‘ಒಂದು ವೇಳೆ ರಾಜ್ಯಪಾಲರು ಅನುಮತಿ ನೀಡಿದರೆ, ಅಧಿಕಾರ ದುರುಪಯೋಗಪಡಿಸಿದ ಆರೋಪದಡಿ ಮುಖ್ಯಮಂತ್ರಿ ಸಮೇತ ಸಚಿವರಾದ ಡಿ.ಕೆ.ಶಿವಕುಮಾರ್, ರಮಾನಾಥ ರೈ ಹಾಗೂ ಯು.ಟಿ.ಖಾದರ್ ಅವರ ವಿರುದ್ಧ ನ್ಯಾಯಾಲಯದಲ್ಲಿ ಕೇಸು ದಾಖಲಿಸಲಿದ್ದೇನೆ. ಹಾಗೇನಾದರೂ ಆದಲ್ಲಿ ಮುಂಬರುವ ಚುನಾವಣೆಯಲ್ಲಿ ಅವರಿಗೆ ಸ್ಪರ್ಧಿಸಲು ಕಷ್ಟವಾಗುವ ಸಾಧ್ಯತೆ ಇದೆ’ ಎಂದು ಅವರು ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.