<p><strong>ನವದೆಹಲಿ: </strong>ಅಗ್ಗದ ದರದಲ್ಲಿ ಸಾಲ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (ಎಂಎಸ್ಎಂಇ) ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿವೆ.</p>.<p>ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಇಲ್ಲಿ ನಡೆಸಿದ ಸಭೆಯಲ್ಲಿ ಈ ಬೇಡಿಕೆ ಮುಂದಿಡಲಾಗಿದೆ. ವಿವಿಧ ವಲಯಗಳ ಪ್ರತಿನಿಧಿಗಳ ಜತೆ ಚರ್ಚೆ ನಡೆಸಲು ನಿರ್ಮಲಾ ನಿರ್ಧರಿಸಿದ್ದು, ಇದು ಮೊದಲ ಸಭೆಯಾಗಿದೆ.</p>.<p>ಬ್ಯಾಂಕ್ಗಳು ಸಕಾಲದಲ್ಲಿ ಸಾಲ ಮಂಜೂರು ಮಾಡಬೇಕು, ಸರ್ಕಾರಿ ಸ್ವಾಮ್ಯದ ಉದ್ದಿಮೆಗಳು ಹಣ ಪಾವತಿ ವಿಳಂಬ ಮಾಡಿದರೆ ಅವುಗಳ ವಿರುದ್ಧ ಸರ್ಕಾರ ದೂರು ದಾಖಲಿಸಬೇಕು ಎಂದು ಉದ್ಯಮಿಗಳು ಒತ್ತಾಯಿಸಿದ್ದಾರೆ.</p>.<p>‘ಎಂಎಸ್ಎಂಇ’ ವಲಯ ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಬ್ಯಾಂಕ್ಗಳು ವಾರದಲ್ಲಿ ಒಂದು ದಿನ ನಿಗದಿಪಡಿಸಲು ಸರ್ಕಾರ ಶೀಘ್ರದಲ್ಲಿಯೇ ಬ್ಯಾಂಕ್ಗಳಿಗೆ ಸೂಚಿಸುವ ಸಾಧ್ಯತೆ ಇದೆ.</p>.<p>‘ಎಂಎಸ್ಎಂಇ’ ಸಚಿವ ನಿತಿನ್ ಗಡ್ಕರಿ ಅವರೂ ಸಭೆಯಲ್ಲಿ ಭಾಗವಹಿಸಿದ್ದರು. ಒಟ್ಟು ಆಂತರಿಕ ಉತ್ಪನ್ನಕ್ಕೆ (ಜಿಡಿಪಿ) ಶೇ 29ರಷ್ಟು ಕೊಡುಗೆ ನೀಡುವ ಮತ್ತು ಗರಿಷ್ಠ ಪ್ರಮಾಣದಲ್ಲಿ ಉದ್ಯೋಗ ಅವಕಾಶಗಳನ್ನು ಒದಗಿ<br />ಸುವ ಈ ವಲಯಕ್ಕೆ ಅಗತ್ಯ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.</p>.<p>ಸಕಾಲದಲ್ಲಿ ಅಗತ್ಯ ಇರುವಷ್ಟು ಸಾಲ ಸಿಗದಿರುವುದು ಈ ವಲಯದ ಪ್ರಗತಿಗೆ ಪ್ರಮುಖ ಅಡ್ಡಿಯಾಗಿದೆ.</p>.<p>ಸಣ್ಣ ಉದ್ದಿಮೆದಾರರು ಬ್ಯಾಂಕೇತರ ವಲಯಗಳಿಂದ ದಾಖಲೆಗಳ ಕಿರಿಕಿರಿ ಇಲ್ಲದೆ ಆಸ್ತಿ ಅಡಮಾನ ಇರಿಸಿ ದುಬಾರಿ ಬಡ್ಡಿ ದರಕ್ಕೆ ಸುಲಭವಾಗಿ ಸಾಲ ಪಡೆಯುತ್ತಾರೆ. ಇದು ಹೊರೆಯಾಗಿ ಪರಿಣಮಿಸುತ್ತದೆ. ಬ್ಯಾಂಕ್ಗಳಿಂದ ಸುಲಭ ಸಾಲ ದೊರೆಯಬೇಕು ಮತ್ತು ಜಿಎಸ್ಟಿ ದರಗಳಲ್ಲಿ ರಿಯಾಯ್ತಿ ನೀಡಬೇಕು ಎನ್ನುವುದು ಈ ವಲಯದ ಪ್ರಮುಖ ಬೇಡಿಕೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಅಗ್ಗದ ದರದಲ್ಲಿ ಸಾಲ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (ಎಂಎಸ್ಎಂಇ) ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿವೆ.