<p><strong>ನವದೆಹಲಿ</strong>: ಹಣಕಾಸಿನ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಸಲ್ಲಿಸಿರುವ ಅರ್ಜಿಯ ಬಗ್ಗೆ ಒಂದು ವಾರದೊಳಗೆ ನಿರ್ಧರಿಸುವಂತೆ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಗೆ (ಎನ್ಸಿಎಲ್ಟಿ), ಚೆನ್ನೈನ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯು (ಎನ್ಸಿಎಲ್ಎಟಿ) ಸೂಚಿಸಿದೆ.</p>.<p>ಭಾರತದ ಕ್ರಿಕೆಟ್ ತಂಡದ ಪ್ರಾಯೋಜಕತ್ವ ಸಂಬಂಧ ಬೈಜುಸ್ ಕಂಪನಿಯು ₹158 ಕೋಟಿಯನ್ನು ಬಿಸಿಸಿಐಗೆ ಪಾವತಿಸದೆ ಬಾಕಿ ಉಳಿಸಿಕೊಂಡಿದೆ. ಬೈಜುಸ್ ಈ ಬಾಕಿ ಮೊತ್ತ ಪಾವತಿಸುವ ಬಗ್ಗೆ ಒಪ್ಪಿಗೆ ನೀಡಿರುವುದರಿಂದ, ಕಾರ್ಪೊರೇಟ್ ದಿವಾಳಿ ಗೊತ್ತುವಳಿ ಪ್ರಕ್ರಿಯೆಯನ್ನು (ಸಿಐಆರ್ಪಿ) ಹಿಂಪಡೆಯಲು ಬಿಸಿಸಿಐ ಮುಂದಾಗಿದೆ.</p>.<p>ಬೈಜುಸ್ಗೆ ಅಮೆರಿಕ ಮೂಲದ ಗ್ಲಾಸ್ ಟ್ರಸ್ಟ್ ಕಂಪನಿ ಮತ್ತು ಆದಿತ್ಯ ಬಿರ್ಲಾ ಫೈನಾನ್ಸ್ ಕೂಡ ಸಾಲ ನೀಡಿವೆ. ಆದರೆ, ದಿವಾಳಿ ಪರಿಹಾರ ಪ್ರಕ್ರಿಯೆಯ ಮೇಲ್ವಿಚಾರಣೆ ಮಾಡಲು ರಚಿಸಲಾದ ಸಾಲದ ಸಮಿತಿಯಿಂದ ಈ ಎರಡು ಕಂಪನಿಗಳನ್ನು ಹೊರಗಿಡಲಾಗಿತ್ತು. </p>.<p>ಬೈಜುಸ್ನ ಪರಿಹಾರ ಅಧಿಕಾರಿಯಾಗಿದ್ದ ಪಂಕಜ್ ಶ್ರೀವಾಸ್ತವ ಅವರು ಈ ನಿರ್ಧಾರ ಕೈಗೊಂಡಿದ್ದರು. ಇದಕ್ಕೆ ಎನ್ಸಿಎಲ್ಟಿ ಬೆಂಗಳೂರು ಶಾಖೆಯ ಆಕ್ಷೇಪ ವ್ಯಕ್ತಪಡಿಸಿತ್ತು. ನಂತರ ಸಾಲಗಾರರ ಸಮಿತಿಯಲ್ಲಿ ಈ ಎರಡೂ ಕಂಪನಿಗಳನ್ನು ಸೇರ್ಪಡೆಗೊಳಿಸಿ ಜನವರಿ 29ರಂದು ಆದೇಶ ಹೊರಡಿಸಿತ್ತು. ಅಲ್ಲದೆ, ಪಂಕಜ್ ವಿರುದ್ಧ ತನಿಖೆ ನಡೆಸುವಂತೆ ಹಣಕಾಸು ನಷ್ಟ ಮತ್ತು ದಿವಾಳಿ ಮಂಡಳಿಗೆ (ಐಬಿಬಿಐ) ಸೂಚಿಸಿತ್ತು. </p>.<p>ಈ ಆದೇಶ ಪ್ರಶ್ನಿಸಿ ಬೈಜು ರವೀಂದ್ರನ್ ಅವರ ಸಹೋದರ ಹಾಗೂ ಬೈಜುಸ್ನ ಮಾಜಿ ಪ್ರವರ್ತಕ ರಿಜು ರವೀಂದ್ರನ್ ಅವರು, ಎನ್ಸಿಎಲ್ಎಟಿಗೆ ಮೇಲ್ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ವಿಭಾಗೀಯ ಪೀಠದ ನ್ಯಾಯಾಧೀಶರಾದ ರಾಕೇಶ್ ಕುಮಾರ್ ಜೈನ್ ಮತ್ತು ಜತೀಂದ್ರನಾಥ್ ಸ್ವೈನ್ ಈ ಅರ್ಜಿಯನ್ನು ವಜಾಗೊಳಿಸಿದ್ದಾರೆ.</p>.<p>ಈ ಮೇಲ್ಮನವಿ ಅರ್ಜಿಯನ್ನು ಅವಲೋಕನ ಮಾಡುವಾಗ ಪ್ರಕರಣದ ವಾಸ್ತವಾಂಶಗಳ ಬಗ್ಗೆ ಪೀಠವು ಯಾವುದೇ ಅವಲೋಕನ ನಡೆಸಿಲ್ಲ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹಣಕಾಸಿನ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಸಲ್ಲಿಸಿರುವ ಅರ್ಜಿಯ ಬಗ್ಗೆ ಒಂದು ವಾರದೊಳಗೆ ನಿರ್ಧರಿಸುವಂತೆ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಗೆ (ಎನ್ಸಿಎಲ್ಟಿ), ಚೆನ್ನೈನ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯು (ಎನ್ಸಿಎಲ್ಎಟಿ) ಸೂಚಿಸಿದೆ.</p>.<p>ಭಾರತದ ಕ್ರಿಕೆಟ್ ತಂಡದ ಪ್ರಾಯೋಜಕತ್ವ ಸಂಬಂಧ ಬೈಜುಸ್ ಕಂಪನಿಯು ₹158 ಕೋಟಿಯನ್ನು ಬಿಸಿಸಿಐಗೆ ಪಾವತಿಸದೆ ಬಾಕಿ ಉಳಿಸಿಕೊಂಡಿದೆ. ಬೈಜುಸ್ ಈ ಬಾಕಿ ಮೊತ್ತ ಪಾವತಿಸುವ ಬಗ್ಗೆ ಒಪ್ಪಿಗೆ ನೀಡಿರುವುದರಿಂದ, ಕಾರ್ಪೊರೇಟ್ ದಿವಾಳಿ ಗೊತ್ತುವಳಿ ಪ್ರಕ್ರಿಯೆಯನ್ನು (ಸಿಐಆರ್ಪಿ) ಹಿಂಪಡೆಯಲು ಬಿಸಿಸಿಐ ಮುಂದಾಗಿದೆ.</p>.<p>ಬೈಜುಸ್ಗೆ ಅಮೆರಿಕ ಮೂಲದ ಗ್ಲಾಸ್ ಟ್ರಸ್ಟ್ ಕಂಪನಿ ಮತ್ತು ಆದಿತ್ಯ ಬಿರ್ಲಾ ಫೈನಾನ್ಸ್ ಕೂಡ ಸಾಲ ನೀಡಿವೆ. ಆದರೆ, ದಿವಾಳಿ ಪರಿಹಾರ ಪ್ರಕ್ರಿಯೆಯ ಮೇಲ್ವಿಚಾರಣೆ ಮಾಡಲು ರಚಿಸಲಾದ ಸಾಲದ ಸಮಿತಿಯಿಂದ ಈ ಎರಡು ಕಂಪನಿಗಳನ್ನು ಹೊರಗಿಡಲಾಗಿತ್ತು. </p>.<p>ಬೈಜುಸ್ನ ಪರಿಹಾರ ಅಧಿಕಾರಿಯಾಗಿದ್ದ ಪಂಕಜ್ ಶ್ರೀವಾಸ್ತವ ಅವರು ಈ ನಿರ್ಧಾರ ಕೈಗೊಂಡಿದ್ದರು. ಇದಕ್ಕೆ ಎನ್ಸಿಎಲ್ಟಿ ಬೆಂಗಳೂರು ಶಾಖೆಯ ಆಕ್ಷೇಪ ವ್ಯಕ್ತಪಡಿಸಿತ್ತು. ನಂತರ ಸಾಲಗಾರರ ಸಮಿತಿಯಲ್ಲಿ ಈ ಎರಡೂ ಕಂಪನಿಗಳನ್ನು ಸೇರ್ಪಡೆಗೊಳಿಸಿ ಜನವರಿ 29ರಂದು ಆದೇಶ ಹೊರಡಿಸಿತ್ತು. ಅಲ್ಲದೆ, ಪಂಕಜ್ ವಿರುದ್ಧ ತನಿಖೆ ನಡೆಸುವಂತೆ ಹಣಕಾಸು ನಷ್ಟ ಮತ್ತು ದಿವಾಳಿ ಮಂಡಳಿಗೆ (ಐಬಿಬಿಐ) ಸೂಚಿಸಿತ್ತು. </p>.<p>ಈ ಆದೇಶ ಪ್ರಶ್ನಿಸಿ ಬೈಜು ರವೀಂದ್ರನ್ ಅವರ ಸಹೋದರ ಹಾಗೂ ಬೈಜುಸ್ನ ಮಾಜಿ ಪ್ರವರ್ತಕ ರಿಜು ರವೀಂದ್ರನ್ ಅವರು, ಎನ್ಸಿಎಲ್ಎಟಿಗೆ ಮೇಲ್ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ವಿಭಾಗೀಯ ಪೀಠದ ನ್ಯಾಯಾಧೀಶರಾದ ರಾಕೇಶ್ ಕುಮಾರ್ ಜೈನ್ ಮತ್ತು ಜತೀಂದ್ರನಾಥ್ ಸ್ವೈನ್ ಈ ಅರ್ಜಿಯನ್ನು ವಜಾಗೊಳಿಸಿದ್ದಾರೆ.</p>.<p>ಈ ಮೇಲ್ಮನವಿ ಅರ್ಜಿಯನ್ನು ಅವಲೋಕನ ಮಾಡುವಾಗ ಪ್ರಕರಣದ ವಾಸ್ತವಾಂಶಗಳ ಬಗ್ಗೆ ಪೀಠವು ಯಾವುದೇ ಅವಲೋಕನ ನಡೆಸಿಲ್ಲ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>