ನವದೆಹಲಿ: ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್ಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಕುರಿತು ಕೇಂದ್ರ ಸಚಿವ ಸಂಪುಟವು ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿಗೆ ಮಂಗಳವಾರ ತಿಳಿಸಿದ್ದಾರೆ.
2021–22ನೇ ಸಾಲಿನ ಬಜೆಟ್ನಲ್ಲಿ ಬ್ಯಾಂಕ್ ಖಾಸಗೀಕರಣದ ಘೋಷಣೆ ಮಾಡಲಾಗಿತ್ತು.
ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳ ಖಾಸಗೀಕರಣಕ್ಕೆ ಸಂಬಂಧಿಸಿದ ಮಸೂದೆಯು ಸಂಸತ್ತಿನ ಹಾಲಿ ಅಧಿವೇಶನದಲ್ಲಿ ಮಂಡನೆ ಆಗುವ ಸಾಧ್ಯತೆ ಇದೆ. ಅಧಿವೇಶನವು ಗುರುವಾರದವರೆಗೆ ನಡೆಯಲಿದೆ.