<p><strong>ನವದೆಹಲಿ: </strong>ಮುಂಗಾರು ಬಿತ್ತನೆ ಹಂಗಾಮಿಗೆ ಸಂಬಂಧಿಸಿದಂತೆ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಹೆಚ್ಚಳಕ್ಕೆ ಅನುಮೋದನೆ ನೀಡುವ ಮೂಲಕ ಕೇಂದ್ರ ಸಚಿವ ಸಂಪುಟ ಬುಧವಾರ ಮಹತ್ವದ ನಿರ್ಧಾರ ಕೈಗೊಂಡಿದೆ.</p>.<p>ಬಿಹಾರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ಎಂಎಸ್ಪಿ ಕುರಿತ ಕೃಷಿ ಸಚಿವಾಲಯದ ಪ್ರಸ್ತಾವವನ್ನು ಅನುಮೋದಿಸಲಾಗಿದೆ.</p>.<p>‘ದೇಶದ ವಿವಿಧ ಭಾಗಗಳಲ್ಲಿ ಮುಂಗಾರು ಬಹಳ ಬೇಗ ಪ್ರವೇಶಿಸಿದೆ. ದೇಶದ ಒಟ್ಟು ವಾರ್ಷಿಕ ಆಹಾರ ಧಾನ್ಯ ಉತ್ಪಾದನೆಗೆ ಶೇ 50ಕ್ಕಿಂತ ಹೆಚ್ಚು ಕೊಡುಗೆ ನೀಡುವ ಬೆಳೆಗಳ ಬಿತ್ತನೆಗೆ ಉತ್ತೇಜನ ನೀಡಲು ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗಾರರಿಗೆ ಇಲ್ಲಿ ತಿಳಿಸಿದರು. </p>.<p>‘ರೈತರು ತಮ್ಮ ಬೆಳೆಗಳಿಗೆ ಲಾಭದಾಯಕ ಬೆಲೆಗಳನ್ನು ಖಚಿತಪಡಿಸಿಕೊಳ್ಳಲು ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲಾಗಿದೆ. ಹುಚ್ಚೆಳ್ಳು (ಪ್ರತಿ ಕ್ವಿಂಟಲ್ಗೆ ₹820), ರಾಗಿ (ಪ್ರತಿ ಕ್ವಿಂಟಲ್ಗೆ ₹596), ಹತ್ತಿ (ಪ್ರತಿ ಕ್ವಿಂಟಲ್ಗೆ ₹589) ಮತ್ತು ಎಳ್ಳು (ಪ್ರತಿ ಕ್ವಿಂಟಲ್ಗೆ ₹579) ಅತ್ಯಧಿಕ ಬೆಂಬಲ ಬೆಲೆಯನ್ನು ಶಿಫಾರಸು ಮಾಡಲಾಗಿದೆ’ ಎಂದು ಅವರು ಹೇಳಿದರು.</p>.<p>ಭತ್ತಕ್ಕೆ ನೀಡುವ ಕನಿಷ್ಠ ಬೆಂಬಲ ಬೆಲೆಯು ಪ್ರತಿ ಕ್ವಿಂಟಲ್ಗೆ ಶೇ 3 (₹69), ದ್ವಿದಳ ಧಾನ್ಯಗಳು ಹಾಗೂ ಎಣ್ಣೆಬೀಜಗಳ ಎಂಎಸ್ಪಿ ಶೇ 9ರಷ್ಟು ಹೆಚ್ಚಳವಾಗಿದೆ. ದೇಶೀಯ ಉತ್ಪಾದನೆ ಹೆಚ್ಚಿಸಲು ಹಾಗೂ ಆಮದು ಅವಲಂಬನೆ ಕಡಿಮೆ ಮಾಡಲು ದೊಡ್ಡ ಪ್ರಮಾಣದಲ್ಲಿ ಬೆಂಬಲ ಬೆಲೆ ಜಾಸ್ತಿ ಮಾಡಲಾಗಿದೆ ಎಂದರು. </p>.<p>‘14 ಬೆಳೆಗಳಿಗೆ ನೀಡಲಾಗುವ ಕನಿಷ್ಠ ಬೆಂಬಲ ಬೆಲೆಯು ಉತ್ಪಾದನೆ ವೆಚ್ಚದ ಒಂದೂವರೆ ಪಟ್ಟು ಇರಲಿದೆ. 2018ರಲ್ಲಿ ಮಂಡಿಸಿದ ಬಜೆಟ್ನಲ್ಲಿ ಈ ಕುರಿತ ಸ್ಪಷ್ಟ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿತ್ತು. ಆ ನೀತಿಗೆ ಅನುಗುಣವಾಗಿ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ಅವರು ಮಾಹಿತಿ ನೀಡಿದರು. </p>.