<p><strong>ನವದೆಹಲಿ</strong>: 2024–25ನೇ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್ಎಚ್ಎಐ) ₹56 ಸಾವಿರ ಕೋಟಿ ಸಾಲವನ್ನು ಪೂರ್ವ ಪಾವತಿ ಮಾಡಿದೆ. ಇದರಿಂದ ಪ್ರಾಧಿಕಾರಕ್ಕೆ ₹1,200 ಕೋಟಿ ಬಡ್ಡಿ ಉಳಿತಾಯವಾಗಿದೆ ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಪ್ರಸಕ್ತ ಆರ್ಥಿಕ ವರ್ಷದ ಆರಂಭದಲ್ಲಿ ಪ್ರಾಧಿಕಾರದ ಸಾಲದ ಮೊತ್ತವು ₹3.35 ಲಕ್ಷ ಕೋಟಿ ಇತ್ತು. ಮೂರನೇ ತ್ರೈಮಾಸಿಕದ ಅಂತ್ಯಕ್ಕೆ ₹2.76 ಲಕ್ಷ ಕೋಟಿಗೆ ಇಳಿದಿದೆ ಎಂದು ಹೇಳಿದ್ದಾರೆ.</p>.<p>ಪ್ರಾಧಿಕಾರವು ಹೆದ್ದಾರಿಗಳ ಅಭಿವೃದ್ಧಿಗಾಗಿ ಮೂಲಸೌಕರ್ಯ ಟ್ರಸ್ಟ್ ಮೂಲಕ ಹಣ ಸಂಗ್ರಹಿಸುತ್ತದೆ. ಇದರಡಿ ಸಂಗ್ರಹವಾದ ₹15,700 ಕೋಟಿಯನ್ನು ಸಾಲ ಪೂರ್ವ ಪಾವತಿ ಮಾಡಿದೆ ಎಂದು ಹೇಳಿದ್ದಾರೆ.</p>.<p>ರಾಷ್ಟ್ರೀಯ ಸಣ್ಣ ಉಳಿತಾಯ ನಿಧಿಯಿಂದ ₹30 ಸಾವಿರ ಕೋಟಿ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ (ಎಸ್ಬಿಐ) ₹10 ಸಾವಿರ ಕೋಟಿ ಸಾಲ ಪಡೆಯಲಾಗಿತ್ತು. ಈ ಸಾಲಕ್ಕೆ ಹೆಚ್ಚಿನ ಬಡ್ಡಿ ನೀಡಬೇಕಿತ್ತು. ಹಾಗಾಗಿ, ಈ ಸಾಲವನ್ನು ಪೂರ್ವ ಪಾವತಿ ಮಾಡಲಾಗಿದೆ. ಆ ಮೂಲಕ ಪ್ರಾಧಿಕಾರದ ಸಾಲದ ಹೊಣೆಗಾರಿಕೆಯು ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.</p>.<p>2024–25ನೇ ಸಾಲಿನ ಬಜೆಟ್ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಪ್ರಾಧಿಕಾರಕ್ಕೆ ₹1.68 ಲಕ್ಷ ಕೋಟಿ ಅನುದಾನವನ್ನು ಹಂಚಿಕೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 2024–25ನೇ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್ಎಚ್ಎಐ) ₹56 ಸಾವಿರ ಕೋಟಿ ಸಾಲವನ್ನು ಪೂರ್ವ ಪಾವತಿ ಮಾಡಿದೆ. ಇದರಿಂದ ಪ್ರಾಧಿಕಾರಕ್ಕೆ ₹1,200 ಕೋಟಿ ಬಡ್ಡಿ ಉಳಿತಾಯವಾಗಿದೆ ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಪ್ರಸಕ್ತ ಆರ್ಥಿಕ ವರ್ಷದ ಆರಂಭದಲ್ಲಿ ಪ್ರಾಧಿಕಾರದ ಸಾಲದ ಮೊತ್ತವು ₹3.35 ಲಕ್ಷ ಕೋಟಿ ಇತ್ತು. ಮೂರನೇ ತ್ರೈಮಾಸಿಕದ ಅಂತ್ಯಕ್ಕೆ ₹2.76 ಲಕ್ಷ ಕೋಟಿಗೆ ಇಳಿದಿದೆ ಎಂದು ಹೇಳಿದ್ದಾರೆ.</p>.<p>ಪ್ರಾಧಿಕಾರವು ಹೆದ್ದಾರಿಗಳ ಅಭಿವೃದ್ಧಿಗಾಗಿ ಮೂಲಸೌಕರ್ಯ ಟ್ರಸ್ಟ್ ಮೂಲಕ ಹಣ ಸಂಗ್ರಹಿಸುತ್ತದೆ. ಇದರಡಿ ಸಂಗ್ರಹವಾದ ₹15,700 ಕೋಟಿಯನ್ನು ಸಾಲ ಪೂರ್ವ ಪಾವತಿ ಮಾಡಿದೆ ಎಂದು ಹೇಳಿದ್ದಾರೆ.</p>.<p>ರಾಷ್ಟ್ರೀಯ ಸಣ್ಣ ಉಳಿತಾಯ ನಿಧಿಯಿಂದ ₹30 ಸಾವಿರ ಕೋಟಿ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ (ಎಸ್ಬಿಐ) ₹10 ಸಾವಿರ ಕೋಟಿ ಸಾಲ ಪಡೆಯಲಾಗಿತ್ತು. ಈ ಸಾಲಕ್ಕೆ ಹೆಚ್ಚಿನ ಬಡ್ಡಿ ನೀಡಬೇಕಿತ್ತು. ಹಾಗಾಗಿ, ಈ ಸಾಲವನ್ನು ಪೂರ್ವ ಪಾವತಿ ಮಾಡಲಾಗಿದೆ. ಆ ಮೂಲಕ ಪ್ರಾಧಿಕಾರದ ಸಾಲದ ಹೊಣೆಗಾರಿಕೆಯು ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.</p>.<p>2024–25ನೇ ಸಾಲಿನ ಬಜೆಟ್ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಪ್ರಾಧಿಕಾರಕ್ಕೆ ₹1.68 ಲಕ್ಷ ಕೋಟಿ ಅನುದಾನವನ್ನು ಹಂಚಿಕೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>