<p><strong>ನವದೆಹಲಿ:</strong> ವಿದೇಶಿ ಸಾಂಸ್ಥಿಕ ಹೂಡಿಕೆದಾರರ (ಎಫ್ಪಿಐ) ಪ್ರತಿನಿಧಿಗಳೊಂದಿಗೆ ಶೀಘ್ರವೇ ಮಾತುಕತೆ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.</p>.<p>ಎಫ್ಪಿಐ ಮೇಲೆ ಸರ್ಚಾರ್ಜ್ ವಿಧಿಸಿರುವುದರಿಂದಾಗಿದೇಶದ ಷೇರು ಪೇಟೆಗಳಿಂದ ವಿದೇಶಿ ಬಂಡವಾಳ (ಎಫ್ಪಿಐ) ಹೊರಹರಿವು ಹೆಚ್ಚಾಗುತ್ತಿದೆ. ಹೀಗಾಗಿ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಅತನು ಚಕ್ರವರ್ತಿ ಅವರು ಎಫ್ಪಿಐ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.</p>.<p>‘ಹೂಡಿಕೆದಾರರು ಏನನ್ನು ಹೇಳಲು ಬಯಸುತ್ತಾರೋ ಅದನ್ನು ಕೇಳಲು ನಾವು ಸಿದ್ಧರಿದ್ದೇವೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಹೇಳಿದ್ದಾರೆ.</p>.<p class="Subhead"><strong>ಸರಣಿ ಸಭೆಗೆ ನಿರ್ಧಾರ:</strong> ‘ಕೈಗಾರಿಕೆ ಮತ್ತು ಉದ್ಯಮದ ವಿವಿಧ ವಲಯಗಳ ಪ್ರತಿನಿಧಿಗಳ ಜತೆ ಈ ವಾರ ಸರಣಿ ಸಭೆ ನಡೆಸಿ, ಅವುಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಂಡುಕೊಳ್ಳಲಾಗುವುದು’ ಎಂದು ನಿರ್ಮಲಾ ತಿಳಿಸಿದ್ದಾರೆ.</p>.<p>‘ಕಿರು, ಸಣ್ಣ ಮತ್ತು ಮಧ್ಯಮ ಪ್ರಮಣದ ಉದ್ಯಮಗಳು (ಎಂಎಸ್ಎಂಇ), ವಾಹನ ತಯಾರಿಕೆ, ಷೇರುಪೇಟೆ, ರಿಯಲ್ ಎಸ್ಟೇಟ್, ವಿವಿಧ ವಾಣಿಜ್ಯೋದ್ಯಮ ಸಂಘಟನೆಗಳ ಪ್ರತಿನಿಧಿಗಳ ಜತೆ ಮಾತುಕತೆ ನಡೆಸಲಾಗುವುದು’ ಎಂದು ಅವರು ಹೇಳಿದ್ದಾರೆ.</p>.<p>ಪ್ರಮುಖ ವಲಯಗಳು ಕುಂಠಿತ ಪ್ರಗತಿ ಕಾಣುತ್ತಿವೆ. ಜಾಗತಿಕ ಹಣಕಾಸು ಸಂಸ್ಥೆಗಳು ಭಾರತದ ಆರ್ಥಿಕ ವೃದ್ಧಿ ದರದ ಮುನ್ನೋಟ ತಗ್ಗಿಸಿವೆ. ಷೇರುಪೇಟೆ ಸೂಚ್ಯಂಕ ನಿರಂತರಕುಸಿತ ದಾಖಲಿಸುತ್ತಿದೆ. ಈ ಹಿನ್ನೆಲೆಯಲ್ಲಿ ನಿರ್ಮಲಾ ಅವರ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿದೇಶಿ ಸಾಂಸ್ಥಿಕ ಹೂಡಿಕೆದಾರರ (ಎಫ್ಪಿಐ) ಪ್ರತಿನಿಧಿಗಳೊಂದಿಗೆ ಶೀಘ್ರವೇ ಮಾತುಕತೆ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.</p>.<p>ಎಫ್ಪಿಐ ಮೇಲೆ ಸರ್ಚಾರ್ಜ್ ವಿಧಿಸಿರುವುದರಿಂದಾಗಿದೇಶದ ಷೇರು ಪೇಟೆಗಳಿಂದ ವಿದೇಶಿ ಬಂಡವಾಳ (ಎಫ್ಪಿಐ) ಹೊರಹರಿವು ಹೆಚ್ಚಾಗುತ್ತಿದೆ. ಹೀಗಾಗಿ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಅತನು ಚಕ್ರವರ್ತಿ ಅವರು ಎಫ್ಪಿಐ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.</p>.<p>‘ಹೂಡಿಕೆದಾರರು ಏನನ್ನು ಹೇಳಲು ಬಯಸುತ್ತಾರೋ ಅದನ್ನು ಕೇಳಲು ನಾವು ಸಿದ್ಧರಿದ್ದೇವೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಹೇಳಿದ್ದಾರೆ.</p>.<p class="Subhead"><strong>ಸರಣಿ ಸಭೆಗೆ ನಿರ್ಧಾರ:</strong> ‘ಕೈಗಾರಿಕೆ ಮತ್ತು ಉದ್ಯಮದ ವಿವಿಧ ವಲಯಗಳ ಪ್ರತಿನಿಧಿಗಳ ಜತೆ ಈ ವಾರ ಸರಣಿ ಸಭೆ ನಡೆಸಿ, ಅವುಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಂಡುಕೊಳ್ಳಲಾಗುವುದು’ ಎಂದು ನಿರ್ಮಲಾ ತಿಳಿಸಿದ್ದಾರೆ.</p>.<p>‘ಕಿರು, ಸಣ್ಣ ಮತ್ತು ಮಧ್ಯಮ ಪ್ರಮಣದ ಉದ್ಯಮಗಳು (ಎಂಎಸ್ಎಂಇ), ವಾಹನ ತಯಾರಿಕೆ, ಷೇರುಪೇಟೆ, ರಿಯಲ್ ಎಸ್ಟೇಟ್, ವಿವಿಧ ವಾಣಿಜ್ಯೋದ್ಯಮ ಸಂಘಟನೆಗಳ ಪ್ರತಿನಿಧಿಗಳ ಜತೆ ಮಾತುಕತೆ ನಡೆಸಲಾಗುವುದು’ ಎಂದು ಅವರು ಹೇಳಿದ್ದಾರೆ.</p>.<p>ಪ್ರಮುಖ ವಲಯಗಳು ಕುಂಠಿತ ಪ್ರಗತಿ ಕಾಣುತ್ತಿವೆ. ಜಾಗತಿಕ ಹಣಕಾಸು ಸಂಸ್ಥೆಗಳು ಭಾರತದ ಆರ್ಥಿಕ ವೃದ್ಧಿ ದರದ ಮುನ್ನೋಟ ತಗ್ಗಿಸಿವೆ. ಷೇರುಪೇಟೆ ಸೂಚ್ಯಂಕ ನಿರಂತರಕುಸಿತ ದಾಖಲಿಸುತ್ತಿದೆ. ಈ ಹಿನ್ನೆಲೆಯಲ್ಲಿ ನಿರ್ಮಲಾ ಅವರ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>