<p>ಕಳೆದ 10-11 ವರ್ಷಗಳಲ್ಲಿ, ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ ಶಿಫಾರಸಿಗೆ ಅನುಗುಣವಾಗಿ 14 ಬೆಳೆಗಳ ಎಂಎಸ್ಪಿಯಲ್ಲಿ ಭಾರಿ ಹೆಚ್ಚಳವಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಮುಂಗಾರು ಬಿತ್ತನೆ ಹಂಗಾಮಿಗೆ ಸಂಬಂಧಿಸಿದಂತೆ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಹೆಚ್ಚಳಕ್ಕೆ ಅನುಮೋದನೆ ನೀಡುವ ಮೂಲಕ ಕೇಂದ್ರ ಸಚಿವ ಸಂಪುಟ ಬುಧವಾರ ಮಹತ್ವದ ನಿರ್ಧಾರ ಕೈಗೊಂಡಿದೆ.</p>.<p>ಬಿಹಾರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ಎಂಎಸ್ಪಿ ಕುರಿತ ಕೃಷಿ ಸಚಿವಾಲಯದ ಪ್ರಸ್ತಾವವನ್ನು ಅನುಮೋದಿಸಲಾಗಿದೆ.</p>.<p>‘ದೇಶದ ವಿವಿಧ ಭಾಗಗಳಲ್ಲಿ ಮುಂಗಾರು ಬಹಳ ಬೇಗ ಪ್ರವೇಶಿಸಿದೆ. ದೇಶದ ಒಟ್ಟು ವಾರ್ಷಿಕ ಆಹಾರ ಧಾನ್ಯ ಉತ್ಪಾದನೆಗೆ ಶೇ 50ಕ್ಕಿಂತ ಹೆಚ್ಚು ಕೊಡುಗೆ ನೀಡುವ ಬೆಳೆಗಳ ಬಿತ್ತನೆಗೆ ಉತ್ತೇಜನ ನೀಡಲು ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗಾರರಿಗೆ ಇಲ್ಲಿ ತಿಳಿಸಿದರು. </p>.<p>‘ರೈತರು ತಮ್ಮ ಬೆಳೆಗಳಿಗೆ ಲಾಭದಾಯಕ ಬೆಲೆಗಳನ್ನು ಖಚಿತಪಡಿಸಿಕೊಳ್ಳಲು ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲಾಗಿದೆ. ಹುಚ್ಚೆಳ್ಳು (ಪ್ರತಿ ಕ್ವಿಂಟಲ್ಗೆ ₹820), ರಾಗಿ (ಪ್ರತಿ ಕ್ವಿಂಟಲ್ಗೆ ₹596), ಹತ್ತಿ (ಪ್ರತಿ ಕ್ವಿಂಟಲ್ಗೆ ₹589) ಮತ್ತು ಎಳ್ಳು (ಪ್ರತಿ ಕ್ವಿಂಟಲ್ಗೆ ₹579) ಅತ್ಯಧಿಕ ಬೆಂಬಲ ಬೆಲೆಯನ್ನು ಶಿಫಾರಸು ಮಾಡಲಾಗಿದೆ’ ಎಂದು ಅವರು ಹೇಳಿದರು.</p>.<p>ಭತ್ತಕ್ಕೆ ನೀಡುವ ಕನಿಷ್ಠ ಬೆಂಬಲ ಬೆಲೆಯು ಪ್ರತಿ ಕ್ವಿಂಟಲ್ಗೆ ಶೇ 3 (₹69), ದ್ವಿದಳ ಧಾನ್ಯಗಳು ಹಾಗೂ ಎಣ್ಣೆಬೀಜಗಳ ಎಂಎಸ್ಪಿ ಶೇ 9ರಷ್ಟು ಹೆಚ್ಚಳವಾಗಿದೆ. ದೇಶೀಯ ಉತ್ಪಾದನೆ ಹೆಚ್ಚಿಸಲು ಹಾಗೂ ಆಮದು ಅವಲಂಬನೆ ಕಡಿಮೆ ಮಾಡಲು ದೊಡ್ಡ ಪ್ರಮಾಣದಲ್ಲಿ ಬೆಂಬಲ ಬೆಲೆ ಜಾಸ್ತಿ ಮಾಡಲಾಗಿದೆ ಎಂದರು. </p>.<p>‘14 ಬೆಳೆಗಳಿಗೆ ನೀಡಲಾಗುವ ಕನಿಷ್ಠ ಬೆಂಬಲ ಬೆಲೆಯು ಉತ್ಪಾದನೆ ವೆಚ್ಚದ ಒಂದೂವರೆ ಪಟ್ಟು ಇರಲಿದೆ. 2018ರಲ್ಲಿ ಮಂಡಿಸಿದ ಬಜೆಟ್ನಲ್ಲಿ ಈ ಕುರಿತ ಸ್ಪಷ್ಟ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿತ್ತು. ಆ ನೀತಿಗೆ ಅನುಗುಣವಾಗಿ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ಅವರು ಮಾಹಿತಿ ನೀಡಿದರು. </p>.<p>ಕಳೆದ 10-11 ವರ್ಷಗಳಲ್ಲಿ, ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ ಶಿಫಾರಸಿಗೆ ಅನುಗುಣವಾಗಿ 14 ಬೆಳೆಗಳ ಎಂಎಸ್ಪಿಯಲ್ಲಿ ಭಾರಿ ಹೆಚ್ಚಳವಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>