ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗೀಕರಣ ವಿರೋಧಿಸಿ ಬ್ಯಾಂಕ್‌ ನೌಕರರ ಮುಷ್ಕರ: ಸೇವೆಗಳಿಗೆ ಅಡ್ಡಿ

Last Updated 15 ಮಾರ್ಚ್ 2021, 9:48 IST
ಅಕ್ಷರ ಗಾತ್ರ

ನವದೆಹಲಿ: ಬ್ಯಾಂಕ್‌ ಒಕ್ಕೂಟಗಳ ಸಂಯುಕ್ತ ವೇದಿಕೆಯು (ಯುಎಫ್‌ಬಿಯು) ಮುಷ್ಕರ ನಡೆಸಲು ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆಲ ಬ್ಯಾಂಕಿಂಗ್ ಸೇವೆಗಳಿಗೆ ಇಂದು (ಸೋಮವಾರ) ಅಡ್ಡಿ ಉಂಟಾಗಿದೆ.

ಬ್ಯಾಂಕ್‌ ಶಾಖೆಗಳಲ್ಲಿ ಠೇವಣಿ ಇರಿಸುವುದು, ಶಾಖೆಗಳಿಂದ ಹಣ ಹಿಂಪಡೆಯುವುದು, ಚೆಕ್‌ ಕ್ಲಿಯರೆನ್ಸ್ ಮತ್ತು ಸಾಲ ಮಂಜೂರಾತಿ ಸೇವೆಗಳಲ್ಲಿ ಇಂದು ವ್ಯತ್ಯಯವಾಗಿದೆ.

ಕೇಂದ್ರ ಸರ್ಕಾರಿ ಸ್ವಾಮ್ಯದ ಎರಡು ರಾಷ್ಟ್ರೀಕೃತ ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಮುಷ್ಕರದಲ್ಲಿ ಭಾಗವಹಿಸದ ಕಾರಣ ಖಾಸಗಿ ವಲಯದ ಐಸಿಐಸಿಐ, ಎಚ್‌ಡಿಎಫ್‌ಸಿ ಮತ್ತು ಆಕ್ಸಿಸ್ ಬ್ಯಾಂಕ್‌ಗಳು ದೇಶದಾದ್ಯಂತ ಕಾರ್ಯನಿರ್ವಹಿಸುತ್ತಿವೆ.

ಒಂಬತ್ತು ಒಕ್ಕೂಟಗಳನ್ನು ಒಳಗೊಂಡಿರುವ ಯುಎಫ್‌ಬಿಯು ಮಾರ್ಚ್ 15 ಮತ್ತು 16ರಂದು ಮುಷ್ಕರಕ್ಕೆ ಕರೆ ನೀಡಿತ್ತು. ಸುಮಾರು 10 ಲಕ್ಷ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ಅಂದಾಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT