ಮುಂಬೈ: ತಜ್ಞರ ಸಮಿತಿಯು ಕಿರು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳ (ಎಂಎಸ್ಎಂಇ) ಸ್ಥಿತಿಗತಿಗಳ ಪರಿಶೀಲನಾ ವರದಿಯನ್ನು ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಸಲ್ಲಿಸಿದೆ ಎಂದು ಆರ್ಬಿಐ ತಿಳಿಸಿದೆ.
ಎಂಎಸ್ಎಂ ವಲಯದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆಆರ್ಬಿಐ, ಜನವರಿಯಲ್ಲಿ 8 ಸದಸ್ಯರ ಸಮಿತಿಯನ್ನು ರಚನೆ ಮಾಡಿತ್ತು.
ವಿವಿಧ ಷೇರುದಾರರ ಸಲಹೆಗಳನ್ನು ಪಡೆದುಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ (ಸೆಬಿ) ಮಾಜಿ ಅಧ್ಯಕ್ಷ ಯು.ಕೆ.ಸಿನ್ಹಾ ನೇತೃತ್ವದ ಸಮಿತಿಯು ತನ್ನ ವರದಿ ಸಲ್ಲಿಸಿದೆ ಎಂದು ಆರ್ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.
ವಲಯದ ಆರ್ಥಿಕ ಮತ್ತು ಹಣಕಾಸು ಸ್ಥಿರತೆಗೆ ದೀರ್ಘಾವಧಿಯ ಪರಿಹಾರ ಕ್ರಮಗಳು,ಇತ್ತೀಚಿನ ಆರ್ಥಿಕ ಸುಧಾರಣೆಗಳಿಂದ ವಲಯದ ಮೇಲೆ ಆಗಿರುವ ಪರಿಣಾಮಗಳು ಮತ್ತು ಪ್ರಗತಿಗೆ ಅಡ್ಡಿಯಾಗುತ್ತಿರುವ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿದೆ.