<p><strong>ಬೆಂಗಳೂರು</strong>: ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆ ನೀತಾ ಅಂಬಾನಿ ಅವರು ಕಾಶಿ ವಿಶ್ವನಾಥ ದೇಗುಲಕ್ಕೆ ಭೇಟಿ ನೀಡಿ, ತಮ್ಮ ಕಿರಿಯ ಪುತ್ರನ ವಿವಾಹದ ಮೊದಲ ಆಹ್ವಾನ ಪತ್ರಿಕೆಯನ್ನು ಅಲ್ಲಿನ ದೇವರ ಹೆಸರಿಗೆ ನೀಡಿದರು.</p>.<p>ಜುಲೈ 12ರಂದು ಮುಕೇಶ್- ನೀತಾ ಅಂಬಾನಿ ದಂಪತಿಯ ಮಗ ಅನಂತ್ ಅಂಬಾನಿ ಅವರ ವಿವಾಹವು ಉದ್ಯಮಿ ವಿರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಜತೆಗೆ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನಲ್ಲಿನ ಜಿಯೊ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯಲಿದೆ.</p>.<p>‘ಹತ್ತು ವರ್ಷಗಳ ನಂತರ ಕಾಶಿಗೆ ಬಂದಿದ್ದು, ಅನಂತ್- ರಾಧಿಕಾ ಮದುವೆ ಆಹ್ವಾನ ಪತ್ರಿಕೆ ದೇವರಿಗೆ ಸಮರ್ಪಿಸಿದ್ದೇನೆ. ಇದರ ಜತೆಗೆ ಗಂಗಾ ಆರತಿಯಲ್ಲೂ ಪಾಲ್ಗೊಂಡಿದ್ದೇನೆ. ಈ ಕ್ಷೇತ್ರದಲ್ಲಿ ಬಹಳ ಶಕ್ತಿ ಇದೆ. ಇಲ್ಲಿ ಆಗಿರುವಂಥ ಅಭಿವೃದ್ಧಿ ಕಾರ್ಯಗಳನ್ನು ನೋಡುವುದಕ್ಕೆ ಬಹಳ ಸಂತೋಷವಾಗುತ್ತದೆ’ ಎಂದು ಹೇಳಿದರು.</p>.<p>ಈ ವೇಳೆ ಸ್ಥಳೀಯ ಚಾಟ್ ಮಳಿಗೆಗೆ ಭೇಟಿ ನೀಡಿ ಖಾದ್ಯಗಳನ್ನು ಸವಿದ ಅವರು, ಸ್ಥಳೀಯರ ಜತೆಗೆ ಮಾತುಕತೆ ನಡೆಸಿದರು.</p>.<p>ಅನಂತ್- ರಾಧಿಕಾ ವಿವಾಹ ಸಮಾರಂಭವು ಜುಲೈ 12, 13 ಹಾಗೂ 14 ನಡೆಯಲಿದೆ. ಸಾಂಪ್ರದಾಯಿಕ ಮತ್ತು ವಿವಾಹದ ನಂತರದ ಕೆಲವು ಕಾರ್ಯಕ್ರಮಗಳಿಗೆ ಜಗತ್ತಿನ ವಿವಿಧೆಡೆಗಳಿಂದ ಅತಿಥಿಗಳು, ಸೆಲೆಬ್ರಿಟಿಗಳು ಪಾಲ್ಗೊಳ್ಳಲಿದ್ದಾರೆ. ಹಿಂದೂ ವೈದಿಕ ಪದ್ಧತಿಯಲ್ಲಿ ವಿವಾಹ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆ ನೀತಾ ಅಂಬಾನಿ ಅವರು ಕಾಶಿ ವಿಶ್ವನಾಥ ದೇಗುಲಕ್ಕೆ ಭೇಟಿ ನೀಡಿ, ತಮ್ಮ ಕಿರಿಯ ಪುತ್ರನ ವಿವಾಹದ ಮೊದಲ ಆಹ್ವಾನ ಪತ್ರಿಕೆಯನ್ನು ಅಲ್ಲಿನ ದೇವರ ಹೆಸರಿಗೆ ನೀಡಿದರು.</p>.<p>ಜುಲೈ 12ರಂದು ಮುಕೇಶ್- ನೀತಾ ಅಂಬಾನಿ ದಂಪತಿಯ ಮಗ ಅನಂತ್ ಅಂಬಾನಿ ಅವರ ವಿವಾಹವು ಉದ್ಯಮಿ ವಿರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಜತೆಗೆ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನಲ್ಲಿನ ಜಿಯೊ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯಲಿದೆ.</p>.<p>‘ಹತ್ತು ವರ್ಷಗಳ ನಂತರ ಕಾಶಿಗೆ ಬಂದಿದ್ದು, ಅನಂತ್- ರಾಧಿಕಾ ಮದುವೆ ಆಹ್ವಾನ ಪತ್ರಿಕೆ ದೇವರಿಗೆ ಸಮರ್ಪಿಸಿದ್ದೇನೆ. ಇದರ ಜತೆಗೆ ಗಂಗಾ ಆರತಿಯಲ್ಲೂ ಪಾಲ್ಗೊಂಡಿದ್ದೇನೆ. ಈ ಕ್ಷೇತ್ರದಲ್ಲಿ ಬಹಳ ಶಕ್ತಿ ಇದೆ. ಇಲ್ಲಿ ಆಗಿರುವಂಥ ಅಭಿವೃದ್ಧಿ ಕಾರ್ಯಗಳನ್ನು ನೋಡುವುದಕ್ಕೆ ಬಹಳ ಸಂತೋಷವಾಗುತ್ತದೆ’ ಎಂದು ಹೇಳಿದರು.</p>.<p>ಈ ವೇಳೆ ಸ್ಥಳೀಯ ಚಾಟ್ ಮಳಿಗೆಗೆ ಭೇಟಿ ನೀಡಿ ಖಾದ್ಯಗಳನ್ನು ಸವಿದ ಅವರು, ಸ್ಥಳೀಯರ ಜತೆಗೆ ಮಾತುಕತೆ ನಡೆಸಿದರು.</p>.<p>ಅನಂತ್- ರಾಧಿಕಾ ವಿವಾಹ ಸಮಾರಂಭವು ಜುಲೈ 12, 13 ಹಾಗೂ 14 ನಡೆಯಲಿದೆ. ಸಾಂಪ್ರದಾಯಿಕ ಮತ್ತು ವಿವಾಹದ ನಂತರದ ಕೆಲವು ಕಾರ್ಯಕ್ರಮಗಳಿಗೆ ಜಗತ್ತಿನ ವಿವಿಧೆಡೆಗಳಿಂದ ಅತಿಥಿಗಳು, ಸೆಲೆಬ್ರಿಟಿಗಳು ಪಾಲ್ಗೊಳ್ಳಲಿದ್ದಾರೆ. ಹಿಂದೂ ವೈದಿಕ ಪದ್ಧತಿಯಲ್ಲಿ ವಿವಾಹ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>