<p><strong>ಬೆಂಗಳೂರು</strong>: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ನ (ನಬಾರ್ಡ್) 39ನೇ ಸಂಸ್ಥಾಪನಾ ದಿನವನ್ನು ಸೋಮವಾರ ಆಚರಿಸಲಾಯಿತು.</p>.<p>ಇದೇ ವೇಳೆ 1982ರ ಜುಲೈ 12ರಂದು ಸ್ಥಾಪನೆ ಆದಾಗಿನಿಂದ ನಬಾರ್ಡ್ ಸಂಸ್ಥೆಯು ಕರ್ನಾಟಕ ರಾಜ್ಯಕ್ಕೆ ನೀಡಿದ ಕೊಡುಗೆಯ ಬಗ್ಗೆ ವಿವರಿಸುವ ‘38 ವರ್ಷಗಳ ಪ್ರಯಾಣ’ ಹೆಸರಿನ ಕಿರು ಪುಸ್ತಕ ಬಿಡುಗಡೆ ಮಾಡಲಾಗಿದೆ.</p>.<p>ರಾಜ್ಯದಲ್ಲಿ ಶೇ 75 ರಷ್ಟು ವ್ಯವಸಾಯ ಭೂಮಿಯು ಮಳೆ ಆಧಾರಿತವಾಗಿದ್ದು, ಇದರಿಂದಾಗಿ ರೈತರು ಎದುರಿಸುವ ಸಂಕಷ್ಟವನ್ನು ತೊಡೆದುಹಾಕಲು ನಬಾರ್ಡ್ ಕರ್ನಾಟಕ ಕ್ಷೆತ್ರದ ಕಾರ್ಯಾಲಯವು ಕೇಂದ್ರೀಕೃತವಾಗಿ ಜಲಾನಯನ ಯೋಜನೆಗಳನ್ನು ಹಮ್ಮಿಕೊಳ್ಳುತ್ತಲೇ ಬರುತ್ತಿದೆ. ಹೀಗಾಗಿ, ಈ ವರ್ಷದ ಸ್ಥಾಪನಾ ದಿನಾಚರಣೆಯನ್ನು ‘ಜಲಾನಯನ ಯೋಜನೆಗಳ ಮೂಲಕ ಅಭಿವೃದ್ಧಿ’ ಎಂದು ಆಚರಿಸಲಾಯಿತು.</p>.<p>ಜಲಾನಯನ ಅಭಿವೃದ್ಧಿ ನಿಧಿ ಅಡಿಯಲ್ಲಿ, ರಾಜ್ಯದಲ್ಲಿ ಇದುವರೆಗೂ 298 ಜಲಾನಯನ ಯೋಜನೆಗಳನ್ನು ಉತ್ತೇಜಿಸಿ ₹ 221.89 ಕೋಟಿಗಳ ಅನುದಾನ ನೀಡಲಾಗಿದೆ.3.04 ಲಕ್ಷ ಹೆಕ್ಟೇರ್ ಪ್ರದೇಶವನ್ನು ಅಭಿವೃದ್ಧಿಗೊಳಿಸುವ ಮೂಲಕ 66,500 ಕುಟುಂಬಗಳು ಇದರ ಲಾಭ ಪಡೆದುಕೊಂಡಿವೆ. ಈ ಯೋಜನೆಗಳಿಂದ ಬೆಳೆ ಇಳುವರಿ ಹೆಚ್ಚಾಗಿದೆ, ಪರ್ಯಾಯ ಬೆಳೆಗಳೂ ಹೆಚ್ಚಿವೆ, ಮಣ್ಣು ಮತ್ತು ಜಲ ಸಂರಕ್ಷಣೆಯಾಗಿದೆ ಹಾಗೂ ಫಲಾನುಭವಿಗಳ ಸಾಮಾಜಿಕ ಮತ್ತು ಆರ್ಥಿಕ ಮಟ್ಟವೂ ಸುಧಾರಿಸಿದೆ.</p>.<p>ರಾಜ್ಯದಲ್ಲಿ ‘ಕೋವಿಡ್-19’ನಿಂದ ಗ್ರಾಮೀಣ ಜನರ ಮೇಲೆ ಆಗಿರುವ ಪರಿಣಾಮಗಳನ್ನು ಎದುರಿಸುವ ಸಲುವಾಗಿ, ಬ್ಯಾಂಕುಗಳಿಗೆ ಹೆಚ್ಚಿನ ಸಾಲ ಒದಗಿಸಲು ಈ ವರ್ಷ ₹ 2,200 ಕೋಟಿಗಳನ್ನು ವಿಶೇಷ ಸಾಲ ಯೋಜನೆಯಡಿಯಲ್ಲಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳಿಗೆ ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ ಬಿಡುಗಡೆ ಮಾಡಿದೆ. ಈ ಮೊತ್ತವು ಬ್ಯಾಂಕೇತರ ಮತ್ತು ಕಿರು ಹಣಕಾಸು ಸಂಸ್ಥೆಗಳಿಗಿಂತಲೂ ಹೆಚ್ಚಿಗೆ ಇದೆ.