<p><strong>ನವದೆಹಲಿ:</strong> ಕಿರು, ಸಣ್ಣ ಮತ್ತು ಮಧ್ಯಮ ಪ್ರಮಾಣದ (ಎಂಎಸ್ಎಂಇ) ಉದ್ಯಮಗಳಿಗೆ ನೆರವು ನೀಡುವ ಉದ್ದೇಶದಿಂದ ಹೆಚ್ಚುವರಿಯಾಗಿ 20 ತಂತ್ರಜ್ಞಾನ ಕೇಂದ್ರಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.</p>.<p>‘ಸುಧಾರಿತ ತಯಾರಿಕಾ ತಂತ್ರಜ್ಞಾನ, ಕೌಶಲವೃದ್ಧಿ, ತಾಂತ್ರಿಕ ಮತ್ತು ವಹಿವಾಟಿನ ಕುರಿತ ಸಲಹೆಗಳು ಈ ಕೇಂದ್ರಗಳಲ್ಲಿ ಲಭ್ಯವಾಗಲಿವೆ’ ಎಂದು ಎಂಎಸ್ಎಂಇ ಸಚಿವ ಗಿರಿರಾಜ್ ಸಿಂಗ್ ತಿಳಿಸಿದ್ದಾರೆ.</p>.<p>ಸಿಐಐನ ಜಾಗತಿಕ ಎಸ್ಎಂಇ ವಾಣಿಜ್ಯ ಶೃಂಗಸಭೆಯಲ್ಲಿ ಮಾತನಾಡಿದ ಅವರು, ‘ಸದ್ಯ ದೇಶದಾದ್ಯಂತ ವಿವಿಧ ರಾಜ್ಯಗಳಲ್ಲಿ 10 ಕೇಂದ್ರಗಳು ಕಾರ್ಯಾಚರಣೆ ನಡೆಸುತ್ತಿವೆ. ಇನ್ನೂ 20 ಕೇಂದ್ರಗಳನ್ನು ಸ್ಥಾಪಿಸಲು ಅನುಮತಿ ದೊರೆತಿದೆ’ ಎಂದು ವಿವರಿಸಿದ್ದಾರೆ.</p>.<p>‘ವಲಯವು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದೆ. ನಿಗದಿತ ಅವಧಿಗೆ ನಗದು ಲಭ್ಯವಾಗುವಂತೆಯೂ ಮಾಡಲಾಗುವುದು.</p>.<p>‘ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ (ಪಿಎಂಇಜಿಪಿ) ಹಾಗೂ ನಗದು ಖಾತರಿ ನಿಧಿ ಟ್ರಸ್ಟ್ ಯೋಜನೆಗಳಿಂದಾಗಿ ವಲಯದಿಂದ 19 ಲಕ್ಷ ಹೊಸ ಉದ್ಯಮಿಗಳು ಸೃಷ್ಟಿಯಾಗಿದ್ದಾರೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಿರು, ಸಣ್ಣ ಮತ್ತು ಮಧ್ಯಮ ಪ್ರಮಾಣದ (ಎಂಎಸ್ಎಂಇ) ಉದ್ಯಮಗಳಿಗೆ ನೆರವು ನೀಡುವ ಉದ್ದೇಶದಿಂದ ಹೆಚ್ಚುವರಿಯಾಗಿ 20 ತಂತ್ರಜ್ಞಾನ ಕೇಂದ್ರಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.</p>.<p>‘ಸುಧಾರಿತ ತಯಾರಿಕಾ ತಂತ್ರಜ್ಞಾನ, ಕೌಶಲವೃದ್ಧಿ, ತಾಂತ್ರಿಕ ಮತ್ತು ವಹಿವಾಟಿನ ಕುರಿತ ಸಲಹೆಗಳು ಈ ಕೇಂದ್ರಗಳಲ್ಲಿ ಲಭ್ಯವಾಗಲಿವೆ’ ಎಂದು ಎಂಎಸ್ಎಂಇ ಸಚಿವ ಗಿರಿರಾಜ್ ಸಿಂಗ್ ತಿಳಿಸಿದ್ದಾರೆ.</p>.<p>ಸಿಐಐನ ಜಾಗತಿಕ ಎಸ್ಎಂಇ ವಾಣಿಜ್ಯ ಶೃಂಗಸಭೆಯಲ್ಲಿ ಮಾತನಾಡಿದ ಅವರು, ‘ಸದ್ಯ ದೇಶದಾದ್ಯಂತ ವಿವಿಧ ರಾಜ್ಯಗಳಲ್ಲಿ 10 ಕೇಂದ್ರಗಳು ಕಾರ್ಯಾಚರಣೆ ನಡೆಸುತ್ತಿವೆ. ಇನ್ನೂ 20 ಕೇಂದ್ರಗಳನ್ನು ಸ್ಥಾಪಿಸಲು ಅನುಮತಿ ದೊರೆತಿದೆ’ ಎಂದು ವಿವರಿಸಿದ್ದಾರೆ.</p>.<p>‘ವಲಯವು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದೆ. ನಿಗದಿತ ಅವಧಿಗೆ ನಗದು ಲಭ್ಯವಾಗುವಂತೆಯೂ ಮಾಡಲಾಗುವುದು.</p>.<p>‘ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ (ಪಿಎಂಇಜಿಪಿ) ಹಾಗೂ ನಗದು ಖಾತರಿ ನಿಧಿ ಟ್ರಸ್ಟ್ ಯೋಜನೆಗಳಿಂದಾಗಿ ವಲಯದಿಂದ 19 ಲಕ್ಷ ಹೊಸ ಉದ್ಯಮಿಗಳು ಸೃಷ್ಟಿಯಾಗಿದ್ದಾರೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>