<p><strong>ಹೈದರಾಬಾದ್:</strong> ತೆಲಂಗಾಣಕ್ಕೆ ಕಿಂಗ್ಫಿಷರ್ ಹಾಗೂ ಹೈನೆಕೆನ್ ಬಿಯರ್ ಪೂರೈಕೆ ಸ್ಥಗಿತಗೊಳಿಸಲು ಯುನೈಟೆಡ್ ಬ್ರೇವರಿಸ್ ಕಂಪನಿ (ಯುಬಿಎಲ್) ನಿರ್ಧರಿಸಿದೆ.</p><p>ಕಳೆದ ಎರಡು ವರ್ಷದಿಂದಲೂ ರಾಜ್ಯದಲ್ಲಿ ಬಿಯರ್ನ ಮೂಲ ದರ ಏರಿಕೆ ಮಾಡುವಂತೆ ಸರ್ಕಾರಕ್ಕೆ ಕೋರಲಾಗುತ್ತಿದೆ. ಆದರೆ, ಯಾವುದೇ ಕ್ರಮಕೈಗೊಂಡಿಲ್ಲ. ಇದರಿಂದ ತೀವ್ರ ನಷ್ಟ ಅನುಭವಿಸುವಂತಾಗಿದೆ. ಪ್ರತಿ ಬಾಟಲಿಯನ್ನು ನಷ್ಟದಲ್ಲಿಯೇ ಮಾರಾಟ ಮಾಡುವಂತಾಗಿದೆ ಎಂದು ಕಂಪನಿ ತಿಳಿಸಿದೆ.</p><p>ಅಲ್ಲದೆ, ಹಳೆಯ ಬಾಕಿ ಮೊತ್ತ ಕೂಡ ಪಾವತಿಸಿಲ್ಲ. ಹಾಗಾಗಿ, ತೆಲಂಗಾಣ ಪಾನೀಯ ನಿಗಮಕ್ಕೆ (ಟಿಜಿಬಿಸಿಎಲ್) ಬಿಯರ್ ಪೂರೈಕೆ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದೆ.</p><p>ಬ್ರೇವರಿಸ್ ಅಸೋಸಿಯೇಷನ್ ಆಫ್ ಇಂಡಿಯಾ (ಬಿಎಐ) ಕೂಡ ಮದ್ಯ ತಯಾರಿಕಾ ವಲಯವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದಿದೆ. ಹಣದುಬ್ಬರದ ಏರಿಕೆಗೆ ಅನುಗುಣವಾಗಿ ಬೆಲೆ ಏರಿಕೆ ಮಾಡುವಂತೆ ಮನದಟ್ಟು ಮಾಡಿಕೊಟ್ಟಿದೆ. ಆದರೆ, ಇಲ್ಲಿಯವರೆಗೂ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎಂದು ಹೇಳಿದೆ.</p><p>ಕಂಪನಿಯು ಮದ್ಯ ಪೂರೈಕೆ ಮತ್ತು ಮಾರಾಟದಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ ₹24,500 ಕೋಟಿ ಆದಾಯ ತಂದುಕೊಡುತ್ತಿದೆ. ಆರ್ಥಿಕ ಒತ್ತಡ ಪರಿಸ್ಥಿತಿಯ ನಡುವೆಯೂ ಗ್ರಾಹಕರಿಗೆ ಯಾವುದೇ ತೊಂದರೆಯಾಗದಂತೆ ಮದ್ಯ ಪೂರೈಸಲಾಗಿದೆ ಎಂದು ಹೇಳಿದೆ.</p><p>ಸರ್ಕಾರವು ಕೂಡಲೇ ಮದ್ಯದ ಬೆಲೆ ಏರಿಕೆಗೆ ಕ್ರಮಕೈಗೊಳ್ಳಬೇಕು ಎಂದು ಮದ್ಯ ತಯಾರಕರು ಒತ್ತಾಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ತೆಲಂಗಾಣಕ್ಕೆ ಕಿಂಗ್ಫಿಷರ್ ಹಾಗೂ ಹೈನೆಕೆನ್ ಬಿಯರ್ ಪೂರೈಕೆ ಸ್ಥಗಿತಗೊಳಿಸಲು ಯುನೈಟೆಡ್ ಬ್ರೇವರಿಸ್ ಕಂಪನಿ (ಯುಬಿಎಲ್) ನಿರ್ಧರಿಸಿದೆ.</p><p>ಕಳೆದ ಎರಡು ವರ್ಷದಿಂದಲೂ ರಾಜ್ಯದಲ್ಲಿ ಬಿಯರ್ನ ಮೂಲ ದರ ಏರಿಕೆ ಮಾಡುವಂತೆ ಸರ್ಕಾರಕ್ಕೆ ಕೋರಲಾಗುತ್ತಿದೆ. ಆದರೆ, ಯಾವುದೇ ಕ್ರಮಕೈಗೊಂಡಿಲ್ಲ. ಇದರಿಂದ ತೀವ್ರ ನಷ್ಟ ಅನುಭವಿಸುವಂತಾಗಿದೆ. ಪ್ರತಿ ಬಾಟಲಿಯನ್ನು ನಷ್ಟದಲ್ಲಿಯೇ ಮಾರಾಟ ಮಾಡುವಂತಾಗಿದೆ ಎಂದು ಕಂಪನಿ ತಿಳಿಸಿದೆ.</p><p>ಅಲ್ಲದೆ, ಹಳೆಯ ಬಾಕಿ ಮೊತ್ತ ಕೂಡ ಪಾವತಿಸಿಲ್ಲ. ಹಾಗಾಗಿ, ತೆಲಂಗಾಣ ಪಾನೀಯ ನಿಗಮಕ್ಕೆ (ಟಿಜಿಬಿಸಿಎಲ್) ಬಿಯರ್ ಪೂರೈಕೆ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದೆ.</p><p>ಬ್ರೇವರಿಸ್ ಅಸೋಸಿಯೇಷನ್ ಆಫ್ ಇಂಡಿಯಾ (ಬಿಎಐ) ಕೂಡ ಮದ್ಯ ತಯಾರಿಕಾ ವಲಯವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದಿದೆ. ಹಣದುಬ್ಬರದ ಏರಿಕೆಗೆ ಅನುಗುಣವಾಗಿ ಬೆಲೆ ಏರಿಕೆ ಮಾಡುವಂತೆ ಮನದಟ್ಟು ಮಾಡಿಕೊಟ್ಟಿದೆ. ಆದರೆ, ಇಲ್ಲಿಯವರೆಗೂ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎಂದು ಹೇಳಿದೆ.</p><p>ಕಂಪನಿಯು ಮದ್ಯ ಪೂರೈಕೆ ಮತ್ತು ಮಾರಾಟದಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ ₹24,500 ಕೋಟಿ ಆದಾಯ ತಂದುಕೊಡುತ್ತಿದೆ. ಆರ್ಥಿಕ ಒತ್ತಡ ಪರಿಸ್ಥಿತಿಯ ನಡುವೆಯೂ ಗ್ರಾಹಕರಿಗೆ ಯಾವುದೇ ತೊಂದರೆಯಾಗದಂತೆ ಮದ್ಯ ಪೂರೈಸಲಾಗಿದೆ ಎಂದು ಹೇಳಿದೆ.</p><p>ಸರ್ಕಾರವು ಕೂಡಲೇ ಮದ್ಯದ ಬೆಲೆ ಏರಿಕೆಗೆ ಕ್ರಮಕೈಗೊಳ್ಳಬೇಕು ಎಂದು ಮದ್ಯ ತಯಾರಕರು ಒತ್ತಾಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>