<p><strong>ಬೆಂಗಳೂರು</strong>: ಗ್ರಾಹಕರಿಗೆ ಯಾವುದೇ ತೊಂದರೆಯಾಗದಂತೆ ನಿರಂತರವಾಗಿ ಅಡುಗೆ ಅನಿಲ ಸಿಲಿಂಡರ್ ಪೂರೈಸಲಾಗುವುದು ಎಂದು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ ಐಒಸಿಎಲ್, ಬಿಪಿಸಿಎಲ್ ಮತ್ತು ಎಚ್ಪಿಸಿಎಲ್ ತಿಳಿಸಿವೆ.</p>.<p>ದಕ್ಷಿಣ ಭಾಗದ ಎಲ್ಪಿಜಿ ಸಾರಿಗೆ ಮಾಲೀಕರ ಸಂಘದೊಟ್ಟಿಗೆ ಸಂಯೋಜಿತಗೊಂಡಿರುವ ಸಾಗಣೆದಾರರು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಪೂರೈಕೆಗೆ ತೊಂದರೆಯಾಗುವುದಿಲ್ಲ. ಕಂಪನಿಗಳಿಗೆ ಸೇರಿದ ಸ್ಥಾವರಗಳಲ್ಲಿ ಎಲ್ಪಿಜಿ ದಾಸ್ತಾನು ಹೆಚ್ಚಿದೆ. ವಿತರಕರು ಎಂದಿನಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿವೆ. </p>.<p>ಸರ್ಕಾರದ ಮಾರ್ಗಸೂಚಿ ಅನ್ವಯ ಪಾರದರ್ಶಕವಾಗಿ ಟೆಂಡರ್ ಕರಾರು ಸಿದ್ಧಪಡಿಸಲಾಗಿದೆ. ಸಾರ್ವಜನಿಕರ ಸುರಕ್ಷತೆಗಾಗಿ ಇದನ್ನು ಜಾರಿಗೆ ತರಲಾಗಿದೆ. ಹೊಸ ಟೆಂಡರ್ ನಿಯಮಗಳು ಎಲ್ಪಿಜಿ ಸಾಗಣೆಯ ಸುರಕ್ಷತೆ ಮತ್ತು ದಕ್ಷತೆ ಹೆಚ್ಚಿಸುತ್ತವೆ ಎಂದು ಹೇಳಿವೆ.</p>.<p>ಈ ಪ್ರಯತ್ನದ ಹೊರತಾಗಿಯೂ ಸಾಗಣೆದಾರರ ಒಂದು ವಿಭಾಗವು ಮುಷ್ಕರಕ್ಕೆ ಕರೆ ನೀಡಿದೆ. ಪ್ರಾಥಮಿಕವಾಗಿ ಸುರಕ್ಷತಾ ಕ್ರಮಗಳ ಉಲ್ಲಂಘನೆ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದ ದಂಡದ ಷರತ್ತು ಹಿಂಪಡೆಯುವಂತೆ ಒತ್ತಾಯಿಸುತ್ತಿದೆ ಎಂದು ತಿಳಿಸಿವೆ.</p>.<p>ಮುಷ್ಕರದಿಂದ ಸಾರ್ವಜನಿಕರಿಗೆ ಅನನುಕೂಲವಾಗಲಿದೆ. ಹಾಗಾಗಿ, ಮುಷ್ಕರ ಹಿಂಪಡೆಯಬೇಕು ಎಂದು ದಕ್ಷಿಣ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕರು ಕೋರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗ್ರಾಹಕರಿಗೆ ಯಾವುದೇ ತೊಂದರೆಯಾಗದಂತೆ ನಿರಂತರವಾಗಿ ಅಡುಗೆ ಅನಿಲ ಸಿಲಿಂಡರ್ ಪೂರೈಸಲಾಗುವುದು ಎಂದು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ ಐಒಸಿಎಲ್, ಬಿಪಿಸಿಎಲ್ ಮತ್ತು ಎಚ್ಪಿಸಿಎಲ್ ತಿಳಿಸಿವೆ.</p>.<p>ದಕ್ಷಿಣ ಭಾಗದ ಎಲ್ಪಿಜಿ ಸಾರಿಗೆ ಮಾಲೀಕರ ಸಂಘದೊಟ್ಟಿಗೆ ಸಂಯೋಜಿತಗೊಂಡಿರುವ ಸಾಗಣೆದಾರರು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಪೂರೈಕೆಗೆ ತೊಂದರೆಯಾಗುವುದಿಲ್ಲ. ಕಂಪನಿಗಳಿಗೆ ಸೇರಿದ ಸ್ಥಾವರಗಳಲ್ಲಿ ಎಲ್ಪಿಜಿ ದಾಸ್ತಾನು ಹೆಚ್ಚಿದೆ. ವಿತರಕರು ಎಂದಿನಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿವೆ. </p>.<p>ಸರ್ಕಾರದ ಮಾರ್ಗಸೂಚಿ ಅನ್ವಯ ಪಾರದರ್ಶಕವಾಗಿ ಟೆಂಡರ್ ಕರಾರು ಸಿದ್ಧಪಡಿಸಲಾಗಿದೆ. ಸಾರ್ವಜನಿಕರ ಸುರಕ್ಷತೆಗಾಗಿ ಇದನ್ನು ಜಾರಿಗೆ ತರಲಾಗಿದೆ. ಹೊಸ ಟೆಂಡರ್ ನಿಯಮಗಳು ಎಲ್ಪಿಜಿ ಸಾಗಣೆಯ ಸುರಕ್ಷತೆ ಮತ್ತು ದಕ್ಷತೆ ಹೆಚ್ಚಿಸುತ್ತವೆ ಎಂದು ಹೇಳಿವೆ.</p>.<p>ಈ ಪ್ರಯತ್ನದ ಹೊರತಾಗಿಯೂ ಸಾಗಣೆದಾರರ ಒಂದು ವಿಭಾಗವು ಮುಷ್ಕರಕ್ಕೆ ಕರೆ ನೀಡಿದೆ. ಪ್ರಾಥಮಿಕವಾಗಿ ಸುರಕ್ಷತಾ ಕ್ರಮಗಳ ಉಲ್ಲಂಘನೆ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದ ದಂಡದ ಷರತ್ತು ಹಿಂಪಡೆಯುವಂತೆ ಒತ್ತಾಯಿಸುತ್ತಿದೆ ಎಂದು ತಿಳಿಸಿವೆ.</p>.<p>ಮುಷ್ಕರದಿಂದ ಸಾರ್ವಜನಿಕರಿಗೆ ಅನನುಕೂಲವಾಗಲಿದೆ. ಹಾಗಾಗಿ, ಮುಷ್ಕರ ಹಿಂಪಡೆಯಬೇಕು ಎಂದು ದಕ್ಷಿಣ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕರು ಕೋರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>