<p><strong>ನವದೆಹಲಿ</strong>: ಹಣಕಾಸಿನ ಒಳಗೊಳ್ಳುವಿಕೆಯನ್ನು ಹೆಚ್ಚಿಸಲು ಕಿರು ಹಣಕಾಸು ಸಂಸ್ಥೆಗಳು ತಮ್ಮ ಬಡ್ಡಿ ದರವನ್ನು ಕೈಗೆಟಕುವ ಮಟ್ಟದಲ್ಲಿ ಇರಿಸಬೇಕು ಎಂದು ಕೇಂದ್ರ ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿ ಎಂ. ನಾಗರಾಜು ಹೇಳಿದ್ದಾರೆ.</p>.<p>‘ಕೆಲವು ಕಿರು ಹಣಕಾಸು ಸಂಸ್ಥೆಗಳು ಅಸಹನೀಯ ಮಟ್ಟದಲ್ಲಿ ಬಡ್ಡಿ ದರವನ್ನು ನಿಗದಿ ಮಾಡಿರುವುದನ್ನು ನಾನು ನೋಡಿದ್ದೇನೆ. ಇದಕ್ಕೆ ಕಾರಣ ಆ ಕಿರು ಹಣಕಾಸು ಸಂಸ್ಥೆಗಳಲ್ಲಿನ ಅಸಾಮರ್ಥ್ಯ’ ಎಂದು ನಾಗರಾಜು ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.</p>.<p>ಕಿರು ಹಣಕಾಸು ಸಂಸ್ಥೆಗಳು ವೆಚ್ಚಗಳಲ್ಲಿ ದಕ್ಷತೆಯನ್ನು, ಹೆಚ್ಚಿನ ಉತ್ಪಾದಕತೆಯನ್ನು ಸಾಧಿಸಲು ವಿಫಲವಾದ ಕಾರಣಕ್ಕೆ ಹೆಚ್ಚಿನ ಬಡ್ಡಿ ದರ ವಸೂಲಿ ಮಾಡುತ್ತಿರಬಹುದು ಎಂದು ಅವರು ಹೇಳಿದ್ದಾರೆ.</p>.<p>ಸಂಸ್ಥೆಗಳು ವೆಚ್ಚಗಳಲ್ಲಿ ದಕ್ಷತೆಯನ್ನು ಸಾಧಿಸಬೇಕು, ಹೆಚ್ಚಿನ ಉತ್ಪಾದಕತೆಯನ್ನು ಸಾಧಿಸಬೇಕು. ಅದರ ಮೂಲಕ ಸಾಲಗಾರರಿಗೆ ಕಡಿಮೆ ಬಡ್ಡಿ ದರಕ್ಕೆ ಸಾಲ ನೀಡುವಂತೆ ಆಗಬೇಕು ಎಂದು ನಾಗರಾಜು ಅವರು ಕಿವಿಮಾತು ಹೇಳಿದ್ದಾರೆ.</p>.<p>ಹಣದ ಅಗತ್ಯ ತೀವ್ರವಾಗಿ ಇರುವವರು ಹೆಚ್ಚಿನ ಬಡ್ಡಿ ದರಕ್ಕೆ ಸಾಲ ಪಡೆಯಬಹುದು. ಆದರೆ ಅವರಿಗೆ ಆ ಸಾಲವನ್ನು ಮರುಪಾವತಿಸಲು ಆಗುವುದಿಲ್ಲ. ಇದರ ಪರಿಣಾಮವು ಹಣಕಾಸು ವ್ಯವಸ್ಥೆಯ ಮೇಲೆ ಆಗುತ್ತದೆ ಎಂದು ಅವರು ತಿಳಿಸಿದ್ದಾರೆ.</p>.<p>ಕಿರು ಹಣಕಾಸು ಸಂಸ್ಥೆಗಳು ದೇಶದಲ್ಲಿ ಹಣಕಾಸಿನ ಒಳಗೊಳ್ಳುವಿಕೆಯನ್ನು ಸಾಧಿಸಲು ಬಹಳ ಮುಖ್ಯ. ಈ ಸಂಸ್ಥೆಗಳು ಮನೆಬಾಗಿಲಿಗೆ ತೆರಳಿ ಸಾಲ ನೀಡುವ ಕಾರಣದಿಂದಾಗಿ ಇವು ಮಹಿಳೆಯರ ಸಬಲೀಕರಣಕ್ಕೂ ಬಹಳ ಅಗತ್ಯ ಎಂದು ಅವರು ಹೇಳಿದ್ದಾರೆ.</p>.<p>‘ಹಣಕಾಸಿನ ಒಳಗೊಳ್ಳುವಿಕೆಯ ವ್ಯಾಪ್ತಿಗೆ ನಾವು ಇನ್ನೂ ಅಂದಾಜು 35 ಕೋಟಿಯಷ್ಟು ಯುವಕರನ್ನು ತರಬೇಕಿದೆ. ಸರ್ಕಾರ ರೂಪಿಸಿರುವ ಯೋಜನೆಗಳು ಹಲವಿದ್ದರೂ, ದೇಶದ ಜನಸಂಖ್ಯೆಯಲ್ಲಿ ದೊಡ್ಡ ವರ್ಗವೊಂದು ಹಣಕಾಸಿನ ಒಳಗೊಳ್ಳುವಿಕೆಯ ತೆಕ್ಕೆಗೆ ಬಂದಿಲ್ಲ. ಈ ಬಗ್ಗೆ ಕಿರು ಹಣಕಾಸು ಸಂಸ್ಥೆಗಳು ಆದ್ಯತೆ ನೀಡಬೇಕು’ ಎಂದು ಅವರು ಕರೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹಣಕಾಸಿನ ಒಳಗೊಳ್ಳುವಿಕೆಯನ್ನು ಹೆಚ್ಚಿಸಲು ಕಿರು ಹಣಕಾಸು ಸಂಸ್ಥೆಗಳು ತಮ್ಮ ಬಡ್ಡಿ ದರವನ್ನು ಕೈಗೆಟಕುವ ಮಟ್ಟದಲ್ಲಿ ಇರಿಸಬೇಕು ಎಂದು ಕೇಂದ್ರ ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿ ಎಂ. ನಾಗರಾಜು ಹೇಳಿದ್ದಾರೆ.