ಕೃತಕ ಬುದ್ಧಿಮತ್ತೆ, ಮಷಿನ್ ಲರ್ನಿಂಗ್, ಬ್ಲಾಕ್ಚೇನ್, ರೋಬೊಟಿಕ್ಸ್ ಮತ್ತಿತರ ಹೊಸ ತಂತ್ರಜ್ಞಾನ ಕ್ಷೇತ್ರದಲ್ಲಿ ದುಡಿಯುವ ತಂತ್ರಜ್ಞರ ಕೌಶಲ ಹೆಚ್ಚಿಸಲು ಸಿಎಸ್ಆರ್ ನಿಧಿಯನ್ನು ಬಳಸಿಕೊಳ್ಳಲು ನಾವು ಉದ್ದೇಶಿಸಿದ್ದೇವೆ. ಈ ಹೊಸ ತಂತ್ರಜ್ಞಾನಗಳ ನೆರವಿನಿಂದ ದಿನನಿತ್ಯ ಎದುರಾಗುವ ಹೊಸ ಹೊಸ ಸಮಸ್ಯೆಗಳನ್ನು ಬಗೆಹರಿಸಿ, ಜನಸಾಮಾನ್ಯರ ಬದುಕು ಸುಧಾರಿಸಲು ನೆರವಾಗುತ್ತಿದ್ದೇವೆ. ಸದ್ಯದ ಸವಾಲುಗಳನ್ನು ಎದುರಿಸುವುದರ ಜತೆಗೆ, ಈ ಹೊಸ ತಂತ್ರಜ್ಞಾನಗಳ ಸವಾಲು ಮತ್ತು ಅವಕಾಶಗಳ ಕುರಿತು ಈ ಸಮ್ಮೇಳನದಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ’ ಎಂದು ನಾಸ್ಕಾಂ ಫೌಂಡೇಷನ್ ಸಿಇಒ ಅಶೋಕ್ ಪಮಿದಿ ಹೇಳಿದ್ದಾರೆ.