<p><strong>ಮುಂಬೈ:</strong> ಹಣದುಬ್ಬರವನ್ನು ನಿಯಂತ್ರಿಸಲು ಮುಂಚಿತವಾಗಿಯೇ ಕ್ರಮ ಕೈಗೊಂಡಿದ್ದಲ್ಲಿ ಅದರಿಂದ ಆರ್ಥಿಕತೆ ಮತ್ತು ನಾಗರಿಕರು ಹೆಚ್ಚಿನ ಬೆಲೆ ತೆರಬೇಕಾಗುತ್ತಿತ್ತು ಎಂದು ಹೇಳುವ ಮೂಲಕ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಶಕ್ತಿಕಾಂತ್ ದಾಸ್ ಅವರು ಬೆಲೆ ಏರಿಕೆ ಪರಿಸ್ಥಿತಿಯ ನಿರ್ವಹಣೆಯನ್ನು ಸಮರ್ಥಿಸಿಕೊಂಡಿದ್ದಾರೆ.</p>.<p>ಹಣದುಬ್ಬರ ನಿಯಂತ್ರಣದಲ್ಲಿ ಆರ್ಬಿಐ ವಿಫಲವಾಗಿರುವುದನ್ನು ಒಪ್ಪಿಕೊಂಡ ಅವರು, ಹಣದುಬ್ಬರದಲ್ಲಿ ಆಗುತ್ತಿರುವ ಏರಿಕೆಗೆ ಅನುಗುಣವಾಗಿ ಬಡ್ಡಿದರ ಹೆಚ್ಚಳ ಮಾಡದೇ ಆರ್ಥಿಕತೆಗೆ ಬೆಂಬಲ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.</p>.<p>ಹಣದುಬ್ಬರವನ್ನು ಗರಿಷ್ಠ ಶೇಕಡ 6ರ ಒಳಗೆ ನಿಯಂತ್ರಿಸುವಂತೆ ಕೇಂದ್ರ ಸರ್ಕಾರವು ಆರ್ಬಿಐಗೆ ಸೂಚಿಸಿದೆ. ಆದರೆ, ಸತತ ಮೂರು ತ್ರೈಮಾಸಿಕಗಳಲ್ಲಿ ಹಣದುಬ್ಬರವು ಶೇ 6ರ ಮಟ್ಟವನ್ನೂ ಮೀರಿದೆ.</p>.<p>ಬಡ್ಡಿದರವನ್ನು ಕಡಿಮೆ ಇರಿಸುವ ಮೂಲಕ ಹಾಗೂ ಮುಂಚಿತವಾಗಿಯೇ ಬಡ್ಡಿದರ ಹೆಚ್ಚಳ ಮಾಡದೆ, ಆರ್ಥಿಕತೆಯು ಸಂಪೂರ್ಣವಾಗಿ ಕುಸಿಯುದನ್ನು ತಡೆಯಲಾಗಿದೆ ಎಂದು ಅವರು ಎಫ್ಐಬಿಎಸಿ ಸಮಾವೇಶದಲ್ಲಿ ಹೇಳಿದ್ದಾರೆ.</p>.<p>ರೂಪಾಯಿ ಕುಸಿತದ ಬಗ್ಗೆ ಮಾತನಾಡಿದ ಅವರು, ‘ಪರಿಸ್ಥಿತಿಯನ್ನು ಭಾವನಾತ್ಮಕ ನೆಲೆಯಲ್ಲಿ ನೋಡಬಾರದು. ಅಮೆರಿಕದ ಡಾಲರ್ ಎದುರು ಇತರೆ ಕರೆನ್ಸಿಗಳಿಗೆ ಹೋಲಿಸಿದರೆ ಭಾರತದ ಕರೆನ್ಸಿಯು ಕಡಿಮೆ ಪ್ರಮಾಣದಲ್ಲಿ ಇಳಿಕೆ ಆಗಿದೆ. ಅಲ್ಲದೆ, ಇತರೆ ಕರೆನ್ಸಿಗಳ ಎದುರು ರೂಪಾಯಿ ಮೌಲ್ಯ ಹೆಚ್ಚಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಹಣದುಬ್ಬರವನ್ನು