ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೇ ತಿಂಗಳಲ್ಲಿ ಕಲ್ಲಿದ್ದಲು ಗಣಿ ಹರಾಜು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Last Updated 11 ಜನವರಿ 2021, 16:52 IST
ಅಕ್ಷರ ಗಾತ್ರ

ನವದೆಹಲಿ: ವಾಣಿಜ್ಯ ಉದ್ದೇಶದ ಕಲ್ಲಿದ್ದಲು ಗಣಿಗಳ ಮುಂದಿನ ಕಂತಿನ ಹರಾಜು ಪ್ರಕ್ರಿಯೆಯು ಇದೇ ತಿಂಗಳಲ್ಲಿ ನಡೆಯಲಿದೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಕಾರ್ಯಕ್ರಮವೊಂದರಲ್ಲಿ ಹೇಳಿದರು.

ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ದೇಶದ ಅರ್ಥವ್ಯವಸ್ಥೆಯ ಗಾತ್ರವನ್ನು 5 ಶತಕೋಟಿ ಡಾಲರ್‌ಗೆ ಹೆಚ್ಚಿಸುವ ಗುರಿಯನ್ನು ಈಡೇರಿಸುವಲ್ಲಿ ಕಲ್ಲಿದ್ದಲು ವಲಯವು ಬಹುದೊಡ್ಡ ಕೊಡುಗೆ ನೀಡುವ ಸ್ಥಾನದಲ್ಲಿದೆ’ ಎಂದರು.

ವಿಶ್ವದಲ್ಲಿ ನಾಲ್ಕನೆಯ ಅತಿಹೆಚ್ಚಿನ ಕಲ್ಲಿದ್ದಲು ಗಣಿಗಳನ್ನು ಹೊಂದಿದ್ದರೂ ದೇಶವು ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳುತ್ತಿದೆ. ಇದು ದೇಶದ ಹಿತದೃಷ್ಟಿಯಿಂದ ಸರಿಯಲ್ಲ ಎಂದು ಶಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT