<p><strong>ನವದೆಹಲಿ</strong>: ‘ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳಿಗೆ (ಎಂಎಸ್ಎಂಇ) ಸಕಾಲದಲ್ಲಿ ಕಡಿಮೆ ಬಡ್ಡಿದರದಡಿ ಸಾಲ ಸೌಲಭ್ಯ ಕಲ್ಪಿಸಲು ಹೊಸ ಮಾದರಿಯ ಸಾಲ ಯೋಜನೆಯನ್ನು ರೂಪಿಸುವ ಅಗತ್ಯವಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.</p>.<p>ಎಂಎಸ್ಎಂಇ ಕುರಿತಂತೆ ಮಂಗಳವಾರ ನಡೆದ ವೆಬಿನಾರ್ನಲ್ಲಿ ಮಾತನಾಡಿದ ಅವರು, ಮೊದಲ ಬಾರಿಗೆ ಉದ್ದಿಮೆ ಸ್ಥಾಪಿಸುವ ಐದು ಲಕ್ಷ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ₹2 ಕೋಟಿವರೆಗೆ ಸಾಲ ನೀಡಲಾಗುವುದು ಎಂದು ತಿಳಿಸಿದರು.</p>.<p>ಎಂಎಸ್ಎಂಇ ಅಭಿವೃದ್ಧಿಗೆ ಸಾಲ ಸೌಲಭ್ಯ ಕಲ್ಪಿಸುವುದಷ್ಟೇ ಮುಖ್ಯವಲ್ಲ. ಅವುಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕಿದೆ. ಕೈಗಾರಿಕೆಗಳು ಸದಸ್ಯತ್ವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು. </p>.<p>ಪ್ರಸ್ತುತ ಜಾಗತಿಕ ಮಟ್ಟದಲ್ಲಿ ರಾಜಕೀಯ ಅಸ್ಥಿರತೆ ತಾಂಡವವಾಡುತ್ತಿದೆ. ಹಾಗಾಗಿ, ಅಭಿವೃದ್ಧಿಯ ಕೇಂದ್ರವಾದ ಭಾರತದತ್ತ ಇಡೀ ವಿಶ್ವವೇ ದೃಷ್ಟಿ ನೆಟ್ಟಿದೆ ಎಂದರು.</p>.<p>14 ವಲಯಗಳಲ್ಲಿ ಉತ್ಪಾದನೆ ಆಧರಿತ ಉತ್ತೇಜನ (ಪಿಎಲ್ಐ) ಯೋಜನೆ ಜಾರಿಗೊಳಿಸಿದ್ದು, ₹1.5 ಲಕ್ಷ ಕೋಟಿ ವಿನಿಯೋಗಿಸಲಾಗಿದೆ. ಇದರಿಂದ ಒಟ್ಟು ₹13 ಲಕ್ಷ ಕೋಟಿ ಮೌಲ್ಯದ ಉತ್ಪಾದನೆಯಾಗಿದೆ ಎಂದು ವಿವರಿಸಿದರು.</p>.<p>ಪ್ರತಿಯೊಂದು ದೇಶವು ಭಾರತದೊಂದಿಗೆ ಆರ್ಥಿಕ ಪಾಲುದಾರಿಕೆ ಹೊಂದಲು ಇಚ್ಛಿಸುತ್ತದೆ. ಹಾಗಾಗಿ, ತಯಾರಿಕಾ ವಲಯವು ಇದರ ಪ್ರಯೋಜನ ಪಡೆದುಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳಿಗೆ (ಎಂಎಸ್ಎಂಇ) ಸಕಾಲದಲ್ಲಿ ಕಡಿಮೆ ಬಡ್ಡಿದರದಡಿ ಸಾಲ ಸೌಲಭ್ಯ ಕಲ್ಪಿಸಲು ಹೊಸ ಮಾದರಿಯ ಸಾಲ ಯೋಜನೆಯನ್ನು ರೂಪಿಸುವ ಅಗತ್ಯವಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.</p>.<p>ಎಂಎಸ್ಎಂಇ ಕುರಿತಂತೆ ಮಂಗಳವಾರ ನಡೆದ ವೆಬಿನಾರ್ನಲ್ಲಿ ಮಾತನಾಡಿದ ಅವರು, ಮೊದಲ ಬಾರಿಗೆ ಉದ್ದಿಮೆ ಸ್ಥಾಪಿಸುವ ಐದು ಲಕ್ಷ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ₹2 ಕೋಟಿವರೆಗೆ ಸಾಲ ನೀಡಲಾಗುವುದು ಎಂದು ತಿಳಿಸಿದರು.</p>.<p>ಎಂಎಸ್ಎಂಇ ಅಭಿವೃದ್ಧಿಗೆ ಸಾಲ ಸೌಲಭ್ಯ ಕಲ್ಪಿಸುವುದಷ್ಟೇ ಮುಖ್ಯವಲ್ಲ. ಅವುಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕಿದೆ. ಕೈಗಾರಿಕೆಗಳು ಸದಸ್ಯತ್ವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು. </p>.<p>ಪ್ರಸ್ತುತ ಜಾಗತಿಕ ಮಟ್ಟದಲ್ಲಿ ರಾಜಕೀಯ ಅಸ್ಥಿರತೆ ತಾಂಡವವಾಡುತ್ತಿದೆ. ಹಾಗಾಗಿ, ಅಭಿವೃದ್ಧಿಯ ಕೇಂದ್ರವಾದ ಭಾರತದತ್ತ ಇಡೀ ವಿಶ್ವವೇ ದೃಷ್ಟಿ ನೆಟ್ಟಿದೆ ಎಂದರು.</p>.<p>14 ವಲಯಗಳಲ್ಲಿ ಉತ್ಪಾದನೆ ಆಧರಿತ ಉತ್ತೇಜನ (ಪಿಎಲ್ಐ) ಯೋಜನೆ ಜಾರಿಗೊಳಿಸಿದ್ದು, ₹1.5 ಲಕ್ಷ ಕೋಟಿ ವಿನಿಯೋಗಿಸಲಾಗಿದೆ. ಇದರಿಂದ ಒಟ್ಟು ₹13 ಲಕ್ಷ ಕೋಟಿ ಮೌಲ್ಯದ ಉತ್ಪಾದನೆಯಾಗಿದೆ ಎಂದು ವಿವರಿಸಿದರು.</p>.<p>ಪ್ರತಿಯೊಂದು ದೇಶವು ಭಾರತದೊಂದಿಗೆ ಆರ್ಥಿಕ ಪಾಲುದಾರಿಕೆ ಹೊಂದಲು ಇಚ್ಛಿಸುತ್ತದೆ. ಹಾಗಾಗಿ, ತಯಾರಿಕಾ ವಲಯವು ಇದರ ಪ್ರಯೋಜನ ಪಡೆದುಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>