ನಿಯಂತ್ರಿಸಲು ಮುಂಚಿತವಾಗಿಯೇ ಕ್ರಮ ಕೈಗೊಂಡಿದ್ದಲ್ಲಿ ಅದರಿಂದ ಆರ್ಥಿಕತೆ ಮತ್ತು ನಾಗರಿಕರು ಹೆಚ್ಚಿನ ಬೆಲೆ ತೆರಬೇಕಾಗುತ್ತಿತ್ತು ಎಂದು ಹೇಳುವ ಮೂಲಕ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಶಕ್ತಿಕಾಂತ್ ದಾಸ್ ಅವರು ಬೆಲೆ ಏರಿಕೆ ಪರಿಸ್ಥಿತಿಯ ನಿರ್ವಹಣೆಯನ್ನು ಸಮರ್ಥಿಸಿಕೊಂಡಿದ್ದಾರೆ.</p>.<p>ಹಣದುಬ್ಬರ ನಿಯಂತ್ರಣದಲ್ಲಿ ಆರ್ಬಿಐ ವಿಫಲವಾಗಿರುವುದನ್ನು ಒಪ್ಪಿಕೊಂಡ ಅವರು, ಹಣದುಬ್ಬರದಲ್ಲಿ ಆಗುತ್ತಿರುವ ಏರಿಕೆಗೆ ಅನುಗುಣವಾಗಿ ಬಡ್ಡಿದರ ಹೆಚ್ಚಳ ಮಾಡದೇ ಆರ್ಥಿಕತೆಗೆ ಬೆಂಬಲ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.</p>.<p>ಹಣದುಬ್ಬರವನ್ನು ಗರಿಷ್ಠ ಶೇಕಡ 6ರ ಒಳಗೆ ನಿಯಂತ್ರಿಸುವಂತೆ ಕೇಂದ್ರ ಸರ್ಕಾರವು ಆರ್ಬಿಐಗೆ ಸೂಚಿಸಿದೆ. ಆದರೆ, ಸತತ ಮೂರು ತ್ರೈಮಾಸಿಕಗಳಲ್ಲಿ ಹಣದುಬ್ಬರವು ಶೇ 6ರ ಮಟ್ಟವನ್ನೂ ಮೀರಿದೆ.</p>.<p>ಬಡ್ಡಿದರವನ್ನು ಕಡಿಮೆ ಇರಿಸುವ ಮೂಲಕ ಹಾಗೂ ಮುಂಚಿತವಾಗಿಯೇ ಬಡ್ಡಿದರ ಹೆಚ್ಚಳ ಮಾಡದೆ, ಆರ್ಥಿಕತೆಯು ಸಂಪೂರ್ಣವಾಗಿ ಕುಸಿಯುದನ್ನು ತಡೆಯಲಾಗಿದೆ ಎಂದು ಅವರು ಎಫ್ಐಬಿಎಸಿ ಸಮಾವೇಶದಲ್ಲಿ ಹೇಳಿದ್ದಾರೆ.</p>.<p>ರೂಪಾಯಿ ಕುಸಿತದ ಬಗ್ಗೆ ಮಾತನಾಡಿದ ಅವರು, ‘ಪರಿಸ್ಥಿತಿಯನ್ನು ಭಾವನಾತ್ಮಕ ನೆಲೆಯಲ್ಲಿ ನೋಡಬಾರದು. ಅಮೆರಿಕದ ಡಾಲರ್ ಎದುರು ಇತರೆ ಕರೆನ್ಸಿಗಳಿಗೆ ಹೋಲಿಸಿದರೆ ಭಾರತದ ಕರೆನ್ಸಿಯು ಕಡಿಮೆ ಪ್ರಮಾಣದಲ್ಲಿ ಇಳಿಕೆ ಆಗಿದೆ. ಅಲ್ಲದೆ, ಇತರೆ ಕರೆನ್ಸಿಗಳ ಎದುರು ರೂಪಾಯಿ ಮೌಲ್ಯ ಹೆಚ್ಚಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>