‘ದೇಶದಲ್ಲಿ ಸಾಮಾಜಿಕ ಭದ್ರತಾ ಚೌಕಟ್ಟು ಸೀಮಿತವಾಗಿದೆ. ಬಹಳಷ್ಟು ಹಿರಿಯ ನಾಗರಿಕರು ಆದಾಯಕ್ಕಾಗಿ ತಮ್ಮ ಉಳಿತಾಯವನ್ನೇ ನಂಬಿಕೊಂಡಿದ್ದಾರೆ. ಆದರೆ, ಬಡ್ಡಿದರದ ಏರಿಳಿತವು ಅವರ ಆದಾಯವನ್ನು ಕಡಿತಗೊಳಿಸುತ್ತಿದೆ. ಕೆಲವೊಮ್ಮೆ ಅವರು ಜೀವನ ನಿರ್ವಹಣೆಗೂ ಸಮಸ್ಯೆಯಾಗುತ್ತಿದೆ. ಹಾಗಾಗಿ, ಹಿರಿಯ ನಾಗರಿಕರ ಬಡ್ಡಿದರದಲ್ಲಿ ನಿರ್ದಿಷ್ಟ ಮಿತಿಯನ್ನು ಕಾಯ್ದುಕೊಳ್ಳುವ ಅಗತ್ಯವಿದೆ ಎಂದು ಹೇಳಿದೆ.