<p><strong>ಮುಂಬೈ</strong>: ದೇಶದ ಆರ್ಥಿಕತೆಯ ಬಗ್ಗೆ ಕೆಲವರು ನಕಾರಾತ್ಮಕ, ನಿರಾಶಾದಾಯಕ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ. ಭಯ ಹುಟ್ಟಿಸುವ ಇಂತಹ ಪ್ರಚಾರ ತಂತ್ರಗಳನ್ನು ಭಾರತ ಎಂದಿಗೂ ಸಹಿಸುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಿಡಿಕಾರಿದ್ದಾರೆ.</p><p>ಮುಂಬೈನಲ್ಲಿ ಇಂದು ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ನ (SIDBI) 37ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p><p>ಸದ್ಯದ ಜಾಗತಿಕ ಅನಿಶ್ಚಿತತೆಯ ಕೆಟ್ಟ ಪರಿಣಾಮದ ಹೊರತಾಗಿಯೂ ಭಾರತದ ಆರ್ಥಿಕತೆಯು ಉತ್ತಮವಾಗಿದೆ. ಟೀಕಾಕಾರರು ಇದನ್ನು ಗಮನಿಸುವುದಿಲ್ಲ ಎಂದು ಪ್ರತಿಪಾದಿಸಿದರು.</p><p>ನಮ್ಮ ಮಾತು, ಕೆಲಸಗಳು ಜಾಗತಿಕ ಪರಿಣಾಮಗಳಿಂದ ಆತಂಕಗೊಂಡಿರುವ ಜನರಲ್ಲಿ ವಿಶ್ವಾಸ ತುಂಬುವ ಕೆಲಸ ಮಾಡಬೇಕೇ ಹೊರತು ನಿರಾಶಾವಾದವನ್ನಲ್ಲ ಎಂದು ಅವರು ಇತ್ತೀಚಿಗಿನ ಕಾಕ್ರೋಚ್ ಜನತಾ ಪಾರ್ಟಿ ಅಭಿಯಾನದ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.</p><p>ಇರಾನ್–ಇಸ್ರೇಲ್ ಯುದ್ಧದ ಅತ್ಯಂತ ಗಂಭೀರ ಪರಿಣಾಮದ ಹೊರತು ಭಾರತದ ಆರ್ಥಿಕತೆ ಸ್ಥಿತಿಸ್ಥಾಪಕತ್ವವನ್ನು ಕಾಯ್ದುಕೊಂಡಿದೆ. ಇಂತಹ ಸಂದರ್ಭದಲ್ಲಿ ನಾನು ಮೂರು ಎಫ್ಗಳು ಬಗ್ಗೆ ದೇಶದ ಜನ ಜಾಗರೂಕರಾಗಬೇಕೆಂದು ಮನವಿ ಮಾಡುತ್ತೇನೆ ಎಂದರು.</p><p>ಫ್ಯೂಯಲ್, ಫಾರಿನ್ ಎಕ್ಸ್ಚೇಂಜ್, ಫರ್ಟಿಲೈಜರ್ ಎಂಬ ಮೂರು ಎಫ್ಗಳ ಬಗ್ಗೆ ಜನ ಅತ್ಯಂತ ಜಾಗರೂಕವಾಗಿದ್ದು ಅವುಗಳ ಸಮರ್ಪಕ ಬಳಕೆಯನ್ನು ಅರ್ಥ ಮಾಡಿಕೊಳ್ಳಬೇಕು. ಆ ಮೂಲಕ ಬಿಕ್ಕಟ್ಟಿನ ಸಮಯದಲ್ಲಿ ಜನ ಜವಾಬ್ದಾರಿತನದಿಂದ ವರ್ತಿಸಬೇಕು ಎಂದು ಪರೋಕ್ಷವಾಗಿ ಕರೆ ನೀಡಿದರು. ಈ ಕುರಿತು ಡೆಕ್ಕನ್ ಹೆರಾಲ್ಡ್ ವೆಬ್ಸೈಟ್ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ದೇಶದ ಆರ್ಥಿಕತೆಯ ಬಗ್ಗೆ ಕೆಲವರು ನಕಾರಾತ್ಮಕ, ನಿರಾಶಾದಾಯಕ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ. ಭಯ ಹುಟ್ಟಿಸುವ ಇಂತಹ ಪ್ರಚಾರ ತಂತ್ರಗಳನ್ನು ಭಾರತ ಎಂದಿಗೂ ಸಹಿಸುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಿಡಿಕಾರಿದ್ದಾರೆ.</p><p>ಮುಂಬೈನಲ್ಲಿ ಇಂದು ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ನ (SIDBI) 37ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p><p>ಸದ್ಯದ ಜಾಗತಿಕ ಅನಿಶ್ಚಿತತೆಯ ಕೆಟ್ಟ ಪರಿಣಾಮದ ಹೊರತಾಗಿಯೂ ಭಾರತದ ಆರ್ಥಿಕತೆಯು ಉತ್ತಮವಾಗಿದೆ. ಟೀಕಾಕಾರರು ಇದನ್ನು ಗಮನಿಸುವುದಿಲ್ಲ ಎಂದು ಪ್ರತಿಪಾದಿಸಿದರು.</p><p>ನಮ್ಮ ಮಾತು, ಕೆಲಸಗಳು ಜಾಗತಿಕ ಪರಿಣಾಮಗಳಿಂದ ಆತಂಕಗೊಂಡಿರುವ ಜನರಲ್ಲಿ ವಿಶ್ವಾಸ ತುಂಬುವ ಕೆಲಸ ಮಾಡಬೇಕೇ ಹೊರತು ನಿರಾಶಾವಾದವನ್ನಲ್ಲ ಎಂದು ಅವರು ಇತ್ತೀಚಿಗಿನ ಕಾಕ್ರೋಚ್ ಜನತಾ ಪಾರ್ಟಿ ಅಭಿಯಾನದ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.</p><p>ಇರಾನ್–ಇಸ್ರೇಲ್ ಯುದ್ಧದ ಅತ್ಯಂತ ಗಂಭೀರ ಪರಿಣಾಮದ ಹೊರತು ಭಾರತದ ಆರ್ಥಿಕತೆ ಸ್ಥಿತಿಸ್ಥಾಪಕತ್ವವನ್ನು ಕಾಯ್ದುಕೊಂಡಿದೆ. ಇಂತಹ ಸಂದರ್ಭದಲ್ಲಿ ನಾನು ಮೂರು ಎಫ್ಗಳು ಬಗ್ಗೆ ದೇಶದ ಜನ ಜಾಗರೂಕರಾಗಬೇಕೆಂದು ಮನವಿ ಮಾಡುತ್ತೇನೆ ಎಂದರು.</p><p>ಫ್ಯೂಯಲ್, ಫಾರಿನ್ ಎಕ್ಸ್ಚೇಂಜ್, ಫರ್ಟಿಲೈಜರ್ ಎಂಬ ಮೂರು ಎಫ್ಗಳ ಬಗ್ಗೆ ಜನ ಅತ್ಯಂತ ಜಾಗರೂಕವಾಗಿದ್ದು ಅವುಗಳ ಸಮರ್ಪಕ ಬಳಕೆಯನ್ನು ಅರ್ಥ ಮಾಡಿಕೊಳ್ಳಬೇಕು. ಆ ಮೂಲಕ ಬಿಕ್ಕಟ್ಟಿನ ಸಮಯದಲ್ಲಿ ಜನ ಜವಾಬ್ದಾರಿತನದಿಂದ ವರ್ತಿಸಬೇಕು ಎಂದು ಪರೋಕ್ಷವಾಗಿ ಕರೆ ನೀಡಿದರು. ಈ ಕುರಿತು ಡೆಕ್ಕನ್ ಹೆರಾಲ್ಡ್ ವೆಬ್ಸೈಟ್ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>