ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕ ಅಪಘಾತ: ಬಾಲಕ ಸಾವು, ಐವರಿಗೆ ಗಾಯ

Last Updated 17 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಮೂರು ಕಡೆಗಳಲ್ಲಿ ಸೋಮವಾರ ರಾತ್ರಿ ಅಪಘಾತ ಸಂಭವಿಸಿದ್ದು, ಬಾಲಕನೊಬ್ಬ ಮೃತಪಟ್ಟಿದ್ದಾನೆ. ಐವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಆರ್‌.ಟಿ.ನಗರ ಮುಖ್ಯರಸ್ತೆಯಲ್ಲಿ ಬಿಎಂಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಸಂಭವಿಸಿದ್ದ ಅಪಫಾತದಲ್ಲಿ ಚಾಮುಂಡಿನಗರ ನಿವಾಸಿ ತೌಸಿತ್ (13) ಮೃತಪಟ್ಟಿದ್ದಾನೆ. ಈತ ಬೈಕ್‌ ಹಿಂಬದಿಯಲ್ಲಿ ಕುಳಿತಿದ್ದ. ಸವಾರನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿರ್ಲಕ್ಷ್ಯದ ಚಾಲನೆ ಆರೋಪದಡಿ ಬಸ್‌ ಚಾಲಕನ ವಿರುದ್ಧ ಆರ್‌.ಟಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ, ಏರ್‌ಪೋರ್ಟ್‌ ರಸ್ತೆಯ ಚಿಕ್ಕಜಾಲ ಮೇಲ್ಸೇತುವೆಯ ತಡೆಗೋಡೆಗೆ ಬೈಕ್‌ ಡಿಕ್ಕಿ ಹೊಡೆದಿದೆ. ರಾತ್ರಿ 10.30 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಗಾಯಗೊಂಡು ರಸ್ತೆಯಲ್ಲಿ ನರಳುತ್ತಿದ್ದ ಸವಾರರಿಬ್ಬರನ್ನು ಸ್ಥಳೀಯರೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದಾದ ಬಳಿಕ, ಅದೇ ಮೇಲ್ಸೇತುವೆಯ ತಡೆಗೋಡೆಗೆ ರಾತ್ರಿ 11 ಗಂಟೆ ಸುಮಾರಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಚಾಲಕ ಮತ್ತು ಪ್ರಯಾಣಿಕನಿಗೆ ಗಾಯವಾಗಿದೆ ಎಂದು ಚಿಕ್ಕಜಾಲ ಸಂಚಾರ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT