ಗೋ ಬ್ಯಾಕ್ ನಿರ್ಮಲಾ: ಸಚಿವೆ ನಿರ್ಮಲಾ, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ, ನಿಲ್ದಾಣದ ಹೊರಭಾಗದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ‘ಗೋ ಬ್ಯಾಕ್ ನಿರ್ಮಲಾ’ ಘೋಷಣೆ ಕೂಗಿದರು. ಪ್ರವಾಹದಿಂದ ಜನರು ಸಂಕಷ್ಟದಲ್ಲಿದ್ದರೂ, ಕೇಂದ್ರ ಕಡಿಮೆ ಪರಿಹಾರಕೊಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.