ಜಗತ್ತೇ ಹೂಡಿಕೆಗಾಗಿ ಭಾರತದತ್ತ ಮುಖಮಾಡಿದೆ. ಇಂತಹ ಸಂದರ್ಭದಲ್ಲಿ ಕೋವಿಡ್ ಸೃಷ್ಟಿಸಿರುವ ಬಿಕ್ಕಟ್ಟನ್ನು ಒಂದು ಅವಕಾಶವನ್ನಾಗಿ ಪರಿವರ್ತಿಸಿಕೊಳ್ಳಬೇಕಾಗಿದೆ. ಹೆದ್ದಾರಿ, ವಿದ್ಯುತ್, ಸಾರಿಗೆ, ಜಲಸಂಪನ್ಮೂಲ, ಸಂವಹನ ಮತ್ತು ಇತರೆ ವಲಯಗಳಲ್ಲಿ ಹೂಡಿಕೆಗೆ ಹೆಚ್ಚಿನ ಅವಕಾಶಗಳಿವೆ. ಮೂಲಸೌಕರ್ಯ ವಲಯಕ್ಕೆ ಉತ್ತೇಜನ ದೊರೆಯದ ಹೊರತು ಕೈಗಾರಿಕಾ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.