<p><strong>ಭೂಪಾಲ್</strong>: ‘ಮಧ್ಯಪ್ರದೇಶದ ವಿವಿಧ ಯೋಜನೆಗಳಲ್ಲಿ ₹2.1 ಲಕ್ಷ ಕೋಟಿ ಮೊತ್ತದ ಬಂಡವಾಳವನ್ನು ಹೂಡಿಕೆ ಮಾಡಲಾಗುವುದು’ ಎಂದು ಅದಾನಿ ಸಮೂಹ ಘೋಷಿಸಿದೆ.</p>.<p>ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸೋಮವಾರ ಮಾತನಾಡಿದ ಸಮೂಹದ ಅಧ್ಯಕ್ಷ ಗೌತಮ್ ಅದಾನಿ, ಪಂಪ್ಡ್ ಸ್ಟೋರೇಜ್, ಸಿಮೆಂಟ್, ಗಣಿಗಾರಿಕೆ, ಥರ್ಮಲ್ ವಿದ್ಯುತ್ ಯೋಜನೆಗಳಲ್ಲಿ ₹1.10 ಲಕ್ಷ ಕೋಟಿ ಹೂಡಿಕೆ ಮಾಡಲಾಗುವುದು. ಸ್ಮಾರ್ಟ್ಸಿಟಿ, ವಿಮಾನ ನಿಲ್ದಾಣದ ಯೋಜನೆಯಲ್ಲಿ ₹1 ಲಕ್ಷ ಕೋಟಿ ಹೂಡಿಕೆ ಮಾಡಲಾಗುವುದು. ಇದು 2030ರ ವೇಳೆಗೆ 1.20 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಹೇಳಿದ್ದಾರೆ.</p>.<p>ಇಂಧನ, ಮೂಲಸೌಕರ್ಯ, ತಯಾರಿಕಾ, ಸರಕು, ಕೃಷಿ ವಲಯದಲ್ಲಿ ₹50 ಸಾವಿರ ಕೋಟಿಯನ್ನು ಈಗಾಗಲೇ ಹೂಡಿಕೆ ಮಾಡಲಾಗಿದೆ. ಇದು 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಿದೆ ಎಂದರು.</p>.<p>ಈ ಯೋಜನೆಗಳು ಕೇವಲ ಹೂಡಿಕೆಗಳ ಬಗ್ಗೆ ಅಲ್ಲ, ಬದಲಾಗಿ ರಾಜ್ಯವನ್ನು ಕೈಗಾರಿಕಾ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ರಾಷ್ಟ್ರೀಯ ನಾಯಕನನ್ನಾಗಿ ಮಾಡುವ ಮಹತ್ವದ ಮೈಲುಗಲ್ಲುಗಳಾಗಿವೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೂಪಾಲ್</strong>: ‘ಮಧ್ಯಪ್ರದೇಶದ ವಿವಿಧ ಯೋಜನೆಗಳಲ್ಲಿ ₹2.1 ಲಕ್ಷ ಕೋಟಿ ಮೊತ್ತದ ಬಂಡವಾಳವನ್ನು ಹೂಡಿಕೆ ಮಾಡಲಾಗುವುದು’ ಎಂದು ಅದಾನಿ ಸಮೂಹ ಘೋಷಿಸಿದೆ.</p>.<p>ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸೋಮವಾರ ಮಾತನಾಡಿದ ಸಮೂಹದ ಅಧ್ಯಕ್ಷ ಗೌತಮ್ ಅದಾನಿ, ಪಂಪ್ಡ್ ಸ್ಟೋರೇಜ್, ಸಿಮೆಂಟ್, ಗಣಿಗಾರಿಕೆ, ಥರ್ಮಲ್ ವಿದ್ಯುತ್ ಯೋಜನೆಗಳಲ್ಲಿ ₹1.10 ಲಕ್ಷ ಕೋಟಿ ಹೂಡಿಕೆ ಮಾಡಲಾಗುವುದು. ಸ್ಮಾರ್ಟ್ಸಿಟಿ, ವಿಮಾನ ನಿಲ್ದಾಣದ ಯೋಜನೆಯಲ್ಲಿ ₹1 ಲಕ್ಷ ಕೋಟಿ ಹೂಡಿಕೆ ಮಾಡಲಾಗುವುದು. ಇದು 2030ರ ವೇಳೆಗೆ 1.20 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಹೇಳಿದ್ದಾರೆ.</p>.<p>ಇಂಧನ, ಮೂಲಸೌಕರ್ಯ, ತಯಾರಿಕಾ, ಸರಕು, ಕೃಷಿ ವಲಯದಲ್ಲಿ ₹50 ಸಾವಿರ ಕೋಟಿಯನ್ನು ಈಗಾಗಲೇ ಹೂಡಿಕೆ ಮಾಡಲಾಗಿದೆ. ಇದು 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಿದೆ ಎಂದರು.</p>.<p>ಈ ಯೋಜನೆಗಳು ಕೇವಲ ಹೂಡಿಕೆಗಳ ಬಗ್ಗೆ ಅಲ್ಲ, ಬದಲಾಗಿ ರಾಜ್ಯವನ್ನು ಕೈಗಾರಿಕಾ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ರಾಷ್ಟ್ರೀಯ ನಾಯಕನನ್ನಾಗಿ ಮಾಡುವ ಮಹತ್ವದ ಮೈಲುಗಲ್ಲುಗಳಾಗಿವೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>