‘ಹಾಲಿ ಇರುವ ಕರೆನ್ಸಿ ನೋಟುಗಳಲ್ಲಿ ಕೆಲವು ಬದಲಾವಣೆಗಳನ್ನು ತರುವ ಬಗ್ಗೆ ಆರ್ಬಿಐ ಆಲೋಚನೆ ನಡೆಸುತ್ತಿದ್ದು, ಮಹತ್ಮ ಗಾಂಧೀಜಿ ಚಿತ್ರಕ್ಕೆ ಬದಲಾಗಿ ರವೀಂದ್ರನಾಥ ಟ್ಯಾಗೋರ್ ಮತ್ತು ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಚಿತ್ರವನ್ನು ಬಳಸುವ ಬಗ್ಗೆ ಆರ್ಬಿಐ ಪರಿಶೀಲನೆ ನಡೆಸುತ್ತಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ, ಅಂತಹ ಯಾವ ಪ್ರಸ್ತಾವವೂ ರಿಸರ್ವ್ ಬ್ಯಾಂಕ್ ಮುಂದೆ ಇಲ್ಲ’ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.