</p>.<p>‘ಕೆಲವು ಕಿರು ಹಣಕಾಸು ಸಂಸ್ಥೆಗಳು ಅಸಹನೀಯ ಮಟ್ಟದಲ್ಲಿ ಬಡ್ಡಿ ದರವನ್ನು ನಿಗದಿ ಮಾಡಿರುವುದನ್ನು ನಾನು ನೋಡಿದ್ದೇನೆ. ಇದಕ್ಕೆ ಕಾರಣ ಆ ಕಿರು ಹಣಕಾಸು ಸಂಸ್ಥೆಗಳಲ್ಲಿನ ಅಸಾಮರ್ಥ್ಯ’ ಎಂದು ನಾಗರಾಜು ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.</p>.<p>ಕಿರು ಹಣಕಾಸು ಸಂಸ್ಥೆಗಳು ವೆಚ್ಚಗಳಲ್ಲಿ ದಕ್ಷತೆಯನ್ನು, ಹೆಚ್ಚಿನ ಉತ್ಪಾದಕತೆಯನ್ನು ಸಾಧಿಸಲು ವಿಫಲವಾದ ಕಾರಣಕ್ಕೆ ಹೆಚ್ಚಿನ ಬಡ್ಡಿ ದರ ವಸೂಲಿ ಮಾಡುತ್ತಿರಬಹುದು ಎಂದು ಅವರು ಹೇಳಿದ್ದಾರೆ.</p>.<p>ಸಂಸ್ಥೆಗಳು ವೆಚ್ಚಗಳಲ್ಲಿ ದಕ್ಷತೆಯನ್ನು ಸಾಧಿಸಬೇಕು, ಹೆಚ್ಚಿನ ಉತ್ಪಾದಕತೆಯನ್ನು ಸಾಧಿಸಬೇಕು. ಅದರ ಮೂಲಕ ಸಾಲಗಾರರಿಗೆ ಕಡಿಮೆ ಬಡ್ಡಿ ದರಕ್ಕೆ ಸಾಲ ನೀಡುವಂತೆ ಆಗಬೇಕು ಎಂದು ನಾಗರಾಜು ಅವರು ಕಿವಿಮಾತು ಹೇಳಿದ್ದಾರೆ.</p>.<p>ಹಣದ ಅಗತ್ಯ ತೀವ್ರವಾಗಿ ಇರುವವರು ಹೆಚ್ಚಿನ ಬಡ್ಡಿ ದರಕ್ಕೆ ಸಾಲ ಪಡೆಯಬಹುದು. ಆದರೆ ಅವರಿಗೆ ಆ ಸಾಲವನ್ನು ಮರುಪಾವತಿಸಲು ಆಗುವುದಿಲ್ಲ. ಇದರ ಪರಿಣಾಮವು ಹಣಕಾಸು ವ್ಯವಸ್ಥೆಯ ಮೇಲೆ ಆಗುತ್ತದೆ ಎಂದು ಅವರು ತಿಳಿಸಿದ್ದಾರೆ.</p>.<p>ಕಿರು ಹಣಕಾಸು ಸಂಸ್ಥೆಗಳು ದೇಶದಲ್ಲಿ ಹಣಕಾಸಿನ ಒಳಗೊಳ್ಳುವಿಕೆಯನ್ನು ಸಾಧಿಸಲು ಬಹಳ ಮುಖ್ಯ. ಈ ಸಂಸ್ಥೆಗಳು ಮನೆಬಾಗಿಲಿಗೆ ತೆರಳಿ ಸಾಲ ನೀಡುವ ಕಾರಣದಿಂದಾಗಿ ಇವು ಮಹಿಳೆಯರ ಸಬಲೀಕರಣಕ್ಕೂ ಬಹಳ ಅಗತ್ಯ ಎಂದು ಅವರು ಹೇಳಿದ್ದಾರೆ.</p>.<p>‘ಹಣಕಾಸಿನ ಒಳಗೊಳ್ಳುವಿಕೆಯ ವ್ಯಾಪ್ತಿಗೆ ನಾವು ಇನ್ನೂ ಅಂದಾಜು 35 ಕೋಟಿಯಷ್ಟು ಯುವಕರನ್ನು ತರಬೇಕಿದೆ. ಸರ್ಕಾರ ರೂಪಿಸಿರುವ ಯೋಜನೆಗಳು ಹಲವಿದ್ದರೂ, ದೇಶದ ಜನಸಂಖ್ಯೆಯಲ್ಲಿ ದೊಡ್ಡ ವರ್ಗವೊಂದು ಹಣಕಾಸಿನ ಒಳಗೊಳ್ಳುವಿಕೆಯ ತೆಕ್ಕೆಗೆ ಬಂದಿಲ್ಲ. ಈ ಬಗ್ಗೆ ಕಿರು ಹಣಕಾಸು ಸಂಸ್ಥೆಗಳು ಆದ್ಯತೆ ನೀಡಬೇಕು’ ಎಂದು ಅವರು ಕರೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>