‘ಪಶ್ಚಿಮ ಬಂಗಾಳಕ್ಕೆ ಜಿಎಸ್ಟಿ ಪರಿಹಾರ ಮೊತ್ತ ಬಾಕಿ ಉಳಿದಿದೆ’ ಎಂಬ ತೃಣಮೂಲ ಕಾಂಗ್ರೆಸ್ ಸದಸ್ಯ ಸಾಕೇತ್ ಗೋಖಲೆ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ರಾಜ್ಯಗಳಿಗೆ ಬಾಕಿ ಮೊತ್ತ ಪಾವತಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ, ಎಷ್ಟು ಮೊತ್ತ ಸಿಗಬೇಕು ಎನ್ನುವ ಕುರಿತು ಆಯಾ ರಾಜ್ಯಗಳು ಅಕೌಂಟೆಂಟ್ ಜನರಲ್ (ಎ.ಜಿ) ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯ’ ಎಂದು ಹೇಳಿದರು.