<p><strong>ನವದೆಹಲಿ</strong>: ಕಾಫಿ ಡೇ ಎಂಟರ್ಪ್ರೈಸಸ್ ಲಿಮಿಟೆಡ್ (ಸಿಡಿಇಎಲ್) ವಿರುದ್ಧ ಕಾರ್ಪೊರೇಟ್ ದಿವಾಳಿ ಪ್ರಕ್ರಿಯೆ ಆರಂಭಿಸುವಂತೆ ಬೆಂಗಳೂರಿನ ರಾಷ್ಟ್ರೀಯ ಕಂಪನಿ ಕಾನೂನು ಮಂಡಳಿ (ಎನ್ಸಿಎಲ್ಟಿ) ನೀಡಿದ್ದ ಆದೇಶವನ್ನು, ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯ ಚೆನ್ನೈ ಪೀಠವು ರದ್ದುಪಡಿಸಿದೆ. </p>.<p>ನ್ಯಾಯಮೂರ್ತಿಗಳಾದ ಶರದ್ ಕುಮಾರ್ ಶರ್ಮಾ ಮತ್ತು ಜತೀಂದ್ರನಾಥ್ ಸ್ವೈನ್ ಅವರಿದ್ದ ವಿಭಾಗೀಯ ಪೀಠವು ಈ ಆದೇಶ ಹೊರಡಿಸಿದೆ. </p>.<p>ಕಾಫಿ ಡೇ ಸಮೂಹದ ಮಾತೃಸಂಸ್ಥೆಯಾದ ಕಾಫಿ ಡೇ ಎಂಟರ್ಪ್ರೈಸಸ್ ತನಗೆ ₹228.45 ಕೋಟಿ ಬಾಕಿ ಪಾವತಿಸಿಲ್ಲ ಎಂದು ಆರೋಪಿಸಿದ್ದ ಐಡಿಬಿಐ ಟ್ರಸ್ಟಿಶಿಪ್ ಸರ್ವಿಸಸ್ ಲಿಮಿಟೆಡ್, ಎನ್ಸಿಎಲ್ಟಿಗೆ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ್ದ ನ್ಯಾಯಮಂಡಳಿಯು ದಿವಾಳಿ ಪ್ರಕ್ರಿಯೆಗೆ ಅನುಮತಿ ನೀಡಿ ಆದೇಶಿಸಿತ್ತು.</p>.<p>ಇದನ್ನು ಪ್ರಶ್ನಿಸಿ ಸಿಡಿಇಎಲ್ನ ಕಾರ್ಯ ನಿರ್ವಾಹಕ ನಿರ್ದೇಶಕಿ ಮತ್ತು ಸಿಇಒ ಮಾಳವಿಕಾ ಹೆಗ್ಡೆ ಅವರು, ಮೇಲ್ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ನ್ಯಾಯಪೀಠವು ಎನ್ಸಿಎಲ್ಟಿ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು.</p>.<p>ಈ ತಡೆಯಾಜ್ಞೆಯನ್ನು ಐಡಿಬಿಐ ಟ್ರಸ್ಟಿಶಿಪ್ ಸರ್ವಿಸಸ್ ಲಿಮಿಟೆಡ್, ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿತ್ತು. ಮೇಲ್ಮನವಿಯನ್ನು ಫೆಬ್ರುವರಿ 21ಕ್ಕೆ ಮೊದಲು ಇತ್ಯರ್ಥಪಡಿಸಬೇಕು ಎಂದು ಎನ್ಸಿಎಲ್ಎಟಿ ಚೆನ್ನೈ ಪೀಠಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಾಫಿ ಡೇ ಎಂಟರ್ಪ್ರೈಸಸ್ ಲಿಮಿಟೆಡ್ (ಸಿಡಿಇಎಲ್) ವಿರುದ್ಧ ಕಾರ್ಪೊರೇಟ್ ದಿವಾಳಿ ಪ್ರಕ್ರಿಯೆ ಆರಂಭಿಸುವಂತೆ ಬೆಂಗಳೂರಿನ ರಾಷ್ಟ್ರೀಯ ಕಂಪನಿ ಕಾನೂನು ಮಂಡಳಿ (ಎನ್ಸಿಎಲ್ಟಿ) ನೀಡಿದ್ದ ಆದೇಶವನ್ನು, ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯ ಚೆನ್ನೈ ಪೀಠವು ರದ್ದುಪಡಿಸಿದೆ. </p>.<p>ನ್ಯಾಯಮೂರ್ತಿಗಳಾದ ಶರದ್ ಕುಮಾರ್ ಶರ್ಮಾ ಮತ್ತು ಜತೀಂದ್ರನಾಥ್ ಸ್ವೈನ್ ಅವರಿದ್ದ ವಿಭಾಗೀಯ ಪೀಠವು ಈ ಆದೇಶ ಹೊರಡಿಸಿದೆ. </p>.<p>ಕಾಫಿ ಡೇ ಸಮೂಹದ ಮಾತೃಸಂಸ್ಥೆಯಾದ ಕಾಫಿ ಡೇ ಎಂಟರ್ಪ್ರೈಸಸ್ ತನಗೆ ₹228.45 ಕೋಟಿ ಬಾಕಿ ಪಾವತಿಸಿಲ್ಲ ಎಂದು ಆರೋಪಿಸಿದ್ದ ಐಡಿಬಿಐ ಟ್ರಸ್ಟಿಶಿಪ್ ಸರ್ವಿಸಸ್ ಲಿಮಿಟೆಡ್, ಎನ್ಸಿಎಲ್ಟಿಗೆ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ್ದ ನ್ಯಾಯಮಂಡಳಿಯು ದಿವಾಳಿ ಪ್ರಕ್ರಿಯೆಗೆ ಅನುಮತಿ ನೀಡಿ ಆದೇಶಿಸಿತ್ತು.</p>.<p>ಇದನ್ನು ಪ್ರಶ್ನಿಸಿ ಸಿಡಿಇಎಲ್ನ ಕಾರ್ಯ ನಿರ್ವಾಹಕ ನಿರ್ದೇಶಕಿ ಮತ್ತು ಸಿಇಒ ಮಾಳವಿಕಾ ಹೆಗ್ಡೆ ಅವರು, ಮೇಲ್ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ನ್ಯಾಯಪೀಠವು ಎನ್ಸಿಎಲ್ಟಿ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು.</p>.<p>ಈ ತಡೆಯಾಜ್ಞೆಯನ್ನು ಐಡಿಬಿಐ ಟ್ರಸ್ಟಿಶಿಪ್ ಸರ್ವಿಸಸ್ ಲಿಮಿಟೆಡ್, ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿತ್ತು. ಮೇಲ್ಮನವಿಯನ್ನು ಫೆಬ್ರುವರಿ 21ಕ್ಕೆ ಮೊದಲು ಇತ್ಯರ್ಥಪಡಿಸಬೇಕು ಎಂದು ಎನ್ಸಿಎಲ್ಎಟಿ ಚೆನ್ನೈ ಪೀಠಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>