಿಳಿಸಿದ್ದಾರೆ.</p>.<p><strong>ಕಿಯಾ ಕಾರ್ಯಾಚರಣೆ:</strong> ಕಿಯಾ ಮೋಟರ್ಸ್ ಕಂಪನಿಯು ಅನಂತಪುರದಲ್ಲಿನ ಘಟಕದಲ್ಲಿ ಕಾರ್ಯಾಚರಣೆ ಆರಂಭಿಸಿರುವುದಾಗಿ ತಿಳಿಸಿದೆ.</p>.<p>ಸಿಬ್ಬಂದಿಯ ಸುರಕ್ಷತೆಗೆ ಅಗತ್ಯವಾದ ಎಲ್ಲಾ ಕ್ರಮಗಳನ್ನೂ ತೆಗೆದುಕೊಳ್ಳಲಾಗಿದೆ. ಸದ್ಯಕ್ಕೆ ಒಂದು ಪಾಳಿಯಲ್ಲಿ ಕೆಲಸ ನಡೆಯುತ್ತಿದೆ. ಕೋವಿಡ್–19 ಪರಿಸ್ಥಿತಿಯಿಂದ ದೇಶವು ಸಂಪೂರ್ಣವಾಗಿ ಹೊರಬಂದ ಬಳಿಕ ಪೂರ್ಣ ಪ್ರಮಾಣದಲ್ಲಿ ಸಿಬ್ಬಂದಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>:ದೇಶದಾದ್ಯಂತ ಇರುವ 1,350ಕ್ಕೂ ಅಧಿಕ ಮಳಿಗೆಗಳಲ್ಲಿ ಇತ್ತೀಚಿನ ಕೆಲವೇ ದಿನಗಳಲ್ಲಿ 5 ಸಾವಿರ ಕಾರ್ಗಳನ್ನು ಮಾರಾಟ ಮಾಡಲಾಗಿದೆ ಎಂದು ಮಾರುತಿ ಸುಜುಕಿ ಇಂಡಿಯಾ ತಿಳಿಸಿದೆ.</p>.<p>ಕಾರು ಖರೀದಿ ಪ್ರಕ್ರಿಯೆಯು ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎನ್ನುವುದನ್ನು ಖಾತರಿಪಡಿಸಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಮಾರ್ಗದರ್ಶನಗಳ ಆಧಾರದ ಮೇಲೆ ಸುರಕ್ಷತೆಗೆ ಗಮನ ನೀಡಲಾಗಿದೆ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಕೆನೆಚಿ ಅಯಕುವಾ ತಿಳಿಸಿದ್ದಾರೆ.</p>.<p><strong>ಕಿಯಾ ಕಾರ್ಯಾಚರಣೆ:</strong> ಕಿಯಾ ಮೋಟರ್ಸ್ ಕಂಪನಿಯು ಅನಂತಪುರದಲ್ಲಿನ ಘಟಕದಲ್ಲಿ ಕಾರ್ಯಾಚರಣೆ ಆರಂಭಿಸಿರುವುದಾಗಿ ತಿಳಿಸಿದೆ.</p>.<p>ಸಿಬ್ಬಂದಿಯ ಸುರಕ್ಷತೆಗೆ ಅಗತ್ಯವಾದ ಎಲ್ಲಾ ಕ್ರಮಗಳನ್ನೂ ತೆಗೆದುಕೊಳ್ಳಲಾಗಿದೆ. ಸದ್ಯಕ್ಕೆ ಒಂದು ಪಾಳಿಯಲ್ಲಿ ಕೆಲಸ ನಡೆಯುತ್ತಿದೆ. ಕೋವಿಡ್–19 ಪರಿಸ್ಥಿತಿಯಿಂದ ದೇಶವು ಸಂಪೂರ್ಣವಾಗಿ ಹೊರಬಂದ ಬಳಿಕ ಪೂರ್ಣ ಪ್ರಮಾಣದಲ್ಲಿ ಸಿಬ್ಬಂದಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>