<p><strong>ಅಹಮದಾಬಾದ್:</strong> ‘ದೇಶದಲ್ಲಿ ವಿದ್ಯುತ್ ಚಾಲಿತ (ಇವಿ) ವಾಹನಗಳ ಅಳವಡಿಕೆಗೆ ಉತ್ತಮ ಕಾರ್ಯ ಯೋಜನೆ ಹೊಂದಿದ್ದೇವೆ’ ಎಂದು ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ತಿಳಿಸಿದ್ದಾರೆ.</p>.<p>‘ವಿದ್ಯುತ್ ಚಾಲಿತ ದ್ವಿಚಕ್ರ, ತ್ರಿಚಕ್ರ ಮತ್ತು ಸಾರ್ವಜನಿಕ ಸಾರಿಗೆ ಹಾಗೂ ಬ್ಯಾಟರಿಗಳ ತಯಾರಿಕೆಗೆಆದ್ಯತೆ ನೀಡಬೇಕಿದೆ’ ಎಂದು ಹೇಳಿದರು.</p>.<p>ಸುಸ್ಥಿರ ಚಲನಶೀಲತೆ ವಿಷಯದ ಕುರಿತು ನಡೆದ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೊದಲ ಹಂತದಲ್ಲಿ ದ್ವಿಚಕ್ರ, ತ್ರಿಚಕ್ರ, ಬಸ್ಗಳ ಶೇ 80ರಷ್ಟು ಬಿಡಿಭಾಗಗಳ ದೇಶಿ ತಯಾರಿಕೆಗೆ ಗಮನ ನೀಡಬೇಕು ಎಂದಿದ್ದಾರೆ.</p>.<p>‘ಸ್ಥಳೀಯವಾಗಿ ಬ್ಯಾಟರಿ ತಯಾರಿಕೆಗೆ ಉತ್ತೇಜನ ನೀಡ ಬೇಕಿದೆ.ವಿದ್ಯುತ್ ವಾಹನಗಳ ಒಟ್ಟಾರೆ ವೆಚ್ಚದಲ್ಲಿ ಶೇ 40ರಷ್ಟು ಬ್ಯಾಟರಿಗೆ ತಗಲುತ್ತದೆ. ಹೀಗಾಗಿದೇಶದಲ್ಲಿ ಬ್ಯಾಟರಿ ತಯಾರಿಸುವವರಿಗೆ ಹೆಚ್ಚಿನ ಮಾರುಕಟ್ಟೆ ಅವಕಾಶಗಳು ತೆರೆದುಕೊಳ್ಳಲಿವೆ.</p>.<p>‘ಪರಿಸರ ಸ್ನೇಹಿ ಸಾರಿಗೆ ಬಳಕೆಯಿಂದ ದೇಶವು ಕಚ್ಚಾ ತೈಲದ ಆಮದಿನ ಮೇಲೆ ಮಾಡುವ ವೆಚ್ಚ ಕಡಿಮೆಯಾಗಲಿದೆ. ಇದರಿಂದಾಗಿ ದೇಶದ ವ್ಯಾಪಾರ ಕೊರತೆ ಅಂತರವೂ ತಗ್ಗಲಿದೆ’ ಎಂದು ಕಾಂತ್ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ‘ದೇಶದಲ್ಲಿ ವಿದ್ಯುತ್ ಚಾಲಿತ (ಇವಿ) ವಾಹನಗಳ ಅಳವಡಿಕೆಗೆ ಉತ್ತಮ ಕಾರ್ಯ ಯೋಜನೆ ಹೊಂದಿದ್ದೇವೆ’ ಎಂದು ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ತಿಳಿಸಿದ್ದಾರೆ.</p>.<p>‘ವಿದ್ಯುತ್ ಚಾಲಿತ ದ್ವಿಚಕ್ರ, ತ್ರಿಚಕ್ರ ಮತ್ತು ಸಾರ್ವಜನಿಕ ಸಾರಿಗೆ ಹಾಗೂ ಬ್ಯಾಟರಿಗಳ ತಯಾರಿಕೆಗೆಆದ್ಯತೆ ನೀಡಬೇಕಿದೆ’ ಎಂದು ಹೇಳಿದರು.</p>.<p>ಸುಸ್ಥಿರ ಚಲನಶೀಲತೆ ವಿಷಯದ ಕುರಿತು ನಡೆದ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೊದಲ ಹಂತದಲ್ಲಿ ದ್ವಿಚಕ್ರ, ತ್ರಿಚಕ್ರ, ಬಸ್ಗಳ ಶೇ 80ರಷ್ಟು ಬಿಡಿಭಾಗಗಳ ದೇಶಿ ತಯಾರಿಕೆಗೆ ಗಮನ ನೀಡಬೇಕು ಎಂದಿದ್ದಾರೆ.</p>.<p>‘ಸ್ಥಳೀಯವಾಗಿ ಬ್ಯಾಟರಿ ತಯಾರಿಕೆಗೆ ಉತ್ತೇಜನ ನೀಡ ಬೇಕಿದೆ.ವಿದ್ಯುತ್ ವಾಹನಗಳ ಒಟ್ಟಾರೆ ವೆಚ್ಚದಲ್ಲಿ ಶೇ 40ರಷ್ಟು ಬ್ಯಾಟರಿಗೆ ತಗಲುತ್ತದೆ. ಹೀಗಾಗಿದೇಶದಲ್ಲಿ ಬ್ಯಾಟರಿ ತಯಾರಿಸುವವರಿಗೆ ಹೆಚ್ಚಿನ ಮಾರುಕಟ್ಟೆ ಅವಕಾಶಗಳು ತೆರೆದುಕೊಳ್ಳಲಿವೆ.</p>.<p>‘ಪರಿಸರ ಸ್ನೇಹಿ ಸಾರಿಗೆ ಬಳಕೆಯಿಂದ ದೇಶವು ಕಚ್ಚಾ ತೈಲದ ಆಮದಿನ ಮೇಲೆ ಮಾಡುವ ವೆಚ್ಚ ಕಡಿಮೆಯಾಗಲಿದೆ. ಇದರಿಂದಾಗಿ ದೇಶದ ವ್ಯಾಪಾರ ಕೊರತೆ ಅಂತರವೂ ತಗ್ಗಲಿದೆ’ ಎಂದು ಕಾಂತ್ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>