<p><strong>ಅಹಮದಾಬಾದ್:</strong> ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಭಾರತದ ಅಜೇಯ ರಕ್ಷಾ ಕವಚ’ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ಅಧ್ಯಕ್ಷ ಮುಕೇಶ್ ಅಂಬಾನಿ ಬಣ್ಣಿಸಿದ್ದಾರೆ.</p>.<p>‘ಜಗತ್ತು ತ್ವರಿತವಾಗಿ ಬದಲಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನಿಂದ ಹೊಸ ಸವಾಲುಗಳು ಮತ್ತು ಅನಿರೀಕ್ಷಿತ ಪ್ರಕ್ಷುಬ್ಧತೆ ಸೃಷ್ಟಿಯಾಗಿದೆ. ದೇಶಕ್ಕೆ ಧೈರ್ಯ ತುಂಬುವ ವಿಷಯವೆಂದರೆ ಈ ಸವಾಲುಗಳು ಭಾರತವನ್ನು ತಲುಪುವುದಿಲ್ಲ ಅಥವಾ ದೇಶದ ಜನರಿಗೆ ಸಮಸ್ಯೆ ಉಂಟು ಮಾಡುವುದಿಲ್ಲ. ಏಕೆಂದರೆ, ಪ್ರಧಾನಿ ಮೋದಿ ಅವರು ದೇಶದ ಅಜೇಯ ರಕ್ಷಾ ಕವಚವಾಗಿ ರಕ್ಷಣೆ ನೀಡುತ್ತಿದ್ದಾರೆ’ ಎಂದು ಇಲ್ಲಿ ನಡೆದ ‘ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನ’ದಲ್ಲಿ (ವಿಜಿಆರ್ಸಿ) ಭಾನುವಾರ ಹೇಳಿದ್ದಾರೆ. </p>.<p>‘ಭಾರತವು ಭವಿಷ್ಯಕ್ಕಾಗಿ ತಯಾರಿಯನ್ನಷ್ಟೇ ನಡೆಸುತ್ತಿಲ್ಲ; ಅದು ಭವಿಷ್ಯವನ್ನು ರೂಪಿಸುವ ಕೆಲಸವನ್ನೂ ಮಾಡುತ್ತಿದೆ ಎಂದ ಅವರು, ಕಳೆದ ಐದು ವರ್ಷಗಳಲ್ಲಿ ಗುಜರಾತ್ನಲ್ಲಿ ₹3.5 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ಮಾಡಿದ್ದೇವೆ. ಮುಂದಿನ ಐದು ವರ್ಷಗಳಲ್ಲಿ ₹7 ಲಕ್ಷ ಕೋಟಿ ಹೂಡಿಕೆ ಮಾಡಲು ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ. </p>.<div><blockquote>ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಅನಿಶ್ಚಿತತೆ ನಡುವೆಯೂ ಭಾರತವು ಬೆಳವಣಿಗೆ ಕಾಣುತ್ತಿದೆ. ಇದು ಶ್ಲಾಘನೀಯ</blockquote><span class="attribution">ಮುಕೇಶ್ ಅಂಬಾನಿ, ಅಧ್ಯಕ್ಷ, ರಿಲಯನ್ಸ್ ಇಂಡಸ್ಟ್ರೀಸ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಭಾರತದ ಅಜೇಯ ರಕ್ಷಾ ಕವಚ’ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ಅಧ್ಯಕ್ಷ ಮುಕೇಶ್ ಅಂಬಾನಿ ಬಣ್ಣಿಸಿದ್ದಾರೆ.</p>.<p>‘ಜಗತ್ತು ತ್ವರಿತವಾಗಿ ಬದಲಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನಿಂದ ಹೊಸ ಸವಾಲುಗಳು ಮತ್ತು ಅನಿರೀಕ್ಷಿತ ಪ್ರಕ್ಷುಬ್ಧತೆ ಸೃಷ್ಟಿಯಾಗಿದೆ. ದೇಶಕ್ಕೆ ಧೈರ್ಯ ತುಂಬುವ ವಿಷಯವೆಂದರೆ ಈ ಸವಾಲುಗಳು ಭಾರತವನ್ನು ತಲುಪುವುದಿಲ್ಲ ಅಥವಾ ದೇಶದ ಜನರಿಗೆ ಸಮಸ್ಯೆ ಉಂಟು ಮಾಡುವುದಿಲ್ಲ. ಏಕೆಂದರೆ, ಪ್ರಧಾನಿ ಮೋದಿ ಅವರು ದೇಶದ ಅಜೇಯ ರಕ್ಷಾ ಕವಚವಾಗಿ ರಕ್ಷಣೆ ನೀಡುತ್ತಿದ್ದಾರೆ’ ಎಂದು ಇಲ್ಲಿ ನಡೆದ ‘ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನ’ದಲ್ಲಿ (ವಿಜಿಆರ್ಸಿ) ಭಾನುವಾರ ಹೇಳಿದ್ದಾರೆ. </p>.<p>‘ಭಾರತವು ಭವಿಷ್ಯಕ್ಕಾಗಿ ತಯಾರಿಯನ್ನಷ್ಟೇ ನಡೆಸುತ್ತಿಲ್ಲ; ಅದು ಭವಿಷ್ಯವನ್ನು ರೂಪಿಸುವ ಕೆಲಸವನ್ನೂ ಮಾಡುತ್ತಿದೆ ಎಂದ ಅವರು, ಕಳೆದ ಐದು ವರ್ಷಗಳಲ್ಲಿ ಗುಜರಾತ್ನಲ್ಲಿ ₹3.5 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ಮಾಡಿದ್ದೇವೆ. ಮುಂದಿನ ಐದು ವರ್ಷಗಳಲ್ಲಿ ₹7 ಲಕ್ಷ ಕೋಟಿ ಹೂಡಿಕೆ ಮಾಡಲು ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ. </p>.<div><blockquote>ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಅನಿಶ್ಚಿತತೆ ನಡುವೆಯೂ ಭಾರತವು ಬೆಳವಣಿಗೆ ಕಾಣುತ್ತಿದೆ. ಇದು ಶ್ಲಾಘನೀಯ</blockquote><span class="attribution">ಮುಕೇಶ್ ಅಂಬಾನಿ, ಅಧ್ಯಕ್ಷ, ರಿಲಯನ್ಸ್ ಇಂಡಸ್ಟ್ರೀಸ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>