<p><strong>ನವದೆಹಲಿ</strong>: ಜಿಎಸ್ಟಿ ಪರಿಷ್ಕರಣೆಯ ಪ್ರಯೋಜನದ ವರ್ಗಾವಣೆಗೆ ಸಂಬಂಧಿಸಿದಂತೆ, ಒಂದೇ ವಾರದಲ್ಲಿ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಯು (ಎನ್ಸಿಎಚ್) 3 ಸಾವಿರ ದೂರುಗಳನ್ನು ಸ್ವೀಕರಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ನಿಧಿ ಖರೆ ಹೇಳಿದ್ದಾರೆ.</p>.<p>‘ಪ್ರತಿ ದಿನವೂ ನಾವು ದೂರುಗಳನ್ನು ಸ್ವೀಕರಿಸುತ್ತಿದ್ದೇವೆ. ಈ ದೂರುಗಳನ್ನು ಪರೋಕ್ಷ ತೆರಿಗೆಗಳು ಹಾಗೂ ಸುಂಕಗಳ ಕೇಂದ್ರೀಯ ಮಂಡಳಿಗೆ (ಸಿಬಿಐಸಿ) ಮುಂದಿನ ಕ್ರಮಕ್ಕಾಗಿ ಕಳುಹಿಸಲಾಗುತ್ತಿದೆ’ ಎಂದು ಸೋಮವಾರ ಹೇಳಿದ್ದಾರೆ.</p>.<p>ಜಿಎಸ್ಟಿ ದರ ಇಳಿಕೆ ಪ್ರಯೋಜನ ವರ್ಗಾಯಿಸದೇ ದಿಕ್ಕು ತಪ್ಪಿಸುವ ಬಗೆಯಲ್ಲಿ ರಿಯಾಯಿತಿ ದರವನ್ನು ನಿಗದಿ ಮಾಡುವ ಮೂಲಕ ಗ್ರಾಹಕರಿಗೆ ಎಲ್ಲಿ ವಂಚನೆ ಮಾಡಲಾಗುತ್ತಿದೆ ಎಂಬುದನ್ನು ಸಚಿವಾಲಯವು ಸೂಕ್ಷ್ಮವಾಗಿ ಗಮನಿಸುತ್ತಿದೆ. </p>.<p>ವಿವಿಧ ವಲಯಗಳಿಂದ ದಾಖಲಾಗುವ ಈ ದೂರುಗಳ ಸಮಗ್ರ ಚಿತ್ರಣ ಪಡೆದುಕೊಳ್ಳಲು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಮತ್ತು ಚಾಟ್ಬಾಟ್ ತಂತ್ರಜ್ಞಾನವನ್ನು ನಿಯೋಜಿಸಲಾಗಿದೆ. </p>.<p>ದಿಕ್ಕು ತಪ್ಪಿಸುವ ರಿಯಾಯಿತಿಗಳು ಅಥವಾ ಜಾಹೀರಾತು, ನ್ಯಾಯೋಚಿತವಲ್ಲದ ವ್ಯಾಪಾರ ವಹಿವಾಟು ನಡೆಸುವ ಮೂಲಕ ಜಿಎಸ್ಟಿ ಪರಿಷ್ಕರಣೆ ಪ್ರಯೋಜನನ್ನು ಗ್ರಾಹಕರಿಗೆ ವರ್ಗಾಯಿಸದ ದೂರುಗಳನ್ನು ವಿಶ್ಲೇಷಿಸಲಾಗುವುದು. ಬೇರೆ ಬೇರೆ ವಲಯಗಳಿಂದ ದೂರುಗಳು ಹೆಚ್ಚಾದರೆ, ಅವುಗಳನ್ನು ಕಾನೂನಿನ ಅಡಿ ಪ್ರತ್ಯೇಕವಾಗಿ ವರ್ಗೀಕರಿಸಲಾಗುತ್ತದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಜಿಎಸ್ಟಿ ಪರಿಷ್ಕರಣೆಯ ಪ್ರಯೋಜನದ ವರ್ಗಾವಣೆಗೆ ಸಂಬಂಧಿಸಿದಂತೆ, ಒಂದೇ ವಾರದಲ್ಲಿ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಯು (ಎನ್ಸಿಎಚ್) 3 ಸಾವಿರ ದೂರುಗಳನ್ನು ಸ್ವೀಕರಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ನಿಧಿ ಖರೆ ಹೇಳಿದ್ದಾರೆ.</p>.<p>‘ಪ್ರತಿ ದಿನವೂ ನಾವು ದೂರುಗಳನ್ನು ಸ್ವೀಕರಿಸುತ್ತಿದ್ದೇವೆ. ಈ ದೂರುಗಳನ್ನು ಪರೋಕ್ಷ ತೆರಿಗೆಗಳು ಹಾಗೂ ಸುಂಕಗಳ ಕೇಂದ್ರೀಯ ಮಂಡಳಿಗೆ (ಸಿಬಿಐಸಿ) ಮುಂದಿನ ಕ್ರಮಕ್ಕಾಗಿ ಕಳುಹಿಸಲಾಗುತ್ತಿದೆ’ ಎಂದು ಸೋಮವಾರ ಹೇಳಿದ್ದಾರೆ.</p>.<p>ಜಿಎಸ್ಟಿ ದರ ಇಳಿಕೆ ಪ್ರಯೋಜನ ವರ್ಗಾಯಿಸದೇ ದಿಕ್ಕು ತಪ್ಪಿಸುವ ಬಗೆಯಲ್ಲಿ ರಿಯಾಯಿತಿ ದರವನ್ನು ನಿಗದಿ ಮಾಡುವ ಮೂಲಕ ಗ್ರಾಹಕರಿಗೆ ಎಲ್ಲಿ ವಂಚನೆ ಮಾಡಲಾಗುತ್ತಿದೆ ಎಂಬುದನ್ನು ಸಚಿವಾಲಯವು ಸೂಕ್ಷ್ಮವಾಗಿ ಗಮನಿಸುತ್ತಿದೆ. </p>.<p>ವಿವಿಧ ವಲಯಗಳಿಂದ ದಾಖಲಾಗುವ ಈ ದೂರುಗಳ ಸಮಗ್ರ ಚಿತ್ರಣ ಪಡೆದುಕೊಳ್ಳಲು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಮತ್ತು ಚಾಟ್ಬಾಟ್ ತಂತ್ರಜ್ಞಾನವನ್ನು ನಿಯೋಜಿಸಲಾಗಿದೆ. </p>.<p>ದಿಕ್ಕು ತಪ್ಪಿಸುವ ರಿಯಾಯಿತಿಗಳು ಅಥವಾ ಜಾಹೀರಾತು, ನ್ಯಾಯೋಚಿತವಲ್ಲದ ವ್ಯಾಪಾರ ವಹಿವಾಟು ನಡೆಸುವ ಮೂಲಕ ಜಿಎಸ್ಟಿ ಪರಿಷ್ಕರಣೆ ಪ್ರಯೋಜನನ್ನು ಗ್ರಾಹಕರಿಗೆ ವರ್ಗಾಯಿಸದ ದೂರುಗಳನ್ನು ವಿಶ್ಲೇಷಿಸಲಾಗುವುದು. ಬೇರೆ ಬೇರೆ ವಲಯಗಳಿಂದ ದೂರುಗಳು ಹೆಚ್ಚಾದರೆ, ಅವುಗಳನ್ನು ಕಾನೂನಿನ ಅಡಿ ಪ್ರತ್ಯೇಕವಾಗಿ ವರ್ಗೀಕರಿಸಲಾಗುತ್ತದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>