</p>.<p>ನಬಾರ್ಡ್ ಸಂಸ್ಥೆಯು ಕೃಷಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಸಾಲ ಕೊಡುವುದಲ್ಲದೇ, ರೈತ ಉತ್ಪಾದಕ ಸಂಘಗಳ ಸ್ಥಾಪನೆ,ಬುಡಕಟ್ಟು ಅಭಿವೃದ್ಧಿ ಯೋಜನೆಗಳು, ಗ್ರಾಮೀಣ ನಿರುದ್ಯೋಗಿ ಯುವಕರಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು, ಸ್ವ-ಸಹಾಯ ಸಂಘಗಳು ಹಾಗೂ ಜಂಟಿ ಬಾಧ್ಯತಾ ಗುಂಪುಗಳ ಸ್ಥಾಪನೆಗೂ ಆದ್ಯತೆ ನೀಡುತ್ತಿದೆ. ‘ಕೋವಿಡ್-19’ನಿಂದಾಗಿ ತಮ್ಮ ಸ್ವಗ್ರಾಮಗಳಿಗೆ ಹಿಂತಿರುಗಿದ ಗ್ರಾಮೀಣ ಯುವಕರಿಗೆಸಂಸ್ಥೆಯ ಹಲವು ಅಭಿವೃದ್ಧಿಪರ ಯೋಜನೆಗಳು ನೆರವಾಗಿದ್ದು, ಉದ್ಯೋಗ ಹಾಗೂ ಜೀವನಾಧಾರ ಕಲ್ಪಿಸಿಕೊಡಲಾಗಿದೆ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ನ (ನಬಾರ್ಡ್) 39ನೇ ಸಂಸ್ಥಾಪನಾ ದಿನವನ್ನು ಸೋಮವಾರ ಆಚರಿಸಲಾಯಿತು.</p>.<p>ಇದೇ ವೇಳೆ 1982ರ ಜುಲೈ 12ರಂದು ಸ್ಥಾಪನೆ ಆದಾಗಿನಿಂದ ನಬಾರ್ಡ್ ಸಂಸ್ಥೆಯು ಕರ್ನಾಟಕ ರಾಜ್ಯಕ್ಕೆ ನೀಡಿದ ಕೊಡುಗೆಯ ಬಗ್ಗೆ ವಿವರಿಸುವ ‘38 ವರ್ಷಗಳ ಪ್ರಯಾಣ’ ಹೆಸರಿನ ಕಿರು ಪುಸ್ತಕ ಬಿಡುಗಡೆ ಮಾಡಲಾಗಿದೆ.</p>.<p>ರಾಜ್ಯದಲ್ಲಿ ಶೇ 75 ರಷ್ಟು ವ್ಯವಸಾಯ ಭೂಮಿಯು ಮಳೆ ಆಧಾರಿತವಾಗಿದ್ದು, ಇದರಿಂದಾಗಿ ರೈತರು ಎದುರಿಸುವ ಸಂಕಷ್ಟವನ್ನು ತೊಡೆದುಹಾಕಲು ನಬಾರ್ಡ್ ಕರ್ನಾಟಕ ಕ್ಷೆತ್ರದ ಕಾರ್ಯಾಲಯವು ಕೇಂದ್ರೀಕೃತವಾಗಿ ಜಲಾನಯನ ಯೋಜನೆಗಳನ್ನು ಹಮ್ಮಿಕೊಳ್ಳುತ್ತಲೇ ಬರುತ್ತಿದೆ. ಹೀಗಾಗಿ, ಈ ವರ್ಷದ ಸ್ಥಾಪನಾ ದಿನಾಚರಣೆಯನ್ನು ‘ಜಲಾನಯನ ಯೋಜನೆಗಳ ಮೂಲಕ ಅಭಿವೃದ್ಧಿ’ ಎಂದು ಆಚರಿಸಲಾಯಿತು.</p>.