</p>.<p>ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಇಲ್ಲಿ ನಡೆಸಿದ ಸಭೆಯಲ್ಲಿ ಈ ಬೇಡಿಕೆ ಮುಂದಿಡಲಾಗಿದೆ. ವಿವಿಧ ವಲಯಗಳ ಪ್ರತಿನಿಧಿಗಳ ಜತೆ ಚರ್ಚೆ ನಡೆಸಲು ನಿರ್ಮಲಾ ನಿರ್ಧರಿಸಿದ್ದು, ಇದು ಮೊದಲ ಸಭೆಯಾಗಿದೆ.</p>.<p>ಬ್ಯಾಂಕ್ಗಳು ಸಕಾಲದಲ್ಲಿ ಸಾಲ ಮಂಜೂರು ಮಾಡಬೇಕು, ಸರ್ಕಾರಿ ಸ್ವಾಮ್ಯದ ಉದ್ದಿಮೆಗಳು ಹಣ ಪಾವತಿ ವಿಳಂಬ ಮಾಡಿದರೆ ಅವುಗಳ ವಿರುದ್ಧ ಸರ್ಕಾರ ದೂರು ದಾಖಲಿಸಬೇಕು ಎಂದು ಉದ್ಯಮಿಗಳು ಒತ್ತಾಯಿಸಿದ್ದಾರೆ.</p>.<p>‘ಎಂಎಸ್ಎಂಇ’ ವಲಯ ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಬ್ಯಾಂಕ್ಗಳು ವಾರದಲ್ಲಿ ಒಂದು ದಿನ ನಿಗದಿಪಡಿಸಲು ಸರ್ಕಾರ ಶೀಘ್ರದಲ್ಲಿಯೇ ಬ್ಯಾಂಕ್ಗಳಿಗೆ ಸೂಚಿಸುವ ಸಾಧ್ಯತೆ ಇದೆ.</p>.<p>‘ಎಂಎಸ್ಎಂಇ’ ಸಚಿವ ನಿತಿನ್ ಗಡ್ಕರಿ ಅವರೂ ಸಭೆಯಲ್ಲಿ ಭಾಗವಹಿಸಿದ್ದರು. ಒಟ್ಟು ಆಂತರಿಕ ಉತ್ಪನ್ನಕ್ಕೆ (ಜಿಡಿಪಿ) ಶೇ 29ರಷ್ಟು ಕೊಡುಗೆ ನೀಡುವ ಮತ್ತು ಗರಿಷ್ಠ ಪ್ರಮಾಣದಲ್ಲಿ ಉದ್ಯೋಗ ಅವಕಾಶಗಳನ್ನು ಒದಗಿ<br />ಸುವ ಈ ವಲಯಕ್ಕೆ ಅಗತ್ಯ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.</p>.<p>ಸಕಾಲದಲ್ಲಿ ಅಗತ್ಯ ಇರುವಷ್ಟು ಸಾಲ ಸಿಗದಿರುವುದು ಈ ವಲಯದ ಪ್ರಗತಿಗೆ ಪ್ರಮುಖ ಅಡ್ಡಿಯಾಗಿದೆ.</p>.<p>ಸಣ್ಣ ಉದ್ದಿಮೆದಾರರು ಬ್ಯಾಂಕೇತರ ವಲಯಗಳಿಂದ ದಾಖಲೆಗಳ ಕಿರಿಕಿರಿ ಇಲ್ಲದೆ ಆಸ್ತಿ ಅಡಮಾನ ಇರಿಸಿ ದುಬಾರಿ ಬಡ್ಡಿ ದರಕ್ಕೆ ಸುಲಭವಾಗಿ ಸಾಲ ಪಡೆಯುತ್ತಾರೆ. ಇದು ಹೊರೆಯಾಗಿ ಪರಿಣಮಿಸುತ್ತದೆ. ಬ್ಯಾಂಕ್ಗಳಿಂದ ಸುಲಭ ಸಾಲ ದೊರೆಯಬೇಕು ಮತ್ತು ಜಿಎಸ್ಟಿ ದರಗಳಲ್ಲಿ ರಿಯಾಯ್ತಿ ನೀಡಬೇಕು ಎನ್ನುವುದು ಈ ವಲಯದ ಪ್ರಮುಖ ಬೇಡಿಕೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>