ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾದಿ ಆತ್ಮನಿರ್ಭರ ಮಿಷನ್ | ಅಗರಬತ್ತಿ: ಸ್ವಾವಲಂಬನೆಯ ಯೋಜನೆಗೆ ಅಸ್ತು

Last Updated 2 ಆಗಸ್ಟ್ 2020, 17:45 IST
ಅಕ್ಷರ ಗಾತ್ರ

ನವದೆಹಲಿ: ಸ್ಥಳೀಯವಾಗಿ ಸಿದ್ಧಪಡಿಸಲಾದ ಯಂತ್ರಗಳನ್ನು ಬಳಸಿ, ತರಬೇತಿ ಪಡೆದ ಕೆಲಸಗಾರರ ನೆರವು ಪಡೆದು ಅಗರಬತ್ತಿ ಉತ್ಪಾದನೆಯಲ್ಲಿ ಭಾರತವನ್ನು ಸ್ವಾವಲಂಬಿ ಆಗಿಸುವ ಯೋಜನೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದ್ದಾರೆ. ಉದ್ಯೋಗ ಸೃಷ್ಟಿಸುವ ಈ ಯೋಜನೆಯ ಪ್ರಸ್ತಾವನೆಯನ್ನು ಖಾದಿ ಮತ್ತು ಗ್ರಾಮೀಣ ಕೈಗಾರಿಕೆ ಆಯೋಗವು ಸಿದ್ಧಪಡಿಸಿತ್ತು.

ಈ ಯೋಜನೆಗೆ ‘ಖಾದಿ ಆತ್ಮನಿರ್ಭರ ಮಿಷನ್’ ಎಂದು ಹೆಸರಿಡಲಾಗಿದೆ. ನಿರುದ್ಯೋಗಿಗಳಿಗೆ ಮತ್ತು ವಲಸೆ ಕಾರ್ಮಿಕರಿಗೆ ದೇಶದ ವಿವಿಧ ಭಾಗಗಳಲ್ಲಿ ಉದ್ಯೋಗ ಸೃಷ್ಟಿಸುವ, ಕರಕುಶಲಕರ್ಮಿಗಳಿಗೆ ಮಾರ್ಗದರ್ಶನ ನೀಡುವ ಹಾಗೂ ಸ್ಥಳೀಯ ಅಗರಬತ್ತಿ ಉದ್ಯಮಕ್ಕೆ ಬೆಂಬಲ ನೀಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.

ದೇಶದಲ್ಲಿ ಈಗ ಪ್ರತಿದಿನ ಅಂದಾಜು 1,490 ಮೆಟ್ರಿಕ್ ಟನ್ ಅಗರಬತ್ತಿ ಬಳಸಲಾಗುತ್ತಿದೆ. ಆದರೆ, ದೇಶದಲ್ಲಿ ಉತ್ಪಾದನೆ ಆಗುವ ಅಗರಬತ್ತಿಯ ಪ್ರಮಾಣ ದಿನವೊಂದಕ್ಕೆ 670 ಮೆಟ್ರಿಕ್ ಟನ್ ಮಾತ್ರ. ಕೊರತೆ ಪ್ರಮಾಣವನ್ನು ಚೀನಾ ಮತ್ತು ವಿಯೆಟ್ನಾಂನಿಂದ ಆಮದು ಮಾಡಿಕೊಳ್ಳಲಾಗುತ್ತಿದೆ.

ಈ ಯೋಜನೆಯನ್ನು ಆರಂಭಿಕ ಹಂತದಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗುತ್ತದೆ. ‘ಅಗರಬತ್ತಿ ಉತ್ಪಾದನೆಯಲ್ಲಿ ಬಳಕೆಯಾಗುವ ಎಲ್ಲ ಯಂತ್ರಗಳನ್ನು ವಿಯೆಟ್ನಾಂನಿಂದ ಆಮದು ಮಾಡಿಕೊಳ್ಳಲಾಗುತ್ತಿದೆ’ ಎಂದು ಆಯೋಗದ ಅಧ್ಯಕ್ಷ ವಿನಯ್ ಕುಮಾರ್ ಸಕ್ಸೇನಾ ತಿಳಿಸಿದರು.ಭಾರತದಲ್ಲಿ ಸಿದ್ಧಗೊಳ್ಳುವ ಯಂತ್ರಗಳನ್ನು ಮಾತ್ರ ಈ ಯೋಜನೆಯ ಅಡಿ ತರಿಸಿಕೊಳ್ಳಲು ಆಯೋಗ ತೀರ್ಮಾನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT