<p class="title"><strong>ನವದೆಹಲಿ: </strong>ಸ್ಥಳೀಯವಾಗಿ ಸಿದ್ಧಪಡಿಸಲಾದ ಯಂತ್ರಗಳನ್ನು ಬಳಸಿ, ತರಬೇತಿ ಪಡೆದ ಕೆಲಸಗಾರರ ನೆರವು ಪಡೆದು ಅಗರಬತ್ತಿ ಉತ್ಪಾದನೆಯಲ್ಲಿ ಭಾರತವನ್ನು ಸ್ವಾವಲಂಬಿ ಆಗಿಸುವ ಯೋಜನೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದ್ದಾರೆ. ಉದ್ಯೋಗ ಸೃಷ್ಟಿಸುವ ಈ ಯೋಜನೆಯ ಪ್ರಸ್ತಾವನೆಯನ್ನು ಖಾದಿ ಮತ್ತು ಗ್ರಾಮೀಣ ಕೈಗಾರಿಕೆ ಆಯೋಗವು ಸಿದ್ಧಪಡಿಸಿತ್ತು.</p>.<p class="title">ಈ ಯೋಜನೆಗೆ ‘ಖಾದಿ ಆತ್ಮನಿರ್ಭರ ಮಿಷನ್’ ಎಂದು ಹೆಸರಿಡಲಾಗಿದೆ. ನಿರುದ್ಯೋಗಿಗಳಿಗೆ ಮತ್ತು ವಲಸೆ ಕಾರ್ಮಿಕರಿಗೆ ದೇಶದ ವಿವಿಧ ಭಾಗಗಳಲ್ಲಿ ಉದ್ಯೋಗ ಸೃಷ್ಟಿಸುವ, ಕರಕುಶಲಕರ್ಮಿಗಳಿಗೆ ಮಾರ್ಗದರ್ಶನ ನೀಡುವ ಹಾಗೂ ಸ್ಥಳೀಯ ಅಗರಬತ್ತಿ ಉದ್ಯಮಕ್ಕೆ ಬೆಂಬಲ ನೀಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.</p>.<p class="title">ದೇಶದಲ್ಲಿ ಈಗ ಪ್ರತಿದಿನ ಅಂದಾಜು 1,490 ಮೆಟ್ರಿಕ್ ಟನ್ ಅಗರಬತ್ತಿ ಬಳಸಲಾಗುತ್ತಿದೆ. ಆದರೆ, ದೇಶದಲ್ಲಿ ಉತ್ಪಾದನೆ ಆಗುವ ಅಗರಬತ್ತಿಯ ಪ್ರಮಾಣ ದಿನವೊಂದಕ್ಕೆ 670 ಮೆಟ್ರಿಕ್ ಟನ್ ಮಾತ್ರ. ಕೊರತೆ ಪ್ರಮಾಣವನ್ನು ಚೀನಾ ಮತ್ತು ವಿಯೆಟ್ನಾಂನಿಂದ ಆಮದು ಮಾಡಿಕೊಳ್ಳಲಾಗುತ್ತಿದೆ.</p>.<p class="title">ಈ ಯೋಜನೆಯನ್ನು ಆರಂಭಿಕ ಹಂತದಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗುತ್ತದೆ. ‘ಅಗರಬತ್ತಿ ಉತ್ಪಾದನೆಯಲ್ಲಿ ಬಳಕೆಯಾಗುವ ಎಲ್ಲ ಯಂತ್ರಗಳನ್ನು ವಿಯೆಟ್ನಾಂನಿಂದ ಆಮದು ಮಾಡಿಕೊಳ್ಳಲಾಗುತ್ತಿದೆ’ ಎಂದು ಆಯೋಗದ ಅಧ್ಯಕ್ಷ ವಿನಯ್ ಕುಮಾರ್ ಸಕ್ಸೇನಾ ತಿಳಿಸಿದರು.ಭಾರತದಲ್ಲಿ ಸಿದ್ಧಗೊಳ್ಳುವ ಯಂತ್ರಗಳನ್ನು ಮಾತ್ರ ಈ ಯೋಜನೆಯ ಅಡಿ ತರಿಸಿಕೊಳ್ಳಲು ಆಯೋಗ ತೀರ್ಮಾನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಸ್ಥಳೀಯವಾಗಿ ಸಿದ್ಧಪಡಿಸಲಾದ ಯಂತ್ರಗಳನ್ನು ಬಳಸಿ, ತರಬೇತಿ ಪಡೆದ ಕೆಲಸಗಾರರ ನೆರವು ಪಡೆದು ಅಗರಬತ್ತಿ ಉತ್ಪಾದನೆಯಲ್ಲಿ ಭಾರತವನ್ನು ಸ್ವಾವಲಂಬಿ ಆಗಿಸುವ ಯೋಜನೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದ್ದಾರೆ. ಉದ್ಯೋಗ ಸೃಷ್ಟಿಸುವ ಈ ಯೋಜನೆಯ ಪ್ರಸ್ತಾವನೆಯನ್ನು ಖಾದಿ ಮತ್ತು ಗ್ರಾಮೀಣ ಕೈಗಾರಿಕೆ ಆಯೋಗವು ಸಿದ್ಧಪಡಿಸಿತ್ತು.</p>.<p class="title">ಈ ಯೋಜನೆಗೆ ‘ಖಾದಿ ಆತ್ಮನಿರ್ಭರ ಮಿಷನ್’ ಎಂದು ಹೆಸರಿಡಲಾಗಿದೆ. ನಿರುದ್ಯೋಗಿಗಳಿಗೆ ಮತ್ತು ವಲಸೆ ಕಾರ್ಮಿಕರಿಗೆ ದೇಶದ ವಿವಿಧ ಭಾಗಗಳಲ್ಲಿ ಉದ್ಯೋಗ ಸೃಷ್ಟಿಸುವ, ಕರಕುಶಲಕರ್ಮಿಗಳಿಗೆ ಮಾರ್ಗದರ್ಶನ ನೀಡುವ ಹಾಗೂ ಸ್ಥಳೀಯ ಅಗರಬತ್ತಿ ಉದ್ಯಮಕ್ಕೆ ಬೆಂಬಲ ನೀಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.</p>.<p class="title">ದೇಶದಲ್ಲಿ ಈಗ ಪ್ರತಿದಿನ ಅಂದಾಜು 1,490 ಮೆಟ್ರಿಕ್ ಟನ್ ಅಗರಬತ್ತಿ ಬಳಸಲಾಗುತ್ತಿದೆ. ಆದರೆ, ದೇಶದಲ್ಲಿ ಉತ್ಪಾದನೆ ಆಗುವ ಅಗರಬತ್ತಿಯ ಪ್ರಮಾಣ ದಿನವೊಂದಕ್ಕೆ 670 ಮೆಟ್ರಿಕ್ ಟನ್ ಮಾತ್ರ. ಕೊರತೆ ಪ್ರಮಾಣವನ್ನು ಚೀನಾ ಮತ್ತು ವಿಯೆಟ್ನಾಂನಿಂದ ಆಮದು ಮಾಡಿಕೊಳ್ಳಲಾಗುತ್ತಿದೆ.</p>.<p class="title">ಈ ಯೋಜನೆಯನ್ನು ಆರಂಭಿಕ ಹಂತದಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗುತ್ತದೆ. ‘ಅಗರಬತ್ತಿ ಉತ್ಪಾದನೆಯಲ್ಲಿ ಬಳಕೆಯಾಗುವ ಎಲ್ಲ ಯಂತ್ರಗಳನ್ನು ವಿಯೆಟ್ನಾಂನಿಂದ ಆಮದು ಮಾಡಿಕೊಳ್ಳಲಾಗುತ್ತಿದೆ’ ಎಂದು ಆಯೋಗದ ಅಧ್ಯಕ್ಷ ವಿನಯ್ ಕುಮಾರ್ ಸಕ್ಸೇನಾ ತಿಳಿಸಿದರು.ಭಾರತದಲ್ಲಿ ಸಿದ್ಧಗೊಳ್ಳುವ ಯಂತ್ರಗಳನ್ನು ಮಾತ್ರ ಈ ಯೋಜನೆಯ ಅಡಿ ತರಿಸಿಕೊಳ್ಳಲು ಆಯೋಗ ತೀರ್ಮಾನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>