<p>ಜಲಾನಯನ ಅಭಿವೃದ್ಧಿ ನಿಧಿ ಅಡಿಯಲ್ಲಿ, ರಾಜ್ಯದಲ್ಲಿ ಇದುವರೆಗೂ 298 ಜಲಾನಯನ ಯೋಜನೆಗಳನ್ನು ಉತ್ತೇಜಿಸಿ ₹ 221.89 ಕೋಟಿಗಳ ಅನುದಾನ ನೀಡಲಾಗಿದೆ.3.04 ಲಕ್ಷ ಹೆಕ್ಟೇರ್ ಪ್ರದೇಶವನ್ನು ಅಭಿವೃದ್ಧಿಗೊಳಿಸುವ ಮೂಲಕ 66,500 ಕುಟುಂಬಗಳು ಇದರ ಲಾಭ ಪಡೆದುಕೊಂಡಿವೆ. ಈ ಯೋಜನೆಗಳಿಂದ ಬೆಳೆ ಇಳುವರಿ ಹೆಚ್ಚಾಗಿದೆ, ಪರ್ಯಾಯ ಬೆಳೆಗಳೂ ಹೆಚ್ಚಿವೆ, ಮಣ್ಣು ಮತ್ತು ಜಲ ಸಂರಕ್ಷಣೆಯಾಗಿದೆ ಹಾಗೂ ಫಲಾನುಭವಿಗಳ ಸಾಮಾಜಿಕ ಮತ್ತು ಆರ್ಥಿಕ ಮಟ್ಟವೂ ಸುಧಾರಿಸಿದೆ.</p>.<p>ರಾಜ್ಯದಲ್ಲಿ ‘ಕೋವಿಡ್-19’ನಿಂದ ಗ್ರಾಮೀಣ ಜನರ ಮೇಲೆ ಆಗಿರುವ ಪರಿಣಾಮಗಳನ್ನು ಎದುರಿಸುವ ಸಲುವಾಗಿ, ಬ್ಯಾಂಕುಗಳಿಗೆ ಹೆಚ್ಚಿನ ಸಾಲ ಒದಗಿಸಲು ಈ ವರ್ಷ ₹ 2,200 ಕೋಟಿಗಳನ್ನು ವಿಶೇಷ ಸಾಲ ಯೋಜನೆಯಡಿಯಲ್ಲಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳಿಗೆ ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ ಬಿಡುಗಡೆ ಮಾಡಿದೆ. ಈ ಮೊತ್ತವು ಬ್ಯಾಂಕೇತರ ಮತ್ತು ಕಿರು ಹಣಕಾಸು ಸಂಸ್ಥೆಗಳಿಗಿಂತಲೂ ಹೆಚ್ಚಿಗೆ ಇದೆ.</p>.<p>ನಬಾರ್ಡ್ ಸಂಸ್ಥೆಯು ಕೃಷಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಸಾಲ ಕೊಡುವುದಲ್ಲದೇ, ರೈತ ಉತ್ಪಾದಕ ಸಂಘಗಳ ಸ್ಥಾಪನೆ,ಬುಡಕಟ್ಟು ಅಭಿವೃದ್ಧಿ ಯೋಜನೆಗಳು, ಗ್ರಾಮೀಣ ನಿರುದ್ಯೋಗಿ ಯುವಕರಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು, ಸ್ವ-ಸಹಾಯ ಸಂಘಗಳು ಹಾಗೂ ಜಂಟಿ ಬಾಧ್ಯತಾ ಗುಂಪುಗಳ ಸ್ಥಾಪನೆಗೂ ಆದ್ಯತೆ ನೀಡುತ್ತಿದೆ. ‘ಕೋವಿಡ್-19’ನಿಂದಾಗಿ ತಮ್ಮ ಸ್ವಗ್ರಾಮಗಳಿಗೆ ಹಿಂತಿರುಗಿದ ಗ್ರಾಮೀಣ ಯುವಕರಿಗೆಸಂಸ್ಥೆಯ ಹಲವು ಅಭಿವೃದ್ಧಿಪರ ಯೋಜನೆಗಳು ನೆರವಾಗಿದ್ದು, ಉದ್ಯೋಗ ಹಾಗೂ ಜೀವನಾಧಾರ ಕಲ್ಪಿಸಿಕೊಡಲಾಗಿದೆ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>